Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಕ್ರಿಮಿನಲ್, ಅದ್ರಲ್ಲಿ ಯಾವುದೇ ಅನುಮಾನ ಬೇಡ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಸಿದ್ದರಾಮಯ್ಯ ಕ್ರಿಮಿನಲ್, ಅದ್ರಲ್ಲಿ ಯಾವುದೇ ಅನುಮಾನ ಬೇಡ: ಈಶ್ವರಪ್ಪ

Bagalkot

ಸಿದ್ದರಾಮಯ್ಯ ಕ್ರಿಮಿನಲ್, ಅದ್ರಲ್ಲಿ ಯಾವುದೇ ಅನುಮಾನ ಬೇಡ: ಈಶ್ವರಪ್ಪ

Public TV
Last updated: March 9, 2019 4:40 pm
Public TV
Share
3 Min Read
Eshwarappa Siddu
SHARE

– ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲು

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಕ್ರಿಮಿನಲ್, ಅದರಲ್ಲಿ ಯಾವುದೇ ಅನುಮಾನ ಬೇಡ. ಅವರಿಗೆ ಕುಂಕುಮದ ಮಹತ್ವ ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಲಕ ಇಟ್ಟುಕೊಳ್ಳುತ್ತಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಎಲ್ಲರೂ ತಿಲಕ ಇಟ್ಟುಕೊಳ್ಳುತ್ತಾರೆ. ಹಾಗಾದರೆ ಅವರೆಲ್ಲರೂ ಕ್ರಿಮಿನಲ್‍ಗಳಾ? ಕುಂಕುಮ ಇಟ್ಟುಕೊಳ್ಳುವವರನ್ನು ಕ್ರಿಮಿನಲ್ಸ್ ಗೆ ಹೋಲಿಸಬಾರದು. ಕುಂಕುಮಕ್ಕೆ ಪಾವಿತ್ರ್ಯತೆ ಇದೆ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

HDK HDD Revanna

ದೇವೇಗೌಡ ಕುಟುಂಬದ ವಿರುದ್ಧ ವ್ಯಂಗ್ಯ:
ಕುಟುಂಬ ರಾಜಕಾರಣ ವಿಚಾರವಾಗಿ ಮಾತನಾಡಿದ ಅವರು, ದೇವೇಗೌಡ ಅವರನ್ನು ಒಕ್ಕಲಿಗ ನಾಯಕರೆಂದು ಒಪ್ಪಿಕೊಂಡಿದ್ದೆವು. ಆದರೆ ಈಗ ಕುಟುಂಬ ರಾಜಕಾರಣ ನಡೆಸಿದ್ದಾರೆ. ನನಗೆ 28 ಜನ ಮಕ್ಕಲಿಲ್ಲವೆಂದು ದೇವೇಗೌಡರು ಕೊರಗುತ್ತಿದ್ದಾರೆ. ಒಂದು ವೇಳೆ ಅಷ್ಟು ಜನ ಮಕ್ಕಳಿದ್ದಿದ್ದರೆ ರಾಜ್ಯದ 28 ಕ್ಷೇತ್ರಗಳಿಗೂ ತಮ್ಮ ಮಕ್ಕಳನ್ನೇ ನಿಲ್ಲಿಸುತ್ತಿದ್ದರು. ಇಲ್ಲವೆ 14 ಮಕ್ಕಳಿದ್ದರೆ 14 ಜನ ಸೊಸೆಯಂದಿರನ್ನು ಸೇರಿಸಿ ಎಲ್ಲಾ ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ತಮ್ಮ ಅಧಿಕಾರ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಕೊಲೆಗಡಕರಿಗೆ ರಕ್ಷಣೆ ಕೊಟ್ಟಿದ್ದರು. ಸಿಎಂ ಸ್ಥಾನ ಹೋದ ಮೇಲೆ ಕನಸಿನಲ್ಲಿಯೂ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಎಲ್ಲಿ ನೋಡಿದರೂ ಅವರಿಗೆ ಕುಂಕುಮ ಕಾಣುತ್ತಿದೆ ಎಂದು ಕುಟುಕಿದರು.

