ಬೆಳಗಾವಿ: ಕಾಲೇಜು ಬಸ್ಗೆ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮ ನಡೆದಿದೆ.
ಗುರ್ಲಪೂರ ಗ್ರಾಮದ ಜತ್ತ – ಜಾಂಬೋಟಿ ಹೆದ್ದಾರಿ ಮೇಲೆ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್ನಲ್ಲಿದ್ದ 10 ವಿದ್ಯಾರ್ಥಿಗೆ ಹಾಗೂ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿದ್ದ ಮಗನ ಶವ ಹಿಂಪಡೆಯಲು 50 ಸಾವಿರಕ್ಕಾಗಿ ಭಿಕ್ಷೆ ಬೇಡಿದ ವೃದ್ಧ ದಂಪತಿ
ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಂತಿದ್ದ ಬಸ್ಗೆ ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದ್ದು, ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಳಿ ಸಿಕ್ತು ಕೋಟಿ ಹಣ