Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

Latest

ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

Public TV
Last updated: February 5, 2024 8:53 am
Public TV
Share
3 Min Read
mathura krishna temple
SHARE

ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.

ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ.

ಪ್ರಶ್ನೆ ಏನಿತ್ತು?
1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು (British) ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.

Mathura mosque 4

ಎಎಸ್‌ಐ ಉತ್ತರ ಏನಿತ್ತು?
1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ (Uttar Pradesh) ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ ಕೃಷ್ಣ ಭೂಮಿಯನ್ನು 37ನೇ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದೆ ಕತ್ರಾ ದಿಬ್ಬದ ಮೇಲೆ ಕೇಶವದೇವ್‌ ದೇವಸ್ಥಾನವಿತ್ತು. ಅದನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಉತ್ತರ ನೀಡಿದೆ.

Krishna Janmabhoomi in Mathura was destroyed by Aurangzeb ASI shares historical record from 1920 in response to RTI

ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಪ್ರತಿಕ್ರಿಯಿಸಿ, ರಾಜ್ಯಪತ್ರದಲ್ಲಿ ಉಲ್ಲೇಖವಾದ ಹಾಗೂ ಈಗ ಆರ್‌ಟಿಐ ಅಡಿ ನೀಡಿದ ಪ್ರಶ್ನೆಗೆ ಎಎಸ್‌ಐ ನೀಡಿದ ಮಾಹಿತಿಯನ್ನೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಸಾಕ್ಷ್ಯವಾಗಿ ಸೇರಿಸುತ್ತೇವೆ ಎಂದು ಹೇಳಿದ್ದಾರೆ.

ಮಥುರಾದ ಕೇಶವದೇವ ದೇವಾಲಯವನ್ನು ಸುಮಾರು 5000 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ನಂಬಲಾಗುತ್ತಿದೆ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳ. ಶ್ರೀಕೃಷ್ಣನ ಮೊಮ್ಮಕ್ಕಳಾದ ವ್ರಜ ಮತ್ತು ವ್ರಜನಾಭ ರಾಜ ಪರೀಕ್ಷಿತನ ಸಹಾಯದಿಂದ ಮಥುರಾದಲ್ಲಿ ಕೇಶದೇವ ದೇವಾಲಯವನ್ನು ನಿರ್ಮಿಸಿದರು ಎಂಬ ಕಥೆಯಿದೆ.

ಮೊಘಲ್ ರಾಜ ಔರಂಗಜೇಬ್‌ (Aurangzeb) 1670ರಲ್ಲಿ ಕೇಶವದೇವನ ದೇವಾಲಯವನ್ನು ಕೆಡವಲು ಆದೇಶಿಸಿದ್ದ. ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ನಿರ್ಮಿಸಲಾದ ಮಸೀದಿಯಲ್ಲಿ ಔರಂಗಜೇಬ ಸ್ವತಃ ನಮಾಜ್ ಮಾಡಿದ್ದ.

MATHURA

ಏನಿದು ವಿವಾದ?
ಮಥುರಾದ ವಿವಾದವು 13.37 ಎಕರೆ ಭೂಮಿಯ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದೆ. ಶ್ರೀ ಕೃಷ್ಣ ಜನ್ಮಭೂಮಿ 10.9 ಎಕರೆ ಜಮೀನು ಹೊಂದಿದ್ದರೆ, ಶಾಹಿ ಈದ್ಗಾ ಮಸೀದಿ ಎರಡೂವರೆ ಎಕರೆ ಜಮೀನು ಹೊಂದಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37 ಎಕರೆ ಸಂಪೂರ್ಣ ಭೂಮಿಯನ್ನು ಡಿ-ಫಾಕ್ಟೋ ಮಾಲೀಕ ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ವಕೀಲರಾದ ರಂಜನಾ ಅಗ್ನಿಹೋತ್ರಿ ಸೇರಿ ಇತರ ಆರು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಅನೇಕ ಮಂದಿ ಅರ್ಜಿ ಸಲ್ಲಿಸಿದ್ದರು. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಶಾಹಿ ಈದ್ಗಾ ಮಸೀದಿ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಶ್ರೀಕೃಷ್ಣ ಜನ್ಮಭೂಮಿ ಸೇವಾ ಸಂಸ್ಥಾನವನ್ನು ಪ್ರಕರಣದಲ್ಲಿ ಭಾಗಿ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ತ್ತರ ಪ್ರದೇಶದ ಮಥುರಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.

ಅರ್ಜಿಯಲ್ಲಿ ಏನಿತ್ತು?
ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

TAGGED:asiAurangzebKrishna JanmabhoomiMathurartitempleಆರ್‍ಟಿಐಔರಂಗಜೇಬ್ಕೃಷ್ಣ ದೇವಸ್ಥಾನಪುರಾತತ್ವ ಇಲಾಖೆಮಥುರಾ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 24-02-2026

Public TV
By Public TV
6 minutes ago
Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
8 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
8 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
9 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
9 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?