Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಈ ಬಾರಿ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಈ ಬಾರಿ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ

Bengaluru City

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಈ ಬಾರಿ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ

Public TV
Last updated: October 30, 2024 5:02 pm
Public TV
Share
3 Min Read
DK Shivakumar 3 1
SHARE

ಬೆಂಗಳೂರು: ಚನ್ನಪಟ್ಟಣಕ್ಕೆ (Channapatna) ಕುಮಾರಸ್ವಾಮಿ (HD Kumaraswamy) ಏನೂ ಕೆಲಸ ಮಾಡಿಲ್ಲ. ಹೀಗಾಗಿ ಈ ಬಾರಿ ಚನ್ನಪಟ್ಟಣದ ಜನ ಕಾಂಗ್ರೆಸ್ (Congress) ಕೈ ಹಿಡಿಯುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ (By Election) ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಚುನಾವಣೆ ಮಾಡುತ್ತಿಲ್ಲ. ನಾನು, ರಾಮಲಿಂಗಾ ರೆಡ್ಡಿ ಅವರು ಸ್ಥಾನ ತೆರವಾದಾಗಿನಿಂದ ಕೆಲಸ ಮಾಡುತ್ತಿದ್ದೇವೆ. ಪ್ರತಿ ಮನೆ ಬಾಗಿಲಿಗೆ ಸರ್ಕಾರ ಹೋಗಿ ಕಷ್ಟ-ಸುಖ ಕೇಳಿದ್ದೇವೆ. ಪ್ರತಿ ಜಿಲ್ಲಾ ಪಂಚಾಯ್ತಿ, ನಗರ ಪಂಚಾಯ್ತಿ ಯಾರಿಗೆ ಏನು ಅಂತ ಸಮಸ್ಯೆ ಎಂದು ಕೇಳಿದ್ದೇವೆ. 22 ಸಾವಿರ ಕುಟುಂಬಗಳು ನನಗೆ ಅರ್ಜಿ ಸಲ್ಲಿಕೆ ಮಾಡಿವೆ. ಮನೆ ಕೊಟ್ಟಿಲ್ಲ, ರಸ್ತೆ ಇಲ್ಲ. ಬಗರಹುಕಂ ಜಾಗ ಕೊಟ್ಟಿಲ್ಲ ಎಂದು ನೋವು ಹೇಳಿ ಕೊಂಡಿದ್ದಾರೆ. ಯಾವ ಶಾಸಕರೂ ಬರಲಿಲ್ಲ. ಕುಮಾರಣ್ಣ ಬರಲಿಲ್ಲ. ಕುಮಾರಣ್ಣ ಇಂತಹ ಕಾರ್ಯಕ್ರಮ ಮಾಡಿಲ್ಲ ಎಂದು ದುಃಖ ನೋವು ಹೇಳಿಕೊಂಡಿದ್ದಾರೆ. ನಾನು ಸಿಎಂ ಬಳಿ ಹೋಗಿ 500 ಕೋಟಿ ವಿಶೇಷ ಅನುದಾನ ತೆಗೆದುಕೊಂಡು ಹೋಗಿ ನೀರಾವರಿ, ರಸ್ತೆಗೆ ಎಲ್ಲಾ ಮಾಡಿದ್ದೇವೆ. 5 ಸಾವಿರ ಮನೆಗಳನ್ನು ಮಂಜೂರಾತಿ ಮಾಡಿದ್ದೇವೆ. ಸೈಟ್ ಕೊಡಲು ಪ್ರಯತ್ನ ಮಾಡುತ್ತಿದ್ದೇವೆ. ನಮಗೆ ಎಲೆಕ್ಷನ್ ಮುಖ್ಯ ಅಲ್ಲ. ಜನರ ಬದುಕು ಬದಲಾವಣೆ ಮಾಡೋದು ಮುಖ್ಯ ಎಂದು ತಿಳಿಸಿದರು. ಇದನ್ನೂ ಓದಿ: ಜಮೀರ್ ಅಹ್ಮದ್ ಎರಡನೇ ಟಿಪ್ಪು, ಔರಂಗಜೇಬ್ ಥರ ಮೆರೆಯುತ್ತಿದ್ದಾರೆ: ಮುತಾಲಿಕ್

