ಶಿವಮೊಗ್ಗ: ಸಿದ್ದರಾಮೋತ್ಸವದಂತಹ ನೂರಾರು ಕಾರ್ಯಕ್ರಮಗಳನ್ನು ನಾವು ಮಾಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಸಂತೋಷ ಪಡುವವರು ಇದ್ದಾರೆ. ಹೊಟ್ಟೆ ಉರಿದುಕೊಳ್ಳುವವರು ಇದ್ದಾರೆ. ಆದರೆ ನಾವು ಇಂತಹ ನೂರು ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ನವರು ಒಟ್ಟಾಗಿ ಕಾರ್ಯಕ್ರಮ ಮಾಡಿದ್ದೇವೆ ಅಂದರು. ಅವರ ಜೀವನದಲ್ಲೇ ಒಟ್ಟಾಗಿ ಕಾರ್ಯಕ್ರಮ ಮಾಡಿಯೇ ಗೊತ್ತಿಲ್ಲ. ಈ ಕಾರ್ಯಕ್ರಮದಿಂದ ಕಾಂಗ್ರೆಸ್ ಆಂತರಿಕ ಗೊಂದಲ ಸಾಕಷ್ಟು ಹೆಚ್ಚಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಎರಡು ಹೆಚ್ಚುವರಿ SDRF ತಂಡ ರಚನೆ: ಬೊಮ್ಮಾಯಿ ಸೂಚನೆ
ರಾಜ್ಯದಲ್ಲಿ ಕಾಂಗ್ರೆಸ್ನವರು ಅಧಿಕಾರ ನಡೆಸಿದ್ದರು. ಆಗ ರಾಜ್ಯದ ಜನ ಕಾಂಗ್ರೆಸ್ನವರಿಗೆ ನೀವು ಅಯೋಗ್ಯರು ಇದ್ದೀರಾ. ಬಡವರು, ದಲಿತರ ಪರ ಇಲ್ಲ ಅಂತಾ ಕಿತ್ತು ಬಿಸಾಕಿದ್ದಾರೆ. ಆದರೆ ಕಾಂಗ್ರೆಸ್ನವರು ಮತ್ತೆ ಅಧಿಕಾರದ ಕನಸು ಕಾಣುತ್ತಿದ್ದಾರೆ. ಮುಂದೆಯೂ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಪಡೆಯಲಿದ್ದು, ಬಿಜೆಪಿಯವರೇ ಮುಖ್ಯಮಂತ್ರಿ ಆಗುತ್ತಾರೆ ಎಂದರು. ಇದನ್ನೂ ಓದಿ: ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ- ವರ್ಕ್ಫ್ ಬೋರ್ಡ್ ಅರ್ಜಿ ವಜಾಗೊಳಿಸಿದ ಬಿಬಿಎಂಪಿ