Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ

Latest

ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ

Public TV
Last updated: December 20, 2023 9:16 pm
Public TV
Share
2 Min Read
Krishna Byre Gowda
SHARE

ನವದೆಹಲಿ: ರಾಜ್ಯಕ್ಕೆ ಬರ ಪರಿಹಾರ (Drought Relief Fund) ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ ಅಜುರ್ನ್ ಮುಂಡಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ರಾಜ್ಯ ಈ ವರ್ಷ ಭೀಕರ ಬರಕ್ಕೆ ತುತ್ತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಸಮಯದಲ್ಲಿ ಅವರಿಗೆ ಪರಿಹಾರ ಧನ ನೀಡಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರ ಶೀಘ್ರವಾಗಿ ಕರ್ನಾಟಕದ ಬರ ಪರಿಹಾರ ಮನವಿಯ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅಮಿತ್ ಶಾ ಅವರು ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಸಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕಸರತ್ತು; 2-3 ದಿನದಲ್ಲಿ ಹೈಕಮಾಂಡ್ ತೀರ್ಮಾನ‌ ಮಾಡಲಿದೆ: ಸಿದ್ದರಾಮಯ್ಯ

Krishna Byre Gowda 1

ರಾಜ್ಯದಲ್ಲಿರುವ ಸಣ್ಣ ರೈತರ ಸಂಖ್ಯೆಯ ನಿಖರ ಮಾಹಿತಿಯನ್ನು ಅಮಿತ್ ಶಾ ಅವರಿಗೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಿಡುಗಡೆಯಾಗಲಿರುವ ಬರ ಪರಿಹಾರ ಹಣದ ಮೊತ್ತ ಸಣ್ಣ ರೈತರ ಸಂಖ್ಯೆಗೆ ಅನುಗುಣವಾಗಿರುತ್ತದೆ. ರಾಜ್ಯದ ಸಣ್ಣ ರೈತರ ಸಂಖ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಬಳಿ ವಾಸ್ತವ ಅಂಕಿಅಂಶಗಳಿಲ್ಲ. ಕೇಂದ್ರ ಸರ್ಕಾರದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿರುವ ಸಣ್ಣ ರೈತರ ಸಂಖ್ಯೆ ಕೇವಲ 44% ರಷ್ಟು ಮಾತ್ರ. ಬರ ಪರಿಹಾರ ಬಿಡುಗಡೆ ಸಂದರ್ಭದಲ್ಲಿ ಈ ಅಂಕಿಅಂಶವನ್ನು ಪರಿಗಣಿಸಿದರೆ ರಾಜ್ಯಕ್ಕೆ ನಷ್ಟವಾಗುತ್ತದೆ. ರಾಜ್ಯದ ಸಣ್ಣ ರೈತರ ವಾಸ್ತವ ಸಂಖ್ಯೆ 70% ರಿಂದ 75% ಇದೆ. ಈ ಬಗ್ಗೆ ರೈತರ ಆಧಾರ್ ಲಿಂಕ್ ಜೊತೆಗಿನ ನಿಖರ ಅಂಕಿಅಂಶವನ್ನು ನೀಡಲಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವ ಸಂದರ್ಭದಲ್ಲಿ ಈ ಅಂಕಿಅಂಶವನ್ನು ಪರಿಗಣಿಸುವಂತೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ, ಕೊಬ್ಬರಿ ಬೆಳೆಯನ್ನು ಕೇಂದ್ರ ಸರ್ಕಾರವೇ ನ್ಯಾಫೆಡ್ ಮುಖಾಂತರ ಖರೀದಿ ಮಾಡಬೇಕು. ರಾಜ್ಯದಲ್ಲಿ ಕೊಬ್ಬರಿ ಬೆಳೆಯುವ ರೈತರು ಅನೇಕರಿದ್ದಾರೆ. ಈಗ ಕೊಬ್ಬರಿ ಬೆಲೆ ತೀವ್ರ ಕುಸಿತ ಕಂಡಿದೆ. ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ನ್ಯಾಫೆಡ್ ಮುಖಾಂತರ ಮಾರುಕಟ್ಟೆಯಿಂದ ನೇರವಾಗಿ ಕೊಬ್ಬರಿ ಖರೀದಿಸಬೇಕು. ಈ ಪ್ರಕ್ರಿಯೆ ತಕ್ಷಣ ಆರಂಭವಾಗಬೇಕು. ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ಮುಂದಾದರೆ, ಬೆಲೆ ತಂತಾನೆ ನಿಯಂತ್ರಣವಾಗುತ್ತದೆ ಎಂದು ಮನವಿ ಮಾಡಿದ್ದಾರೆ.

ಬರ ಪರಿಹಾರದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಕೃಷಿ ಸಚಿವರೂ ಸಹ ಸದಸ್ಯರಾಗಿದ್ದು, ಕರ್ನಾಟಕಕ್ಕೆ ಶೀಘ್ರ ಪರಿಹಾರ ಹಣ ಬಿಡುಗಡೆ ಮಾಡುವ ಸಂಬಂಧ ಸಭೆಯಲ್ಲಿ ಮಾತನಾಡಲು ಕೋರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನೇ ನೇರವಾಗಿ ಅರ್ಜುನ್ ಮುಂಡಾ ಅವರಿಗೆ ನೀಡಿದ್ದೇನೆ. ರೈತರ ಸಂಕಷ್ಟವನ್ನು ಬಗೆಹರಿಸಲು ಮನವಿ ಮಾಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ

TAGGED:Amit ShahDrought relief fundkrishna byre gowdapoliticssiddaramaiahಅಮಿತ್ ಶಾಕೃಷ್ಣಬೈರೇಗೌಡಬರ ಪರಿಹಾರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
9 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
40 minutes ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
41 minutes ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
2 hours ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
2 hours ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?