Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ

Public TV
Last updated: June 4, 2021 8:56 pm
Public TV
Share
2 Min Read
BMTC KSRTC Bus STRIKE 7
SHARE

ಬೆಂಗಳೂರು: ಕೆಎಸ್ಆರ್‌ಟಿಸಿ (KSRTC) ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕೆಎಸ್ಆರ್‌ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ ಎಂದು ಸವದಿ ಅವರು ಕಟುವಾಗಿ ಪ್ರತ್ಯುತ್ತರ ನೀಡಿದ್ದಾರೆ.

Laxman Savadi 5

ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ಕೆಎಸ್ಆರ್‌ಟಿಸಿ ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು ಎಂದು ಸವದಿ ಅವರು ಸ್ಪಷ್ಟಪಡಿಸಿದ್ದಾರೆ. ಯಾಕೆಂದರೆ ನಮ್ಮ ಸಾರಿಗೆ ಸಂಸ್ಥೆಗೆ ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶ ಇಂದಿನವರೆಗೂ ಬಂದಿಲ್ಲ. ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ಕೇರಳಕ್ಕೆ ಸೇರಿದ್ದು – ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾದಿಂದ ಆದೇಶ

ಕೆ. ಎಸ್. ಆರ್. ಟಿ. ಸಿ. ಹೆಸರು ಕೈ ತಪ್ಪುವ ಆತಂಕ ಬೇಡ:

ಕೆ.ಎಸ್.ಆರ್.ಟಿ.ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ.

1/n pic.twitter.com/lRpfEkQrGm

— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) June 4, 2021

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್‌ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿನಾಂಕ 4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು. ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲಿ ಇಲ್ಲ ಎಂಬುದನ್ನು ಗಮನಿಸಬೇಕು ಎಂದು ಸವದಿಯವರು ಸಮಜಾಯಿಷಿ ನೀಡಿದ್ದಾರೆ.

KSRTC BUS medium

ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ/ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇವೆ. ಆದ್ದರಿಂದ ಊಹಾಪೋಹದ ಯಾವುದೇ ವದಂತಿಯನ್ನು ನಂಬಿ ಆತಂಕಪಡಬೇಕಾಗಿಲ್ಲ ಎಂದು ಸವದಿ ಅವರು ತಿಳಿಸಿದ್ದಾರೆ.

TAGGED:DCM Laxman Savadikarnatakakeralaksrtctransport ministerಕರ್ನಾಟಕಕೆಎಸ್‍ಆರ್‍ಟಿಸಿಕೇರಳಟ್ರೇಡ್‌ಮಾರ್ಕ್‌ಡಿಸಿಎಂ ಲಕ್ಷ್ಮಣ ಸವದಿ
Share This Article
Facebook Whatsapp Whatsapp Telegram

You Might Also Like

Tejasvi Surya
Chikkamagaluru

ಕಾಗಕ್ಕ, ಗುಬ್ಬಕ್ಕ ಕತೆ ಬಿಟ್ಟು ಸೀರಿಯಸ್ ರಾಜಕೀಯ ಮಾಡ್ರಿ – ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

Public TV
By Public TV
46 minutes ago
Davanagere Suicide
Bellary

ಪ್ರಿಯತಮೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ ಆರೋಪ – ಹೆದರಿ ಯುವಕ ಆತ್ಮಹತ್ಯೆ

Public TV
By Public TV
1 hour ago
CRIME
Crime

ಮಂಡ್ಯ | ಚಾಕೊಲೇಟ್ ಆಸೆ ತೋರಿಸಿ 4 ವರ್ಷದ ಮಗುವಿನ ಮೇಲೆ ರೇಪ್

Public TV
By Public TV
2 hours ago
Sivaganga custodial torture case Five policemen arrested victims body bore over 30 injury marks
Crime

ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

Public TV
By Public TV
3 hours ago
Calcutta IIM
Crime

ಕೋಲ್ಕತ್ತಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ನನ್ನ ಮಗಳ ಮೇಲೆ ಅತ್ಯಾಚಾರ ಆಗಿಲ್ಲ – ಸಂತ್ರಸ್ತೆ ಅಪ್ಪನ ಅಚ್ಚರಿ ಹೇಳಿಕೆ!

Public TV
By Public TV
3 hours ago
FDA Koppal
Koppal

ಕೊಪ್ಪಳ; ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಫ್‌ಡಿಎ ಚಿಕಿತ್ಸೆ ಫಲಿಸದೇ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?