Sumalatha Minister Revanna 1

ರೇವಣ್ಣ ಕ್ಷಮೆ ಕೇಳಬೇಕು:
ಸುಮಲತಾ ಅಂಬರೀಶ್ ಅವರು ನನಗೆ ಸಹೋದರಿ ಸಮಾನ. ಅವರಿಗೆ ಅಪಮಾನ ಮಾಡಿರುವ ಲೋಕೋಪಯೋಗಿ ಸಚಿವ ರೇವಣ್ಣ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ತೆನೆ ಹೊತ್ತ ಮಹಿಳೆಯ ಚಿಹ್ನೆ ಇಟ್ಟುಕೊಳ್ಳುವ ಹಕ್ಕು ಜೆಡಿಎಸ್‍ಗಿಲ್ಲ. ಸುಮಲತಾ ಅವರು ಬಿಜೆಪಿ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ. ಆದರೆ ಪಕ್ಷಕ್ಕೆ ಬಂದರೆ ಸ್ವಾಗತ. ಅಭ್ಯರ್ಥಿ ಯಾರೆಂದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ:
ಈಶ್ವರಪ್ಪ ಬಾಗಲಕೋಟೆಯಿಂದ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ನಿಲ್ಲಿಸಿ ಸೋಲಿಸುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ವಿರುದ್ಧ ಗರಂ ಆದರು. ಲೋಕಸಭಾ ಚುನಾವಣೆ ಸ್ಪರ್ಧೆಯಲ್ಲಿ ನನಗೆ ಆಸಕ್ತಿ ಇಲ್ಲ. ಬಾಗಲಕೋಟೆ ಬಿಜೆಪಿ ಭದ್ರಕೋಟೆ. ತಾಕತ್ ಇದ್ದರೆ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ನಿಲ್ಲಲಿ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ನಾನು ಕೂಡ ಕೊಡುತ್ತೇನೆ. ಬಾದಾಮಿಯಲ್ಲಿ ಮತ್ತೆ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ. ನಾನು ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತೇನೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಗೆದ್ದರೆ ನಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ. ಒಂದು ವೇಳೆ ನಾನು ಶಿವಮೊಗ್ಗದಲ್ಲಿ ಗೆದ್ದರೆ ಅವರು ರಾಜಕೀಯ ಸನ್ಯಾಸ ಪಡೆಯುತ್ತಾರಾ ಎಂದು ಸವಾಲು ಹಾಕಿದರು.

siddaramaiah 1

ರಾಹುಲ್‍ಗೆ ಕಿಚಾಯಿಸಿದ್ರು:
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂದಲ್ಲೆಲ್ಲ ಕಾಂಗ್ರೆಸ್ ನೆಗೆದು ಬಿದ್ದಿದೆ. ರಾಹುಲ್ ದಯವಿಟ್ಟು ಬಾಗಲಕೋಟೆಗೂ ಬರಲಿ. ಇಲ್ಲಿ ನಾನು ಉಸ್ತುವಾರಿ ಇದ್ದೇನೆ. ರಾಹುಲ್ ಗಾಂಧಿ ಅವರು ಬಾಗಲಕೋಟೆಗೆ ಬಂದು ಹೋದರೆ ಬಿಜೆಪಿ ಮತ್ತೆ ಗೆಲ್ಲಲು ಅನುಕೂಲ ಆಗುತ್ತದೆ ಎಂದು ಕಿಚಾಯಿಸಿದರು.

ಸಿದ್ದರಾಮಯ್ಯ ಬಾದಾಮಿ ಜನರ ಕೈಗೆ ಸಿಗುತ್ತಿಲ್ಲ. ಅವರ ಕಚೇರಿಗೆ ಯಾವಾಗಲೂ ಬೀಗ ಹಾಕಿರುತ್ತದೆ. ಕಚೇರಿಯಲ್ಲಿ ಒಬ್ಬ ಪಿಎನನ್ನು ಇಟ್ಟು ಜನರ ಸಮಸ್ಯೆಗಳ ಅರ್ಜಿ ಸ್ವೀಕರಿಸಬೇಕಿತ್ತು. ಆದರೆ ಮಾಜಿ ಸಿಎಂ ಕಚೇರಿಗೆ ಬಂದಾಗ ಮಾತ್ರ ಬೀಗ ತೆಗೆಯುತ್ತಿದ್ದಾರೆ ಎಂದು ಆರೋಪಿಸಿದರು.

siddu rahul

ದೇಶದಲ್ಲಿ ಕಾಂಗ್ರೆಸ್ ನಿರ್ಣಾಮವಾಗಿದೆ. 2019ರ ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ಣಾಮವಾಗುತ್ತದೆ. ದೋಸ್ತಿ ಸರ್ಕಾರವೂ ಉಳಿಯಲ್ಲ. ಸಿದ್ದರಾಮಯ್ಯ ಧೋರಣೆಯಿಂದ ಪಕ್ಷಕ್ಕೆ ಇಂತಹ ಗತಿ ಬಂದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಬಂಡುಕೋರರ ನಾಯಕ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bagalkotbjpcongressformer CM Siddaramaiahks eshwarappaPublic TVಕಾಂಗ್ರೆಸ್ಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಾಗಲಕೋಟೆಬಿಜೆಪಿಮಾಜಿ ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
big bulletin 15 april 2026 part 1
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-1

Public TV
By Public TV
3 hours ago
big bulletin 15 april 2026 part 2
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-2

Public TV
By Public TV
3 hours ago
Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
3 hours ago
big bulletin 15 april 2026 part 3
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?