Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೂರು ದಿನ ಕುಂಭಮೇಳಕ್ಕೆ ಸಕಲ ಸಿದ್ಧತೆ – 140 ಯೋಧರಿಂದ ನದಿಯ ಮಧ್ಯೆಯೇ ಸೇತುವೆ

Public TV
Last updated: February 17, 2019 7:51 am
Public TV
Share
2 Min Read
MYS KUMBAMELA
SHARE

ಮೈಸೂರು: ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆಯುವ ಕುಂಭಮೇಳಕ್ಕೆ ಬರದ ಸಿದ್ಧತೆ ನಡೆಯುತ್ತಿದೆ. 5 ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಪುಣ್ಯಸ್ನಾನಕ್ಕೆ ಆಗಮಿಸುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ. ದಕ್ಷಿಣ ಭಾರತದ ಹನ್ನೊಂದನೆಯ ಕುಂಭಮೇಳಕ್ಕೆ ದಿನಗಣನೆ ಶುರುವಾಗಿದ್ದು, ಸೇನಾ ಸಿಬ್ಬಂದಿಯಿಂದಲೂ ಕುಂಭಮೇಳಕ್ಕೆ ಸಾಥ್ ಸಿಕ್ಕಿದೆ.

ಕುಂಭಮೇಳ ಅಂದೊಡನೆ ನಮಗೆ ನೆನಪಿಗೆ ಬರೋದು ಉತ್ತರ ಭಾರತ. ಅಲ್ಲಿ ನಡೆಯುವ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ಹೇಗೆ ಪುಣ್ಯಸ್ನಾನ ಮಾಡುತ್ತಾರೋ ಅದೇ ರೀತಿಯಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆಯುವ ಕುಂಭಮೇಳಕ್ಕೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪುಣ್ಯಸ್ನಾನ ಮಾಡುತ್ತಾರೆ. ಇಲ್ಲಿನ ಕಾವೇರಿ, ಕಪಿಲ, ಸ್ಪಟಿಕ ಸರೋವರ ಮೂರು ನದಿಗಳ ಸಂಗಮವಾಗುವ ಸ್ಥಳದಲ್ಲಿ ವಿಶೇಷ ಪೂಜೆ ಪುನಸ್ಕಾರಗಳ ಮೂಲಕ ಮಹಾಕುಂಭಮೇಳಕ್ಕೆ ಚಾಲನೆ ಸಿಗಲಿದೆ.

vlcsnap 2019 02 17 07h47m42s360

ಇದೇ ತಿಂಗಳ ಫೆ.17, 18, 19 ಈ ಮೂರು ದಿನಗಳ ಕಾಲ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. 1989 ರಿಂದ ನಡೆಸಿಕೊಂಡು ಬರುತ್ತಿರುವ ಈ ಕುಂಭಮೇಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಈ ಬಾರಿ ಶ್ರೀವಿಳಂಬಿ ನಾಮ ಸಂವತ್ಸರದಲ್ಲಿ 11ನೇ ಕುಂಭಮೇಳ ನಡೆಯುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿದೆ.

ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರ ಇಲ್ಲಿ ಸಂಗಮವಾಗುವ ಹಿನ್ನೆಲೆಯಲ್ಲಿ ಅದೇ ಸ್ಥಳದಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆಯುತ್ತಿದ್ದು, ಮರಳು ಹಾಗೂ ದಿಮ್ಮಿಗಳನ್ನ ಹಾಕಿ ಸೇನಾ ಸಿಬ್ಬಂದಿ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. ನದಿಯ ಮಧ್ಯದಲ್ಲಿ ಸೇತುವೆ ನಿರ್ಮಿಸಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಲಾಗಿದೆ. ಗುಂಜಾನರಸಿಂಹಸ್ವಾಮಿ ಹಾಗೂ ಅಗಸ್ಥ್ಯೇಶ್ವರ ದೇಗುಲದ ಮಧ್ಯಭಾಗದ ನದಿಯಲ್ಲಿ ಪೂಜೆ ನಡೆಯಲಿದ್ದು, ಅಲ್ಲಿಗೆ ಹೋಗಲು ಭಕ್ತರಿಗೆ ನದಿಯ ಮಧ್ಯದಲ್ಲಿ ದಾರಿ ಮಾಡಲಾಗಿದೆ ಎಂದು ಸ್ವಾಮೀಜಿ ಸೋಮನಾಥ ತಿಳಿಸಿದ್ದಾರೆ.

