Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ನೂ 10 ಜನ್ಮ ಬಂದ್ರೂ ಎಚ್‍ಡಿಕೆ ಸಿಎಂ ಆಗಲ್ಲ: ಸಚಿವ ಈಶ್ವರಪ್ಪ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಇನ್ನೂ 10 ಜನ್ಮ ಬಂದ್ರೂ ಎಚ್‍ಡಿಕೆ ಸಿಎಂ ಆಗಲ್ಲ: ಸಚಿವ ಈಶ್ವರಪ್ಪ ಲೇವಡಿ

Dakshina Kannada

ಇನ್ನೂ 10 ಜನ್ಮ ಬಂದ್ರೂ ಎಚ್‍ಡಿಕೆ ಸಿಎಂ ಆಗಲ್ಲ: ಸಚಿವ ಈಶ್ವರಪ್ಪ ಲೇವಡಿ

Public TV
Last updated: January 10, 2020 6:14 pm
Public TV
Share
3 Min Read
K. S. Eshwarappa HDK
SHARE

ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕೆಲ ವಿಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿದ್ದಾರೆ. ಜೆಡಿಎಸ್ ಪಕ್ಷ ಇನ್ನು ಬದುಕಿದೆ, ರಾಜಕೀಯದಲ್ಲಿ ಇದ್ದೀನಿ ಎಂದು ತೋರಿಸುವ ಸಲುವಾಗಿ ಈ ವಿಡಿಯೋಗಳನ್ನು ಅವರು ಬಿಡುಗಡೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಸಚಿವ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದರು. ಅವರು ಎಷ್ಟೇ ವಿಡಿಯೋ ರಿಲೀಸ್ ಮಾಡಿದರೂ, ಇನ್ನೂ ಹತ್ತು ಜನ್ಮ ಬಂದರೂ ಮತ್ತೆ ಮುಖ್ಯಮಂತ್ರಿಗಳಾಗಲು ಆಗುವುದಿಲ್ಲ ಎಂದರು.

MNG 3 1

ಜೆಡಿಎಸ್ ಪಕ್ಷದವರು ಅಲ್ಲೊಂದು, ಇಲ್ಲೊಂದು ಶಾಸಕರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಹ ಬಿಜೆಪಿ ಸೇರಲಿದ್ದಾರೆ. ಅವರ ಪಕ್ಷ ಜೀವಂತವಾಗಿದೆ ಎಂದು ತೋರಿಸಲು ವಿಡಿಯೋ ರಿಲೀಸ್ ಮಾಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವಿನಾಃ ಕಾರಣ ಆರೋಪ ಮಾಡುತ್ತಿದ್ದಾರೆ. ಗೂಂಡಾಗಳು ಮಂಗಳೂರಿನಲ್ಲಿ ಸಂಚು ನಡೆಸಿ ಗಲಭೆ ನಡೆಸಿದರು ಎಂಬುದು ಎಲ್ಲಾ ಮಾಧ್ಯಮಗಳಲ್ಲಿ ಬಂದಿದೆ. ಟಿವಿಗಳಲ್ಲಿ, ಪತ್ರಿಕೆಗಳಲ್ಲಿ ಬಳಸಿದ್ದನ್ನು ಕುಮಾರಸ್ವಾಮಿ ನಂಬುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೆ ರಾಜ್ಯದ ಜನ ಮಾತ್ರ ಈ ಘಟನೆಯನ್ನು ನೋಡಿದ್ದಾರೆ ಎಂದರು.

ಮಂಗಳೂರಿನಲ್ಲಿ ವ್ಯವಸ್ಥಿತ ಸಂಚು ನಡೆಸಿ ಗಲಭೆ ನಡೆಸಿದ ಕುತಂತ್ರಿಗಳ ಬಗ್ಗೆ ಎಚ್‍ಡಿಕೆ ಮಾತನಾಡುತ್ತಿದ್ದಾರೆ. ಈ ಕುತಂತ್ರ ರಾಜಕಾರಣವನ್ನು ರಾಜ್ಯದ ಜನ ನಂಬಲ್ಲ. ನೀವು ಎಷ್ಟೇ ಆರೋಪ ಮಾಡಿದರೂ, ಆರೋಪವನ್ನು ನಾವು ಒಪ್ಪುವುದಿಲ್ಲ. ಗಲಭೆಯಲ್ಲಿ ವ್ಯವಸ್ಥಿತ ಸಂಚು ನಡೆದಿರುವ ಬಗ್ಗೆ ನ್ಯಾಯಾಂಗ ತನಿಖೆಯ ನಂತರ ತಿಳಿಯಲಿದೆ. ಆ ಬಳಿಕ ಗಲಭೆಯಲ್ಲಿ ಇನ್ನು ಯಾರು ಇದ್ದಾರೆ ಎಂದು ಬಹಿರಂಗಗೊಳ್ಳಲಿದೆ ಎಂದು ತಿಳಿಸಿದರು.

