ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ.
ಮೂಡಿಗೆರೆ ತಾಲೂಕಿನ ಶಂಕರ್ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು. ಇಬ್ಬರು ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಪ್ಪ ತಾಲೂಕಿನ ಕುಡ್ನಳ್ಳಿಯಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದ ಸಿ.ಎಂ ಕುಮಾರಸ್ವಾಮಿ ಅವರ ಕುಟುಂಬದವರು ಪೂಜೆ ಮುಗಿಸಿ ಹಾಸನಕ್ಕೆ ವಾಪಸ್ ಹೋಗುವ ವೇಳೆ ಈ ಅಪಘಾತವಾಗಿದೆ.