Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಲಭೂಷನ್ ಜಾಧವ್ ಪ್ರಕರಣ- ಭಾರತದ ವಕೀಲರ ಶುಲ್ಕ 1 ರೂ., ಪಾಕ್ ವ್ಯಯ ಮಾಡಿದ್ದು 20 ಕೋಟಿಗೂ ಅಧಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಲಭೂಷನ್ ಜಾಧವ್ ಪ್ರಕರಣ- ಭಾರತದ ವಕೀಲರ ಶುಲ್ಕ 1 ರೂ., ಪಾಕ್ ವ್ಯಯ ಮಾಡಿದ್ದು 20 ಕೋಟಿಗೂ ಅಧಿಕ

Latest

ಕುಲಭೂಷನ್ ಜಾಧವ್ ಪ್ರಕರಣ- ಭಾರತದ ವಕೀಲರ ಶುಲ್ಕ 1 ರೂ., ಪಾಕ್ ವ್ಯಯ ಮಾಡಿದ್ದು 20 ಕೋಟಿಗೂ ಅಧಿಕ

Public TV
Last updated: July 19, 2019 11:10 am
Public TV
Share
2 Min Read
kulbhushan jadhav lawyer
SHARE

ನವದೆಹಲಿ: ಹೇಗ್‍ನ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ಸಾರ್ವಜನಿಕ ವಿಚಾರಣೆ ನಡೆದು ತೀರ್ಪು ನೀಡಲಾಗಿದೆ. ಈ ಸಂಬಂಧ ಭಾರತದ ಪರವಿದ್ದ ಹಿರಿಯ ವಕೀಲ ಹರೀಶ್ ಸಾಲ್ವೆ ಶುಲ್ಕವಾಗಿ ಕೇವಲ 1 ರೂ. ಪಡೆದರೆ, ಪಾಕ್ ಪರ ವಕೀಲರು 20 ಕೋಟಿ ರೂ.ಗೂ ಅಧಿಕ ಶುಲ್ಕವನ್ನು ಪಡೆದಿದ್ದಾರೆ.

kulbhushan jadhav and harish salve

ವಕೀಲ ಹರೀಶ್ ಸಾಲ್ವೆ ಅವರು ಐಸಿಜೆಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತದ ಪರವಾಗಿ ವಾದ ಮಂಡಿಸಿ ಜಯಗಳಿಸಿದ್ದಾರೆ. ಆದರೆ ಅವರು ಶುಲ್ಕವಾಗಿ ಕೇವಲ 1 ರೂ. ಮಾತ್ರ ಪಡೆದಿದ್ದಾರೆ. ಪಾಕ್ ಈ ಪ್ರಕರಣವನ್ನು ಗೆಲ್ಲುವ ನಿಟ್ಟಿನಲ್ಲಿ ಅವರ ಪರ ವಕೀಲ ಖವಾರ್ ಖುರೇಷಿ ಅವರಿಗೆ ಬರೋಬ್ಬರಿ 20 ಕೋಟಿಗೂ ಅಧಿಕ ಹಣವನ್ನು ಶುಲ್ಕವಾಗಿ ನೀಡಿದೆ. ಇದನ್ನೂ ಓದಿ: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಶ್ಲಾಘಿಸಿದ ಪಾಕ್ ಪ್ರಧಾನಿ

ICJ

ಈ ಬಗ್ಗೆ ಕಳೆದ ವರ್ಷ ರಾಷ್ಟ್ರೀಯ ಸಂಸತ್ತಿನಲ್ಲಿ ಪಾಕಿಸ್ತಾನ ನೀಡಿರುವ ದೇಶದ ಬಜೆಟ್ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ಯುಕೆ ಮೂಲದ ನ್ಯಾಯವಾದಿ ಖವಾರ್ ಖುರೇಷಿಗೆ ಪಾಕ್ 20 ಕೋಟಿಗೂ ಅಧಿಕ ಹಣವನ್ನು ಶುಲ್ಕದಲ್ಲಿ ನೀಡಿದೆ ಎಂದು ನಮೂದಿಸಿದೆ. ಖುರೇಷಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾನೂನು ಪದವೀಧರರಾಗಿದ್ದು, ಐಸಿಜೆಯಲ್ಲಿ ಪ್ರಕರಣ ಸಂಬಂಧ ಹೋರಾಡುತ್ತಿರುವ ಅತ್ಯಂತ ಕಿರಿಯ ವಕೀಲ ಎಂದು ಹೇಳಲಾಗಿದೆ.

harish salve in ICJ Hegue

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಕೀಲ ಹರೀಶ್ ಸಾಲ್ವೆ ಅವರು ಪಡೆದ ಶುಲ್ಕದ ಬಗ್ಗೆ ಮೇ 15, 2017 ರಂದು ಮಾಡಿದ ಟ್ವೀಟ್‍ನಲ್ಲಿ ತಿಳಿಸಿದ್ದರು. ಸಾಲ್ವೆ ಅವರು ಹೇಗ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಕೇವಲ 1 ರೂ.ಗಳನ್ನು ಪಡೆದಿದ್ದಾರೆ ಎಂದು ಹೇಳಿದ್ದರು. ಸಾಮಾನ್ಯವಾಗಿ ಹರೀಶ್ ಸಾಲ್ವೆ ಅವರು 30 ಲಕ್ಷ ರೂ. ಅನ್ನು ಒಂದು ದಿನದ ವಿಚಾರಣೆಗಾಗಿ ಪಡೆಯುತ್ತಾರೆ ಎಂದು ಮೂಲಗಳು ತಿಳಿಸಿವೆ.

Kulbhushan Pakistan Khawar Qureshi

ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

kulabhushan jadhav

ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ್ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.

INDIA PAK

ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.

ICJ 1

ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.

TAGGED:feesicjIndian lawyerKulabhushan jadhav casenewdelhipakistan lawyerPublic TVಐಸಿಜೆಕುಲಭೂಷನ್ ಜಾಧವ್ ಪ್ರಕರಣಪಬ್ಲಿಕ್ ಟಿವಿಪಾಕ್ ವಕೀಲರುಭಾರತ ವಕೀಲರುಶುಲ್ಕ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
22 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
27 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
52 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?