ಬೆಂಗಳೂರು: ಕೆಟಿಎಂ ಬೈಕ್ (KTM Bike) ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿದ ಘಟನೆ ನಾಗರಬಾವಿಯ (Nagarbhavi) ಮುಖ್ಯರಸ್ತೆಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಮಂಗನಹಳ್ಳಿಯ ಮಧು (74) ಮೃತಪಟ್ಟಿದ್ದಾರೆ. ಕೆಟಿಎಂ ಬೈಕ್ ಸವಾರ ಶ್ರೀನಿವಾಸಗ ಎಂಬಾತ ಅಪಘಾತವೆಸಗಿದ್ದಾನೆ. ಅಪಘಾತದ ಪರಿಣಾಮ ಮಧು ತಲೆಗೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್ನಿಂದ 42 ವಿಮಾನಗಳ ಹಾರಾಟ ರದ್ದು – ಅಗತ್ಯ ತಪಾಸಣೆಗಾಗಿ ಕ್ಯಾನ್ಸಲ್: ಇಂಡಿಗೋ ಮಾಹಿತಿ
ಘಟನೆ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ಶ್ರೀನಿವಾಸ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬಾಲ್ಯ ವಿವಾಹ ತಡೆಗಟ್ಟಲು ದೇಶದಲ್ಲಿ 100 ದಿನಗಳ ಜಾಗೃತಿ ಅಭಿಯಾನ

