ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (KSET) ಅರ್ಹರಾದ ಹಾಗೂ ಸದ್ಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ತಾವು ಕ್ಲೇಮ್ ಮಾಡಿರುವ ಒಳಮೀಸಲಾತಿಗೆ (SC-A, SC-B, SC-C) ಸಂಬಂಧಿಸಿದ ಜಾತಿ ಪ್ರಮಾಣ ಪತ್ರಗಳ ಪರಿಶೀಲನೆಗೆ ಇದೇ 22ರಿಂದ 24ರವರೆಗೆ ಕೆಇಎ ಕಚೇರಿಯಲ್ಲಿ ಹಾಜರಾಗಬೇಕು ಎಂದು ಕೆಇಎ (KEA) ತಿಳಿಸಿದೆ.
ಇದು ಕೇವಲ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಲಿದ್ದು, ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ತಪ್ಪದೇ ಹಾಜರಾಗಬೇಕು. ಒಂದು ವೇಳೆ ಪರಿಶೀಲನೆಗೆ ಬಾರದೇ ಇದ್ದರೆ ಅಂತಹವರನ್ನು ಅನರ್ಹರೆಂದು ಪರಿಗಣಿಸಿ, ತಾತ್ಕಾಲಿಕ ಅರ್ಹತಾ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಇದನ್ನೂ ಓದಿ: ಅಧಿವೇಶನವನ್ನು ಒಂದು ವಾರ ವಿಸ್ತರಿಸಿ – ಖಾದರ್ಗೆ ಅಶೋಕ್ ಪತ್ರ
ಅಭ್ಯರ್ಥಿಗಳು, ಕ್ಲೇಮ್ ಪ್ರಕಾರ ಆರ್ಡಿ ಸಂಖ್ಯೆಯ ಹೊಸ ಪ್ರಮಾಣ ಪತ್ರದ ಜೊತೆಗೆ ಬರಬೇಕು. ಪರಿಶೀಲಿಸಿದ ನಂತರ ಮೀಸಲಾತಿ ದಾಖಲೆ ಸರಿ ಇದ್ದವರಿಗೆ ಅವರ ಸ್ನಾತಕೋತ್ತರ ಪದವಿ ಮುಗಿದ ನಂತರ ನಿಗದಿತ ದಿನಾಂಕಗಳಂದು ಕೆಸೆಟ್ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: MGNREGA ಬದಲು G RAM G – ಶೀಘ್ರವೇ ಮಂಡನೆಯಾಗಲಿದೆ ಉದ್ಯೋಗ ಖಾತರಿ ಮಸೂದೆ
ಸದ್ಯ ವಾಸಂಗ ಮಾಡುತ್ತಿರುವ ಸಾಮಾನ್ಯ ಸೇರಿದಂತೆ ಇತರ ಪ್ರವರ್ಗಗಳ ಅಭ್ಯರ್ಥಿಗಳು ಈ ದಿನಾಂಕಗಳಂದು ಬರುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಸಿಕ್ತು ಕೈದಿಗಳ ಬಳಿ ಮೊಬೈಲ್

