ಬಿಜೆಪಿ ಕಚೇರಿಗೆ ಮುತ್ತಿಗೆ – ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Public TV
1 Min Read
kalaburgi protest

ಕಲಬುರಗಿ: ನಗರದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಮೂವತ್ತಕ್ಕೂ ಅಧಿಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಕರೆದೊಯ್ದಿರುವ ಘಟನೆ ನಗರದ ಎಸ್.ಟಿ.ಬಿ.ಟಿ.ಕ್ರಾಸ್ ಬಳಿ ನಡೆದಿದೆ.

ಕಾಂಗ್ರೆಸ್ ಭವನದಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದರು.

ESHWARAPPA 4

ದೇಶದಲ್ಲಿ ರಾಷ್ಟ್ರ ಧ್ವಜದ ಬದಲಾಗಿ, ಕೇಸರಿ ಭಗವಾನ್ ಧ್ವಜವನ್ನು ಹಾರಿಸುತ್ತೇವೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಬಿಜೆಪಿ ಕಚೇರಿ ಎದುರಿಗೆ ಪ್ರತಿಭಟನೆಯ ನಿರ್ಣಯವನ್ನು ಹಾಕಿಕೊಂಡಿದ್ದರು. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವದ ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ

kalaburgi protest 1

ಈ ವೇಳೆ ಎಚ್ಚೆತ್ತುಕೊಂಡ ಪೊಲೀಸರು ಪ್ರತಿಭಟನೆಯ ಮುನ್ನವೆ ಸುಮಾರು ಮೂವತ್ತಕ್ಕೂ ಅಧಿಕ ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಶಿವಾನಂದ ಹೊನಗುಂಟಿ ಇತರರಿದ್ದರು. ಇದನ್ನೂ ಓದಿ: ತಾಕತ್ತಿದ್ದರೆ ನನ್ನನ್ನು ತುಂಡು, ತುಂಡು ಮಾಡಲಿ ನೋಡೋಣ: ಆಂದೋಲಾ ಶ್ರೀ ಕಿಡಿ

Share This Article
Leave a Comment

Leave a Reply

Your email address will not be published. Required fields are marked *