Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮ್ಮಿಶ್ರ ಸರ್ಕಾರಕ್ಕೆ ನೂರರ ಸಂಭ್ರಮ-ಸರ್ಕಾರದ ಪ್ಲಸ್, ಮೈನಸ್ ಯಾವುದು ಗೊತ್ತಾ…?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮ್ಮಿಶ್ರ ಸರ್ಕಾರಕ್ಕೆ ನೂರರ ಸಂಭ್ರಮ-ಸರ್ಕಾರದ ಪ್ಲಸ್, ಮೈನಸ್ ಯಾವುದು ಗೊತ್ತಾ…?

Bengaluru City

ಸಮ್ಮಿಶ್ರ ಸರ್ಕಾರಕ್ಕೆ ನೂರರ ಸಂಭ್ರಮ-ಸರ್ಕಾರದ ಪ್ಲಸ್, ಮೈನಸ್ ಯಾವುದು ಗೊತ್ತಾ…?

Public TV
Last updated: August 30, 2018 7:47 am
Public TV
Share
4 Min Read
century star
SHARE

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಇಂದಿಗೆ ನೂರು ದಿನ ಪೂರೈಸುತ್ತಿದೆ. ನೂರಾರು ಗೊಂದಲಗಳ ನಡುವೆ ಹತ್ತಾರು ವಿವಾದಗಳ ನಡುವೆ ಸರ್ಕಾರ ನೂರು ದಿನ ಪೂರೈಸಿದ್ದು, ಸರ್ಕಾರದ ನೆಗೆಟಿವ್ ಹಾಗೂ ಪಾಸಿಟಿವ್ ಘಟನೆಗಳ ರಿಪೋರ್ಟ್ ಇಲ್ಲಿದೆ.

ಅತಂತ್ರ ರಾಜಕೀಯ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿದ ದೋಸ್ತಿ ಸರ್ಕಾರಕ್ಕೆ ಇಂದಿಗೆ ನೂರು ದಿನದ ಸಂಭ್ರಮ. ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ವಿಪಕ್ಷದ ಆರೋಪದ ನಡುವೆಯು ಒಂದಷ್ಟು ಮಹತ್ವದ ಕಾರ್ಯಗಳಾಗಿವೆ. ಜೊತೆ ಜೊತೆಗೆ ಚುನಾವಣಾ ಸಂದರ್ಭದಲ್ಲಿ ನೀಡಿದ ಸಾಕಷ್ಟು ಭರವಸೆಗಳು ಬಾಕಿ ಇವೆ. ಸರ್ಕಾರದ ಬಗ್ಗೆ ಪಾಸಿಟಿವ್ ಮಾತಿನ ಜೊತೆಗೆ ಅಷ್ಟೆ ಪ್ರಮಾಣದಲ್ಲಿ ನೆಗೆಟಿವ್ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸರ್ಕಾರಕ್ಕೆ ಪ್ಲಸ್ ಆಗಿದ್ದು ಯಾವುದು? ನೆಗೆಟಿವ್ ಅನ್ನಿಸಿಕೊಂಡಿದ್ದು ಯಾವುದು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಶತಕದ ಸಾಧನೆ
* ಸಹಕಾರಿ, ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಾಲ ಮನ್ನಾ
* ಲೇವಾದೇವಿ ಸಾಲ ಮನ್ನಾ ಯೋಜನೆ. ಫುಟ್ ಪಾತ್ ವ್ಯಾಪಾರಿಗಳಿಗೆ ನಿತ್ಯ ಸಾವಿರ ಸಾಲ ಕೊಡುವ ಮೊಬೈಲ್ ಬ್ಯಾಂಕ್ ವ್ಯವಸ್ಥೆ ಜಾರಿಗೆ ತರುವ ಚಿಂತನೆ.
* ರೈತರಿಗೆ ಆತ್ಮ ಸ್ಥೈರ್ಯ ತುಂಬಲು ರೈತರ ಜೊತೆ ಗದ್ದೆಗೆ ಇಳಿದು ನಾಟಿ ಮಾಡಿದ್ದು.

ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ 40 ಸಾವಿರ ಕೋಟಿಗು ಹೆಚ್ಚಿನ ಸಾಲ ಮನ್ನ ಕುಮಾರಸ್ವಾಮಿ ಸರ್ಕಾರದ ಐತಿಹಾಸಿಕ ಸಾಧನೆ. ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಕುಮಾರಸ್ವಾಮಿ ಖಾಸಗಿ ಸಾಲದ ಋಣಮುಕ್ತ ಕಾಯ್ದೆಗೆ ಸುಗ್ರಿವಾಜ್ಞೆ ಹೊರಡಿಸಿ ಸೈ ಅನ್ನಿಸಿಕೊಂಡಿದ್ದಾರೆ. ಅಲ್ಲದೆ ರಾಜ್ಯದ ರೈತರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಮಂಡ್ಯದಲ್ಲಿ ರೈತರ ಗದ್ದೆಗೆ ಇಳಿದು ನಾಟಿ ಕೆಲಸ ಮಾಡುವ ಮೂಲಕ ರೈತರ ಮನ ಗೆಲ್ಲುವಲ್ಲಿ ಯಶಸ್ವಿಯಾದರು.

HDK Param 1

* ಸರ್ಕಾರಿ ಶಾಲೆಯಲ್ಲಿ ಓದುವ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ತೀರ್ಮಾನ.
* ಕೊಡಗು ಪ್ರವಾಹಕ್ಕೆ ಉತ್ತಮವಾದ ಸ್ಪಂದನೆ.
* ವಾರಕ್ಕೊಮ್ಮೆ ಪ್ರತಿ ಶನಿವಾರದಂದು ಜನತಾ ದರ್ಶನ ಕಾರ್ಯಕ್ರಮ.

ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲು 569 ಕೋಟಿ ಮೀಸಲಿಟ್ಟ ಸರ್ಕಾರ ಶಾಲ ಮಕ್ಕಳ ಮನಗೆಲ್ಲುವ ಪ್ರಯತ್ನ ಮಾಡಿತು. ಅನಿರೀಕ್ಷಿತವಾಗಿ ಸಂಭವಿಸಿದ ಮಡಕೇರಿ ಪ್ರವಾಹ ಸಂದರ್ಭದಲ್ಲಿ ಸಿಎಂ ಸೇರಿದಂತೆ ಸರ್ಕಾರದ ಎಲ್ಲಾ ಸಚಿವರ ಸ್ಪಂದನೆ ಹಾಗೂ ಸರ್ಕಾರದ ಕಾರ್ಯ ವೈಖರಿ ರಾಜ್ಯಾದ್ಯಂತ ವ್ಯಕ್ತವಾದ ಜನ ಬೆಂಬಲ ಸರ್ಕಾರದ ಇಮೇಜನ ಕೊಂಚ ಹೆಚ್ಚಿಸಿದ್ದಂತು ಹೌದು. ಕುಮಾರಸ್ವಾಮಿ ಅವರಿಗೆ ಜನಪರ ಸಿಎಂ ಎಂಬ ಇಮೇಜ್ ತಂದು ಕೊಟ್ಟ ಜನಪ್ರಿಯ ಜನತಾ ದರ್ಶನ ಯೋಜನೆಗೆ ಪ್ರತಿ ಶನಿವಾರ ಮೀಸಲಿಟ್ಟಿದ್ದು ಜನರ ನಿರೀಕ್ಷೆ ಹೆಚ್ಚುವಂತೆ ಮಾಡಿದೆ.

* ವಿಧಾನಸೌಧಲ್ಲಿ ದಲ್ಲಾಳಿಗಳಿಗೆ ಬ್ರೇಕ್ ಹಾಕುವ ಹೇಳಿಕೆ ನೀಡಿದ್ದು
* ಮೆಟ್ರೊ ರೈಲಿಗೆ ಇನ್ಫೊಸಿಸ್ ಬೃಹತ್ ಕೊಡುಗೆ ನೀಡಿದ ಅವಧಿ
* ವಿಪಕ್ಷವನ್ನ ಜಂಟಿಯಾಗಿ ಎದುರಿಸುತ್ತಿರುವುದು.

hdk dkshi

ಹೀಗೆ ಹಲವು ಸಾಧನೆಯೊಂದಿಗೆ 100 ದಿನ ಪೂರೈಸುತ್ತಿರುವ ಸರ್ಕಾರ ಹಲವಾರು ನೆಗೆಟಿವ್ ವಿಚಾರಗಳು ಸಹ ಸದ್ದು ಮಾಡಿದೆ. ರಾಜ್ಯದ ಜನ ಅನುಮಾನದಿಂದ ನೋಡುವಂತೆ ಮಾಡಿದೆ. ಅದರ ವಿವರ ಇಲ್ಲಿದೆ

ಶತಕದ ನಿರಾಸೆ
* ಹೊಸ ಬಜೆಟ್ ಮಂಡಿಸುವುದಕ್ಕೇ ಆಕ್ಷೇಪ ಹಾಗೂ ಗೊಂದಲ
* ಬಜೆಟ್ ಮಂಡಿಸಿದ ಮೇಲೆ
-ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ ಆರೋಪ
-ರಾಮನಗರ,ಮಂಡ್ಯಕ್ಕೆ ಮಾತ್ರ ಸಿಎಂ ಎಂಬಂತೆ ಸಿಎಂ ನಡವಳಿಕೆ

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ರು. ಸಿಎಂ ಕುಮಾರಸ್ವಾಮಿ ಮಂಡಿಸಿದ್ದು ಪೂರ್ಣ ಪ್ರಮಾಣದ ಬಜೆಟ್ ಅಥವಾ ಹಳೆ ಬಜೆಟ್ ನ ಮುಂದುವರಿಕೆಯೋ ಎಂಬುದರ ಬಗ್ಗೆ ಆದ ಗೊಂದಲ ಸರ್ಕಾರದ ಇಮೇಜನ್ನ ಡ್ಯಾಮೇಜ್ ಮಾಡಿತ್ತು. ಮಂಡಿಸಿದ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಕಡೆಗಣಿಸಿದ ಆರೋಪಕ್ಕೂ ಸರ್ಕಾರ ಗುರಿಯಾಯ್ತು. ಅಲ್ಲದೆ ಕೇವಲ ರಾಮನಗರ ಮಂಡ್ಯ ಹಾಗೂ ಹಾಸನಕ್ಕೆ ಹೆಚ್ಚಿನ ಅನುಧಾನ ಕೊಟ್ಟ ಆರೋಪಕ್ಕೂ ಸಮ್ಮಿಶ್ರ ಸರ್ಕಾರ ಗುರಿ ಆಯ್ತು.

dks hdk congress jds 1

* ಆಲಮಟ್ಟಿಗೆ ಬಾಗಿನ ಅರ್ಪಿಸದೇ ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಸ್ಪಂದಿಸದ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ
* ಪೆಟ್ರೋಲ್, ಡಿಸೆಲ್ ಮೇಲೆ ಸೆಸ್-ಸಿದ್ದು ವಿರೋಧದ ನಡುವೆಯೂ ಸುಂಕ ಹೆಚ್ಚಿಸಿ ಮೇಲುಗೈ ಸಾಧಿಸಿ ಜನರ ಮೇಲೆ ಹೆಚ್ಚಿನ ಹೊರೆ
* ಮೈತ್ರಿ ಸರ್ಕಾರ ಬಂದ ಬಳಿಕ ಹಿಂದೆಂದು ಆಗದಷ್ಟು ವರ್ಗಾವಣೆ ದಂಧೆ ಬಗ್ಗೆ ಪ್ರತಿಪಕ್ಷಗಳಿಂದ ಕೇಳಿಬರುತ್ತಿರುವ ಆರೋಪ

ಹಳೆ ಮೈಸೂರು ಭಾಗದ ಜಲಾಶಯಗಳಿಗೆ ಬಾಗಿನ ಅರ್ಪಿಸಿದ ಸಿಎಂ ಉತ್ತರ ಕರ್ನಾಟಕದ ಅಲಮಟ್ಟಿಯಂತಹ ಬೃಹತ್ ಜಲಾಶಯಗಳನ್ನು ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾದರು. ರೈತರ ಸಾಲಮನ್ನಕ್ಕಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಿಸಿ ವಾಹನ ಸವಾರರ ಕೆಂಗಣ್ಣಿಗೆ ಸರ್ಕಾರ ಗುರಿಯಾಯ್ತು.

