ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ- ತಪ್ಪಿದ ಭಾರೀ ಅನಾಹುತ

Public TV
1 Min Read
ckm accident

ಚಿಕ್ಕಮಗಳೂರು: ಸ್ಟೀಯರಿಂಗ್ ಲಾಕ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಈ ಅವಘಡ ಸಂಭವಿಸಿದೆ. ಬಸ್ ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದಾಗ ಹಾಂದಿ ಬಳಿ ಬಸ್ಸಿನ ಸ್ಟೇರಿಂಗ್ ಲಾಕ್ ಆಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು. ಈ ಪೈಕಿ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

police 1

ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೆ ಸ್ವಲ್ಪ ಮುಂದಕ್ಕೆ ಹೋಗಿದ್ದಲ್ಲಿ ಪ್ರಪಾತಕ್ಕೆ ಬೀಳುವ ಸಂಭವವಿತ್ತು. ಚಾಲಕನ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲಿಯೇ ಭಾರೀ ಅನಾಹುತ ತಪ್ಪಿದಂತಾಗಿದೆ. ಕೂಡಲೇ ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಎಸ್ಆರ್‌ಟಿಸಿಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *