ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ.
ಈ ಕುರಿತು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಈ ಮೊದಲು ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಚಾಲಕರಿಗೆ 5,000 ರೂ. ನಗದು ಪುರಸ್ಕಾರವಿತ್ತು. ಈ ನಗದು ಮೊತ್ತವನ್ನು ಇದೀಗ 10,000ರೂ.ಗೆ ಹೆಚ್ಚಿಸಿದೆ ಹಾಗೂ ಚಿನ್ನದ ಪದಕ ಪಡೆದ ಚಾಲಕರಿಗೆ ಮಾಸಿಕ ಭತ್ಯೆ 500ರೂ. – 1,000ರೂ.ಗೆ ಏರಿಕೆ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್ ರ್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ – ಸದನದಲ್ಲಿ ಸೋನಿಯಾ ಗಾಂಧಿ ಕ್ಷಮೆಗೆ ಆಗ್ರಹಿಸಿದ ಬಿಜೆಪಿ
ಇನ್ನೂ ಬೆಳ್ಳಿ ಪದಕ ಪಡೆದ ಚಾಲಕರಿಗೆ ನೀಡಲಾಗುತ್ತಿದ್ದ 2,500 ರೂ. ನಗದು ಪುರಸ್ಕಾರವನ್ನು ಇದೀಗ 5,000 ರೂ.ಗೆ ಹೆಚ್ಚಿಸಲಾಗಿದೆ. ಜೊತೆಗೆ ಮಾಸಿಕ ಭತ್ಯೆ 250ರೂ.ಯಿಂದ 500 ರೂ.ಗೆ ಏರಿಕೆ ಮಾಡಲಾಗಿದೆ. ಈ ಪರಿಷ್ಕ್ರತ ನಗದು ಪುರಸ್ಕಾರ ಜನವರಿ 1, 2026 ರಿಂದ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