HD Kumaraswamy 1

ಕುಮಾರಸ್ವಾಮಿ ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂದು ಜನರಿಗೆ ಗೊತ್ತಾಗಿದೆ. ನಮಗೇನು ಬೇಜಾರು ಇಲ್ಲ. ಅವರ ಧರ್ಮಪತ್ನಿ ನಿಲ್ಲಿಸಿದ್ರು, ಅವರು ನಿಂತುಕೊಂಡ್ರು, ಈಗ ಮಗನನ್ನ ನಿಲ್ಲಿಸಿದ್ದಾರೆ. ಅದೆಲ್ಲ ನಿರೀಕ್ಷೆಯೇ. ಕಾರ್ಯಕರ್ತರನ್ನು ನಿಲ್ಲಿಸೋದಿಲ್ಲ ಎಂದು ನಮಗೂ ಗೊತ್ತಿತ್ತು.ನಮ್ ಡ್ಯೂಟಿ ನಾವು ಮಾಡ್ತಿದ್ದೇವೆ.ಚನ್ನಪಟ್ಟಣದ ಜನರ ಮೇಲೆ ನಮಗೆ ವಿಶ್ವಾಸ ಇದೆ. ನಮ್ಮ ಕೈ ಹಿಡಿಯುತ್ತಾರೆ. ನಮ್ಮ ಸರ್ಕಾರ ಬಲಿಷ್ಠವಾಗಿದೆ. ಸೇವೆ ಮಾಡುತ್ತೇವೆ. ಕುಮಾರಸ್ವಾಮಿ ಅಧಿಕಾರ ಇದ್ದಾಗ ಏನು ಮಾಡಲು ಆಗಿಲ್ಲ. ಇನ್ನು ಅಧಿಕಾರ ಇಲ್ಲದೇ ಇದ್ದಾಗ ಏನು ಮಾಡಲು ಸಾಧ್ಯ? ಅವರು ಏನೂ ಮಾಡಲು ಆಗಲ್ಲ ಎಂದು ಜನರಿಗೆ ಗೊತ್ತಿದೆ. ಇಲ್ಲಿ ಇರೋದು ರಾಜ್ಯ ಸರ್ಕಾರ. ಏನೇ ಆದರು ನಾವು ಮಾಡಬೇಕು. ಜನರ ಪಲ್ಲಕ್ಕಿ ಹೊರೋರು ನಾವೇ. ಜನರ ಕಷ್ಟಕ್ಕೆ ಆಗೋರು ನಾವೇ. ನಮ್ಮನ್ನ ಸ್ವೀಕಾರ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು. ಇದನ್ನೂ ಓದಿ: ತಾಲಿಬಾನ್‌ನಿಂದ ಮಹಿಳೆಯರ ಮೇಲೆ ಹೊಸ ನಿರ್ಬಂಧ – ಮಹಿಳೆಯರ ಧ್ವನಿ ಪರಸ್ಪರ ಕೇಳದಂತೆ ಆದೇಶ

ಯದುವೀರ್ ಒಡೆಯರ್ ಅವರನ್ನು ಸ್ಟಾರ್ ಪ್ರಚಾರಕರಾಗಿ ಬಳಕೆ ಮಾಡಿಕೊಳ್ಳುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಾರ್ಟಿ ಅವರು ಯಾರನ್ನಾದ್ರು ಮಾಡಿಕೊಳ್ಳಲಿ. ನಾನು ಯಾಕೆ ಯದುವೀರ್ ಬರೋದು ಬೇಡ ಅಂತ ಹೇಳಲಿ. ಯದುವೀರ್ ಬರಲಿ ಯಾರಾದ್ರು ಬರಲಿ. ಅವರ ನಾಯಕರು, ಅವರ ಕುಟುಂಬದವರು ಬರಲಿ ತಪ್ಪೇನು ಇಲ್ಲ. ಅವರ ಕರ್ತವ್ಯ ಅವರು ಮಾಡಿಕೊಳ್ಳಲಿ. ನಮಗೆ ಜನ ಇದ್ದಾರೆ. ನಾವು ಶ್ರಮ ಪಡುತ್ತಿದ್ದೇವೆ. ನಮಗೆ ಫಲ ಸಿಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ವಿಚಾರವಾಗಿ ಬಿಜೆಪಿ ಪ್ರತಿಭಟನೆ ರಾಜಕೀಯ ಪ್ರೇರಿತ: ಡಿಕೆಶಿ

ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಜಾತಿ ಮೇಲೆ ರಾಜಕೀಯ ಮಾಡಲ್ಲ. ನಾವು ನೀತಿ ಮೇಲೆ ರಾಜಕೀಯ ಮಾಡೋರು. ಎಲ್ಲಾ ವರ್ಗದ ಜನರು ಅಲ್ಲಿ ಇದ್ದಾರೆ. ನಮಗೆ ಜಾತಿ ಇಲ್ಲ. ನೀತಿ ಮುಖ್ಯ. ಜಾತಿ ಮೇಲೆ ಯಾರು ಬೇಕಾದರೂ ರಾಜಕೀಯ ಮಾಡಿಕೊಳ್ಳಲಿ. ನಾವು ಮಾಡೋದಿಲ್ಲ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ತೇರದಾಳದ 111 ಮಂದಿ ರೈತರಿಗೆ ವಕ್ಫ್‌ ನೋಟಿಸ್‌

TAGGED:bengaluruChannapatnacongressDK Shivakumarhd kumaraswamyಕಾಂಗ್ರೆಸ್ಚನ್ನಪಟ್ಟಣಡಿಕೆ ಶಿವಕುಮಾರ್ಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
10 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
20 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
36 minutes ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
39 minutes ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
1 hour ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?