Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ

Bengaluru City

ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ

Public TV
Last updated: November 11, 2021 6:31 pm
Public TV
Share
3 Min Read
KUMARASWAMY
SHARE

-ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?
-ಜಾಮೀನು ಖಾತರಿ ಕೊಟ್ಟವರು ಯಾರು?
-ಗಾಜಿನ ಮನೆಯಲ್ಲಿ ಕೂತು ಕಾಂಗ್ರೆಸ್ ಕಲ್ಲು ಹೊಡೆಯುತ್ತಿದೆ

ಬೆಂಗಳೂರು: ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಜನತಾ ಪರ್ವ 1.0 ಎರಡನೇ ಹಂತದ ಕಾರ್ಯಗಾರ ಜನತಾ ಸಂಗಮದ ನಾಲ್ಕನೇ ದಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ. ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಚೆನ್ನಾಗಿ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ?: ಬಿಜೆಪಿ ಟ್ವೀಟ್ ವಾರ್

ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?:
ಬಿಟ್ ಕಾಯಿನ್ ಹಗರಣದ ಮುಖ್ಯ ಆರೋಪಿಗೆ ಜಾಮೀನು ಸಿಕ್ಕಿದ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು, ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಎಂದು ಪ್ರಶ್ನಿಸಿದರು.

ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜೊತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟವಾಗಿದೆ. ಬಿಟ್ ಕಾಯಿನ್ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ. ಸರ್ಕಾರದ ಪರ ವಕೀಲರು ಎಷ್ಟರ ಮಟ್ಟಿಗೆ ವಾದ ಮಂಡಿಸಿದ್ದಾರೆ ಎನ್ನುವುದೂ ಮುಖ್ಯ. ಇಲ್ಲಿ ಯಾರಿಂದ ಯಾರ ರಕ್ಷಣೆ ಆಗಿದೆ? ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ:  ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

ಹಗರಣ ತನಿಖೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೂಕ್ತ ತನಿಖೆ ಆಗಲಿ ಅಂತ ಅವರು ಪತ್ರ ಬರೆದಿರಬಹುದು. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಒಳಗೊಂಡಿದ್ದಾರೆ ಎನ್ನುವ ಮಾತೂ ಇದೆ. ಪದೇ ಪದೆ ಹೀಗಾದರೆ ಜನ ಯಾರನ್ನು ನಂಬಬೇಕು. ಒಬ್ಬರಿಂದ ಜನರು ಎಲ್ಲಾ ರಾಜಕಾರಣಿಗಳ ಕಡೆ ಕೈ ತೋರಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಭಾರತದ ಮಾನ ಹರಾಜು ಆಗಬಾರದು ಅಂತ ಒಂದಿಷ್ಟು ಜನರ ಮಾಹಿತಿಯನ್ನು ಹೊರಬಿಟ್ಟಿಲ್ಲ ಅಂತ ಕಾಣುತ್ತೆ. ಆದಷ್ಟು ಬೇಗ ಜನತೆಗೆ ಸತ್ಯ ತಿಳಿಯಲಿ. ಪ್ರಧಾನ ಮಂತ್ರಿಯವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಅವರಿಗೆ ಮುಜುಗರ ಅಗಿರುವ ಕಾರಣಕ್ಕೆ ಇಡೀ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ಇದನ್ನೂ ಓದಿ: ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

ಗಾಜಿನ ಮನೆಯಲ್ಲಿ ಕೂತು ಕಾಂಗ್ರೆಸ್ ಕಲ್ಲು ಹೊಡೆಯುತ್ತಿದೆ:
ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ? ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಕೆಲ ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೆ, ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಮಾರ್ಮಿಕವಾಗಿ ಹೇಳಿದರು. ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಾಕ್ಷಿ ಸಮೇತ ಹೋರಾಟ ಮಾಡಿದ್ದು ಜೆಡಿಎಸ್ ಮಾತ್ರ. ನಮ್ಮ ಹೋರಾಟದ ಫಲವಾಗಿ ಯಾರೆಲ್ಲ ಜೈಲಿಗೆ ಹೋದರು ಎನ್ನುವುದು ಜನತೆಗೆ ಗೊತ್ತಿದೆ ಎಂದರು.

ಸರ್ಕಾರ ಏನು ಮಾಡುತ್ತಿದೆ?:

ರಾಜ್ಯದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ರೈತರು, ಸಾಮಾನ್ಯ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳು, ಅಧಿಕಾರಿಗಳು ಏನು ಮಾಡುತ್ತಿದ್ದರೋ ಗೊತ್ತಿಲ್ಲ. ಅವರಿಗೆಲ್ಲ ಯಾರು ಕೆಲಸ ಹೇಳುತ್ತಿದ್ದರೋ ತಿಳಿಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತ ಪರಿಸ್ಥಿತಿ ಇದೆ. ಯಾರೂ ಜನರ ಸಮಸ್ಯೆ ಆಲಿಸುತ್ತಿಲ್ಲ. ಆಡಳಿತ ಯಂತ್ರ ಕುಸಿಯುವ ಹಂತಕ್ಕೆ ಹೋಗುವುದರೊಳಗೆ ಅತ್ತ ಸರ್ಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ವ್ಯಕ್ತ ಮಾಡಿರುವ ಅಭಿಪ್ರಾಯವನ್ನು ಎಲ್ಲರೂ ಗಮನಿಸಬೇಕು. ಮುಖ್ಯ ಆಯುಕ್ತರನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನ್ಯಾಯಾಲಯ ಸರ್ಕಾರಕ್ಕೆ ನೀಡಿದೆ. ಇದೆಲ್ಲವನ್ನು ಸರ್ಕಾರ ಕೂಡಲೇ ಸರಿ ಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಇದನ್ನೂ ಓದಿ: ಬೊಮ್ಮಾಯಿ ಮಾತಾಡೋದು ನೋಡಿದ್ರೆ ಅನುಮಾನ ಬರ್ತಿದೆ: ಸಿದ್ದರಾಮಯ್ಯ 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ ಗೌಡ ಹಾಜರಿದ್ದರು.

TAGGED:bitcoinbjpcongressJan Dhan AccountsKumaraswamyPublic TVಕಾಂಗ್ರೆಸ್ಜನಧನ್ ಖಾತೆನರೇಂದ್ರ ಮೋದಿಬಿಟ್ ಕಾಯಿನ್ಬಿಬಿಎಂಪಿಹೈಕೋರ್ಟ್
Share This Article
Facebook Whatsapp Whatsapp Telegram

Cinema news

Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows
Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows

You Might Also Like

Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
26 minutes ago
College student dies after car hits bicycle in Channarayapatna
Crime

ಚನ್ನರಾಯಪಟ್ಟಣ | ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ

Public TV
By Public TV
27 minutes ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
29 minutes ago
Bengaluru Airport
Chikkaballapur

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!

Public TV
By Public TV
30 minutes ago
Bengaluru Traffic 1
Bengaluru City

ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ Top-1 – ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಬೆಂಗಳೂರು

Public TV
By Public TV
1 hour ago
Bhojshala site
Court

ಮಧ್ಯಪ್ರದೇಶದ ಧಾರ್‌ನ ಭೋಜ್‌ಶಾಲಾದಲ್ಲಿ ಪ್ರಾರ್ಥನೆ ವಿವಾದ; ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ‘ಸುಪ್ರೀಂ’ ಅವಕಾಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?