Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

Latest

ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

Public TV
Last updated: February 5, 2024 8:53 am
Public TV
Share
3 Min Read
mathura krishna temple
SHARE

ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.

ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ.

ಪ್ರಶ್ನೆ ಏನಿತ್ತು?
1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು (British) ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.

Mathura mosque 4

ಎಎಸ್‌ಐ ಉತ್ತರ ಏನಿತ್ತು?
1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ (Uttar Pradesh) ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ ಕೃಷ್ಣ ಭೂಮಿಯನ್ನು 37ನೇ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದೆ ಕತ್ರಾ ದಿಬ್ಬದ ಮೇಲೆ ಕೇಶವದೇವ್‌ ದೇವಸ್ಥಾನವಿತ್ತು. ಅದನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಉತ್ತರ ನೀಡಿದೆ.

Krishna Janmabhoomi in Mathura was destroyed by Aurangzeb ASI shares historical record from 1920 in response to RTI

ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಪ್ರತಿಕ್ರಿಯಿಸಿ, ರಾಜ್ಯಪತ್ರದಲ್ಲಿ ಉಲ್ಲೇಖವಾದ ಹಾಗೂ ಈಗ ಆರ್‌ಟಿಐ ಅಡಿ ನೀಡಿದ ಪ್ರಶ್ನೆಗೆ ಎಎಸ್‌ಐ ನೀಡಿದ ಮಾಹಿತಿಯನ್ನೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಸಾಕ್ಷ್ಯವಾಗಿ ಸೇರಿಸುತ್ತೇವೆ ಎಂದು ಹೇಳಿದ್ದಾರೆ.

ಮಥುರಾದ ಕೇಶವದೇವ ದೇವಾಲಯವನ್ನು ಸುಮಾರು 5000 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ನಂಬಲಾಗುತ್ತಿದೆ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳ. ಶ್ರೀಕೃಷ್ಣನ ಮೊಮ್ಮಕ್ಕಳಾದ ವ್ರಜ ಮತ್ತು ವ್ರಜನಾಭ ರಾಜ ಪರೀಕ್ಷಿತನ ಸಹಾಯದಿಂದ ಮಥುರಾದಲ್ಲಿ ಕೇಶದೇವ ದೇವಾಲಯವನ್ನು ನಿರ್ಮಿಸಿದರು ಎಂಬ ಕಥೆಯಿದೆ.

ಮೊಘಲ್ ರಾಜ ಔರಂಗಜೇಬ್‌ (Aurangzeb) 1670ರಲ್ಲಿ ಕೇಶವದೇವನ ದೇವಾಲಯವನ್ನು ಕೆಡವಲು ಆದೇಶಿಸಿದ್ದ. ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ನಿರ್ಮಿಸಲಾದ ಮಸೀದಿಯಲ್ಲಿ ಔರಂಗಜೇಬ ಸ್ವತಃ ನಮಾಜ್ ಮಾಡಿದ್ದ.

MATHURA

ಏನಿದು ವಿವಾದ?
ಮಥುರಾದ ವಿವಾದವು 13.37 ಎಕರೆ ಭೂಮಿಯ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದೆ. ಶ್ರೀ ಕೃಷ್ಣ ಜನ್ಮಭೂಮಿ 10.9 ಎಕರೆ ಜಮೀನು ಹೊಂದಿದ್ದರೆ, ಶಾಹಿ ಈದ್ಗಾ ಮಸೀದಿ ಎರಡೂವರೆ ಎಕರೆ ಜಮೀನು ಹೊಂದಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37 ಎಕರೆ ಸಂಪೂರ್ಣ ಭೂಮಿಯನ್ನು ಡಿ-ಫಾಕ್ಟೋ ಮಾಲೀಕ ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ವಕೀಲರಾದ ರಂಜನಾ ಅಗ್ನಿಹೋತ್ರಿ ಸೇರಿ ಇತರ ಆರು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಅನೇಕ ಮಂದಿ ಅರ್ಜಿ ಸಲ್ಲಿಸಿದ್ದರು. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಶಾಹಿ ಈದ್ಗಾ ಮಸೀದಿ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಶ್ರೀಕೃಷ್ಣ ಜನ್ಮಭೂಮಿ ಸೇವಾ ಸಂಸ್ಥಾನವನ್ನು ಪ್ರಕರಣದಲ್ಲಿ ಭಾಗಿ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ತ್ತರ ಪ್ರದೇಶದ ಮಥುರಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.

ಅರ್ಜಿಯಲ್ಲಿ ಏನಿತ್ತು?
ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

TAGGED:asiAurangzebKrishna JanmabhoomiMathurartitempleಆರ್‍ಟಿಐಔರಂಗಜೇಬ್ಕೃಷ್ಣ ದೇವಸ್ಥಾನಪುರಾತತ್ವ ಇಲಾಖೆಮಥುರಾ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
11 minutes ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
23 minutes ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
2 hours ago
Mandya Exam Result
Districts

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು

Public TV
By Public TV
2 hours ago
air india flight bomb threat
Latest

ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
2 hours ago
chicken momos
Crime

ಫ್ರೀ ಮೋಮೋಸ್ ಆಮಿಷ – ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?