ಬೆಳಗಾವಿ: ಪ್ಲೇಟ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ (KSRTC) ಬಸ್ (Bus) ಪಲ್ಟಿಯಾಗಿದ್ದು, ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು (Students) ಹಾಗೂ ಇಬ್ಬರು ಶಿಕ್ಷಕರು (Teachers) ಗಾಯಗೊಂಡಿರುವ ಘಟನೆ ಬಿಜಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramdurga) ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆಗೆ ಹೊರಟಿದ್ದ ಬಸ್ನಲ್ಲಿ 60ಕ್ಕೂ ಅಧಿಕ ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣ ಮಾಡುತ್ತಿದ್ದರು. ಇದನ್ನೂ ಓದಿ: Bengaluru Bandh: ಬಂದೋಬಸ್ತ್ನಲ್ಲಿದ್ದ ಪೊಲೀಸರಿಗೆ ಕೊಟ್ಟ ಟಿಫನ್ನಲ್ಲಿ ಇಲಿ!
ಅಪಘಾತದಲ್ಲಿ ಇಬ್ಬರು ಶಿಕ್ಷಕರ ಕೈ ಮುರಿದಿದ್ದು, ವಿದ್ಯಾರ್ಥಿಗಳಿಗೂ ಗಾಯವಾಗಿದೆ. ಗಾಯಾಳುಗಳನ್ನು ಅಂಬುಲೆನ್ಸ್ ಸಹಾಯದಿಂದ ಸಾಲಹಳ್ಳಿ ಪಿಎಚ್ಸಿಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭದ್ರಾ ನೀರಿಗಾಗಿ ಪ್ರತಿಭಟನೆ – ಒಣಗಿದ ಗದ್ದೆಯಲ್ಲಿ ವಿಷದ ಬಾಟಲಿ ಹಿಡಿದು ಕುಳಿತ ರೈತರು
Web Stories