Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ

Bengaluru City

KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ

Public TV
Last updated: June 4, 2021 8:56 pm
Public TV
Share
2 Min Read
BMTC KSRTC Bus STRIKE 7
SHARE

ಬೆಂಗಳೂರು: ಕೆಎಸ್ಆರ್‌ಟಿಸಿ (KSRTC) ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕೆಎಸ್ಆರ್‌ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ ಎಂದು ಸವದಿ ಅವರು ಕಟುವಾಗಿ ಪ್ರತ್ಯುತ್ತರ ನೀಡಿದ್ದಾರೆ.

Laxman Savadi 5

ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ಕೆಎಸ್ಆರ್‌ಟಿಸಿ ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು ಎಂದು ಸವದಿ ಅವರು ಸ್ಪಷ್ಟಪಡಿಸಿದ್ದಾರೆ. ಯಾಕೆಂದರೆ ನಮ್ಮ ಸಾರಿಗೆ ಸಂಸ್ಥೆಗೆ ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶ ಇಂದಿನವರೆಗೂ ಬಂದಿಲ್ಲ. ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ಕೇರಳಕ್ಕೆ ಸೇರಿದ್ದು – ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾದಿಂದ ಆದೇಶ

ಕೆ. ಎಸ್. ಆರ್. ಟಿ. ಸಿ. ಹೆಸರು ಕೈ ತಪ್ಪುವ ಆತಂಕ ಬೇಡ:

ಕೆ.ಎಸ್.ಆರ್.ಟಿ.ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ.

1/n pic.twitter.com/lRpfEkQrGm

— Laxman Savadi (@LaxmanSavadi) June 4, 2021

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್‌ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿನಾಂಕ 4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು. ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲಿ ಇಲ್ಲ ಎಂಬುದನ್ನು ಗಮನಿಸಬೇಕು ಎಂದು ಸವದಿಯವರು ಸಮಜಾಯಿಷಿ ನೀಡಿದ್ದಾರೆ.

KSRTC BUS medium

ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ/ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇವೆ. ಆದ್ದರಿಂದ ಊಹಾಪೋಹದ ಯಾವುದೇ ವದಂತಿಯನ್ನು ನಂಬಿ ಆತಂಕಪಡಬೇಕಾಗಿಲ್ಲ ಎಂದು ಸವದಿ ಅವರು ತಿಳಿಸಿದ್ದಾರೆ.

TAGGED:DCM Laxman Savadikarnatakakeralaksrtctransport ministerಕರ್ನಾಟಕಕೆಎಸ್‍ಆರ್‍ಟಿಸಿಕೇರಳಟ್ರೇಡ್‌ಮಾರ್ಕ್‌ಡಿಸಿಎಂ ಲಕ್ಷ್ಮಣ ಸವದಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
15 minutes ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
23 minutes ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
1 hour ago
Mantralaya Sri Raghavendra Swamy
Districts

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Public TV
By Public TV
2 hours ago
Mushroom Pakoda
Food

ಸಂಜೆ ಸ್ನಾಕ್ಸ್‌ಗೆ ಮಾಡಿ ಕ್ರಿಸ್ಪಿ ಮಶ್ರೂಮ್ ಪಕೋಡ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 24-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?