– ಸ್ವಲ್ಪ ಯಾಮಾರಿದ್ರೂ ಕಂದಕಕ್ಕೆ ಉರುಳುತಿದ್ದ ಬಸ್, ಪ್ರಯಾಣಿಕರು ಪಾರು
ರಾಮನಗರ: ಬ್ರೇಕ್ ಫೇಲ್ (Brake Failure) ಆದ ಪರಿಣಾಮ ರಸ್ತೆ ತಡೆಗೋಡೆಗೆ ಕೆಎಸ್ಆರ್ಟಿಸಿ ಬಸ್ (KSRTC Bus) ಡಿಕ್ಕಿಯಾಗಿ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾದ ಘಟನೆ ಕನಕಪುರ (Kanakapura) ತಾಲೂಕಿನ ಸಂಗಮದ ರಸ್ತೆಯಲ್ಲಿ ನಡೆದಿದೆ.
ಕನಕಪುರದಿಂದ ಸಂಗಮದ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್, ಸಂಗಮ ಸಮೀಪದ ತಿರುವಿನ ರಸ್ತೆಯಲ್ಲಿ ಬ್ರೇಕ್ ಫೇಲ್ ಆಗಿದೆ. ಬಸ್ ನಿಯಂತ್ರಣಕ್ಕೆ ತರಲು ಚಾಲಕ ತಡೆಗೋಡೆಗೆ ಬಸ್ ಡಿಕ್ಕಿ ಹೊಡೆಸಿದ ಬಳಿಕ ಬಸ್ ನಿಂತಿದೆ. ಸ್ವಲ್ಪ ಯಾಮಾರಿದ್ದರೂ ಪ್ರಪಾತಕ್ಕೆ ಬಸ್ ಉರುಳಿ ಬಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಇದನ್ನೂ ಓದಿ: ಕೋಲಾರ ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ – ಅಪಾರ ಪ್ರಮಾಣದ ಬೆಳೆಗಳು ನಾಶ
ಬಸ್ನಲ್ಲಿ ಸುಮಾರು 70ಕ್ಕೂ ಅಧಿಕ ಪ್ರಯಾಣಿಕರು ಹೊಸ ವರ್ಷ ಹಿನ್ನೆಲೆ ಸಂಗಮದ ಶಿವನ ದೇವಾಲಯಕ್ಕೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಇನ್ನೂ ಸ್ಥಳಕ್ಕೆ ಸಾತನೂರು ಪೊಲೀಸರು ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Tumakuru| ಹೊಸ ವರ್ಷಕ್ಕೆ ಕೇಕ್ ತರಲು ಹೋದ ಯುವಕ ಅಪಘಾತದಲ್ಲಿ ಸಾವು