SMG KS ESHWARAPPA

ಗ್ರಾಮೀಣ ಸಮಸ್ಯೆ ಗಮನಕ್ಕೆ ತನ್ನಿ: ನಗರದ ರಂಗಾಯಣ ಸಭಾಂಗಣದಲ್ಲಿ ಪಂಚಾಯತ್‍ರಾಜ್ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಗಳ ಅನುಷ್ಟಾನದಲ್ಲಿನ ತೊಂದರೆಗಳ ಬಗ್ಗೆ ನೇರವಾಗಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.

ರೈತರ ಅಭಿವೃದ್ಧಿಯಾದರೆ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಲು ಸಾಧ್ಯ. ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುವುದು. ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಅನುಷ್ಟಾನದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾದುದು. ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಪಿಡಿಒಗಳು ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ನೇರವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ಸರಿಪಡಿಸಬೇಕು. ಪಿಡಿಒಗಳ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

MNG 12

ಎಲ್ಲಾ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ ಕೇವಲ 19 ಪಂಚಾಯತ್ ವ್ಯಾಪ್ತಿಯಲ್ಲಿ ವಿಲೇವಾರಿ ಘಟಕಕ್ಕೆ ಜಮೀನು ಗುರುತಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಜಮೀನು ಗುರುತಿಸಿ ಘಟಕವನ್ನು ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಬಗ್ಗೆ ಪ್ರತಿ ಗ್ರಾಮ ಪಂಚಾಯತ್ ಹೊರಗೆ ಬೋರ್ಡ್ ಹಾಕಿ ಮಾಹಿತಿ ಪ್ರಕಟಿಸಬೇಕು. ಹೊಸದಾಗಿ ಘಟಕ ಅಗತ್ಯ ಇರುವ ಕಡೆಗಳಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಬಜೆಟ್‍ನಲ್ಲಿ ಶೌಚಾಲಯ ನಿರ್ಮಾಣದ ಸಹಾಯಧನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು. ಇದೇ ರೀತಿ ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೂ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಉದ್ಯೋಗ ಖಾತ್ರಿ ಯೋಜನೆ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯ ವೀರಭದ್ರಪ್ಪ ಪೂಜಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್, ಕೇಶವ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

TAGGED:Gram Panchayathd kumaraswamyks eshwarappaMangalorePublic TVshivamoggavideoಎಚ್‍ಡಿ ಕುಮಾರಸ್ವಾಮಿಕೆಎಸ್ ಈಶ್ವರಪ್ಪಗ್ರಾಮ ಪಂಚಾಯತ್ಪಬ್ಲಿಕ್ ಟಿವಿಮಂಗಳೂರುವಿಡಿಯೋಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

01 21
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-1

Public TV
By Public TV
3 hours ago
Rajeshwari Gayakwad
Cricket

ಕನ್ನಡತಿ ರಾಜೇಶ್ವರಿ ಮ್ಯಾಜಿಕ್‌, 45 ರನ್‌ಗಳ ಜಯ – ಕೊನೆಯಲ್ಲಿದ್ದ ಗುಜರಾತ್‌ 2ನೇ ಸ್ಥಾನಕ್ಕೆ ಜಂಪ್‌

Public TV
By Public TV
3 hours ago
02 18
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-2

Public TV
By Public TV
3 hours ago
03 15
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-3

Public TV
By Public TV
3 hours ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

Public TV
By Public TV
3 hours ago
let recruitment case nia court sentences key accused to 10 years ri
Crime

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣ – ಶಿರಸಿಯ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?