* ಪ್ರತಿ ಇಲಾಖೆಯಲ್ಲೂ ಎಚ್.ಡಿ.ರೇವಣ್ಣನವರ ಹಸ್ತಕ್ಷೇಪ.
* ರೇವಣ್ಣ ನಡವಳಿಕೆಯಿಂದ ಬೇಸತ್ತಿರುವ ವಿವಿಧ ಇಲಾಖೆಗಳ ಸಚಿವರು
* ವಿಧಾನಸೌಧವನ್ನೂ ಸಾರ್ವಜನಿಕರಿಗೆ ಮುಕ್ತಗೊಳಿಸಿಲ್ಲ, ವಿಧಾನಸೌಧದ ದಲ್ಲಾಳಿಗಳಿಗೂ ಬ್ರೇಕ್ ಹಾಕಲಿಲ್ಲ.
* ಸರ್ಕಾರದಲ್ಲಿ ಸಮನ್ವಯದ ಕೊರತೆ.

REVANNA 1

ಸರ್ಕಾರಕ್ಕೆ ದೊಡ್ಡ ತಲೆನೋವು ಅನ್ನಿಸಿಕೊಂಡಿದ್ದು ಸಚಿವ ಹೆಚ್.ಡಿ.ರೇವಣ್ಣ ವರ್ತನೆ, ಸೂಪರ್ ಸಿಎಂ ರೀತಿ ಎಲ್ಲರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುತ್ತಿರುವುದು. ನಾನು ಅಧಿಕಾರಕ್ಕೆ ಬಂದರೆ ವಿಧಾನ ಸೌಧದ ಬಾಗಿಲು ಕಿತ್ತು ಹಾಕುತ್ತೇನೆ. ವಿಧಾನಸೌಧದಲ್ಲಿ ದಲ್ಲಾಳಿಗಳಿಗೆ ಬ್ರೇಕ್ ಹಾಕುತ್ತೇನೆ ಎಂದಿದ್ದ ಸಿಎಂ ಕುಮಾರಸ್ವಾಮಿ ಅವೆರಡು ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ. ಇನ್ನೊಂದೆಡೆ ಕೆಲವು ವಿಷಯಗಳಲ್ಲಿ ದೋಸ್ತಿ ಪಕ್ಷಗಳಲ್ಲಿ ತಾಳ ಮೇಳ ಕೂಡಿ ಬರುತ್ತಿಲ್ಲ. ಇದು ಮಿತ್ರ ಪಕ್ಷಗಳಲ್ಲಿ ಸಮನ್ವಯ ಇಲ್ಲಾ ಎಂಬುದನ್ನು ಎತ್ತಿ ತೋರಿಸುತ್ತಿದೆ.

ಹೀಗೆ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ 100 ದಿನ ಪೂರೈಸುತ್ತಿರುವ ಸಂದರ್ಭದಲ್ಲಿ ನೆಗೆಟಿವ್ ಹಾಗೂ ಪಾಸಿಟಿವ್ ಎರಡು ಅಂಶಗಳು ಕಂಡು ಬರುತ್ತಿವೆ. ನೂರು ದಿನದ ಸಾಧನೆ ಮೇಲೆ ಜನಾಭಿಪ್ರಾಯ ರೂಪುಗೊಳ್ಳದಿರಬಹುದು. ಆದರೆ ಸರ್ಕಾರದ ಆರಂಭದ ದಿನಗಳ ನಡೆಯು ಸರ್ಕಾರದ ಒಟ್ಟಾರೆ ಸಾಧನೆಯ ಮೇಲೆ ಪರಿಣಾಮ ಬೀರುವುದಂತು ಹೌದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Coalition GovernmentcongressG Parameshwarhd kumaraswamyjdsPublic TVಕಾಂಗ್ರೆಸ್ಜಿ.ಪರಮೇಶ್ವರ್ಜೆಡಿಎಸ್ಪಬ್ಲಿಕ್ ಟಿವಿಸಮ್ಮಿಶ್ರ ಸರ್ಕಾರಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
7 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
17 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
25 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
32 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?