ಬಳ್ಳಾರಿ: ಬೆಂಕಿಯಲ್ಲಿ ಹೊತ್ತಿ ಉರಿದ KSRTC ಬಸ್

Public TV
0 Min Read
BLY BUS

ಬಳ್ಳಾರಿ: ಸಾರಿಗೆ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಸಂಜೆ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ ನಿಂದ ಕೆಳಗೆ ಇಳಿದಿದ್ದಾರೆ. ಬಸ್ ನಲ್ಲಿದ್ದ ಚಾಲಕ, ನಿರ್ವಾಹಕ ಮತ್ತು ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್ ಸಿರಗುಪ್ಪ ದಿಂದ ಬೆಳಗಲ್ಲು ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಬೆಂಕಿ ಅವಘಡ ಸಂಭವಿಸಿದೆ. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂಬುದರ ಬಗ್ಗೆ ನಿಖರ ಮಾಹಿತಿಗಳು ಲಭ್ಯವಾಗಿಲ್ಲ.

BLY BUS

BLY BUS

Share This Article
Leave a Comment

Leave a Reply

Your email address will not be published. Required fields are marked *