ಮಂಡ್ಯ: ಕೆಎಸ್ಆರ್ಟಿಸಿ (KSRTC) ಬಸ್ನ (Bus) ಸ್ಟೇರಿಂಗ್ ಕಟ್ ಆದ ಪರಿಣಾಮ ಬಸ್ ಗದ್ದೆಗೆ ನುಗ್ಗಿದ್ದು, ಸ್ವಲ್ಪದರಲ್ಲೇ ಬಾರಿ ಅನಾಹುತ ತಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಬಳಿ ಜರುಗಿದೆ.
ಅರಸಿಕೆರೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ಕಟ್ಟಾಗಿದೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ಇದ್ದ ಭತ್ತದ ಗದ್ದೆಗೆ ಬಸ್ ನುಗ್ಗಿ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ 11 ಕೆವಿ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಇದನ್ನೂ ಓದಿ: ಗಾಂಧಿ ಟೋಪಿ ಮುಂದಿಟ್ಟುಕೊಂಡು ಕಾಂಗ್ರೆಸ್ ಸಮಾಜಕ್ಕೆ ಟೋಪಿ ಹಾಕಿದೆ: ಕಟೀಲ್
ನೇರವಾಗಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಬಸ್ನ ವೇಗ ಕಡಿಮೆಯಾಗಿದೆ ಹೀಗಾಗಿ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ (Hospital) ರವಾನಿಸಲಾಗಿದೆ. ಕಿಕ್ಕೇರಿ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ಇದನ್ನೂ ಓದಿ: ಜನರಿಂದ 2.69 ಕೋಟಿ ಸಂಗ್ರಹ, ಕೇವಲ 29 ಲಕ್ಷ ಬಳಕೆ – ಅಯ್ಯೂಬ್ ವಿರುದ್ಧ ಇಡಿ ಚಾರ್ಜ್