ಕಾಂಗ್ರೆಸ್ ಜೆಡಿಎಸ್‍ಗೆ, ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್: ಹೆಚ್‍ಡಿಡಿಗೆ ಈಶ್ವರಪ್ಪ ಟಾಂಗ್

Public TV
1 Min Read
JDS ISWARAPPA congress

ಕಲುಬುರಗಿ: ಕಾಂಗ್ರೆಸ್ ಜೆಡಿಎಸ್‍ಗೆ ಸರೆಂಡರ್ ಆಗಿದೆ, ಹಾಗೇ ಜೆಡಿಎಸ್ ಕಾಂಗ್ರೆಸ್‍ಗೆ ಸರೆಂಡರ್ ಆಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವಕ್ಕೆ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದ ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ದೇವೇಗೌಡರ ಹೇಳಿಕೆಯಲ್ಲಿ ಏನೂ ಹೊಸತಿಲ್ಲ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರು ಸ್ಪರ್ಧಿಸಲಿವೆ. ಇದಕ್ಕೆ ನಾವು ಸಿದ್ಧವಾಗಿದ್ದೇವೆ. ರಾಜ್ಯದಲ್ಲಿ 25 ಮತಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಹುಲ್ ಗಾಂಧಿ ಅವರಿಗೆ ಪುಣ್ಯಾತ್ಮ ಎಂದಿದ್ದರು. ಈಗ ಪುಣ್ಯಾತ್ಮನ ಋಣ ತಿರಿಸಲು ಮುಂದಾಗಿದ್ದಾರೆ. ರಾಹುಲ್ ಗಾಂಧಿ ಪುಣ್ಯಾತ್ಮ ಹೌದೋ, ಪಾಪಾತ್ಮ ಹೌದೋ ಎನ್ನುವುದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

Share This Article
Leave a Comment

Leave a Reply

Your email address will not be published. Required fields are marked *