ಬೈಕ್‍ಗೆ ಗುದ್ದಿದ KSRTC ಬಸ್: ಚಾಲಕನಿಗೆ ಹಿಗ್ಗಾಮುಗ್ಗ ಥಳಿತ

Public TV
1 Min Read
TMK HALLE 1

ತುಮಕೂರು: ಬೈಕ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್ ಸವಾರರು ಬಸ್ ಚಾಲಕನಿಗೆ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ.

ನಷ್ರತ್ ಉಲ್ಲಾ ಷರೀಫ್ ಹಲ್ಲೆಗೊಳಗಾದ ಬಸ್ ಚಾಲಕ. ತುಮಕೂರು ಡಿಪೋ -1ಕ್ಕೆ ಸೇರಿದ ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣಿಕರೊಂದಿಗೆ ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿತ್ತು. ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಬೈಕ್‍ನಲ್ಲಿದ್ದ ಮೂವರು ಷರೀಪ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಷರೀಫರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋವನ್ನ ಪ್ರಯಾಣಿಕರು ಸೆರೆ ಹಿಡಿದಿದ್ದಾರೆ. ಇದುವರೆಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

TMK HALLE 4

TMK HALLE 3

TMK HALLE 2

TMK HALLE 1 1

Share This Article
Leave a Comment

Leave a Reply

Your email address will not be published. Required fields are marked *