47 ಜನ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಪ್ರಯಾಣಿಕರು ಬಚಾವ್

Public TV
1 Min Read
KARWAR BUS ACCIDENT

ಕಾರವಾರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‍ನ ಸ್ಟೇರಿಂಗ್ ತುಂಡಾಗಿ ಕಂದಕಕ್ಕೆ ಉರುಳಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ (Siddapura) ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದೆ.

ಹಳಿಯಾಳದಿಂದ (Haliyala) ಶಿವಮೊಗ್ಗ (Shivamogga) ಜಿಲ್ಲೆಯ ಸಾಗರಕ್ಕೆ (Sagar) 47 ಜನ ಪ್ರಯಾಣಿಕರನ್ನು ಕರೆದೊಯ್ಯುತಿದ್ದ ಬಸ್ ತಿರುವಿನಲ್ಲಿ ಚಲಿಸುತ್ತಿದ್ದ ವೇಳೆ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ. ಉರುಳಿದ ಬಸ್ ಮರಕ್ಕೆ ಡಿಕ್ಕಿಯಾಗಿ ತಡೆದು ನಿಂತಿದ್ದು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಇದನ್ನೂ ಓದಿ: Twitter logo: ಟ್ವಿಟ್ಟರ್‌ ‘ನೀಲಿ ಹಕ್ಕಿ’ ನಾಯಿ ಮರಿಯಾಯ್ತು!

ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಒಂದೆರಡು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಗಂಡ-ಹೆಂಡ್ತಿ ಒಟ್ಟಿಗೆ ಕೂತು ಎಣ್ಣೆ ಹೊಡೆದ್ರು- ಜಗಳವಾಡಿ 12ನೇ ಪತ್ನಿಯನ್ನೇ ಮುಗಿಸಿದ!

Share This Article