MYS

ನದಿಯ ಮಧ್ಯದಲ್ಲಿ ಸೇತುವೆ:
ಟಿ.ನರಸೀಪುರ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಐತಿಹಾಸಿಕ ಕುಂಭಮೇಳಕ್ಕೆ ಜಿಲ್ಲಾಡಳಿತ ಸಜ್ಜಾಗುತ್ತಿದೆ. ಈ ಬಾರಿಯ ಪ್ರಮುಖ ಆಕರ್ಷಣೆಯಾಗಿರುವ ತಾತ್ಕಾಲಿಕ ತೂಗು ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಮುಗಿದಿದೆ. ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಸೋಪಾನ ಕಟ್ಟೆಯಿಂದ ಧಾರ್ಮಿಕ ಸಭೆ ನಡೆಯುವ ಸ್ಥಳದವರೆಗೆ ಕಪಿಲಾ ನದಿಗೆ ಅಡ್ಡಲಾಗಿ ಭಾರತೀಯ ಸೇನೆ ಯೋಧರು ಕಟ್ಟಿರುವ ತೂಗು ಸೇತುವೆ ಇದಾಗಿದೆ.

160 ಮೀಟರ್ ಉದ್ದದ 3 ಮೀಟರ್ ಅಗಲದ ತೂಗು ಸೇತುವೆಯನ್ನ ಸುಮಾರು 140 ಯೋಧರು ಶ್ರಮಿಸಿ ಮೂರು ದಿನಗಳಲ್ಲಿ ನಿರ್ಮಿಸಿದ್ದಾರೆ. ಜಿಲ್ಲಾಧಿಕಾರಿ ಅಭಿರಾಮ್. ಜಿ. ಶಂಕರ್ ಹಾಗೂ ಮೇಜರ್ ಜನರಲ್ ಕೆ.ಜೆ.ಬಾಬು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯೋಧರ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಹ್ಯಾಟ್ಸಾಫ್ ಹೇಳಿದ್ದಾರೆ. ಬಳಿಕ ತೂಗು ಸೇತುವೆಯನ್ನ ಜಿಲ್ಲಾಡಳಿತದ ವಶಕ್ಕೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ಒಟ್ಟಿನಲ್ಲಿ 11ನೇ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದ್ದು, ಪ್ರತಿ ಹಂತದ ಸಿದ್ಧತೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:devoteesKumbh MelamysurupolicePublic TVಕುಂಭಮೇಳಾಪಬ್ಲಿಕ್ ಟಿವಿಪೊಲೀಸ್ಭಕ್ತರುಮೈಸೂರು
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
1 hour ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
2 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
6 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
7 hours ago

You Might Also Like

Madikeri Omkareshwara Temple
Districts

Madikeri | ಓಂಕಾರೇಶ್ವರ ದೇವಾಲಯದ ಕಲ್ಯಾಣಿ ಭರ್ತಿಗೆ ಒಂದೇ ಮೆಟ್ಟಿಲು ಬಾಕಿ

Public TV
By Public TV
6 minutes ago
Arvind Bellad
Bengaluru City

ರಾಜ್ಯ ಸರ್ಕಾರಕ್ಕೆ ಮುಖಭಂಗ, ಓಲೈಕೆ ರಾಜಕಾರಣ ಬಿಟ್ಟು ಜನರ ಹಿತ ಕಾಪಾಡಲಿ: ಅರವಿಂದ್ ಬೆಲ್ಲದ್

Public TV
By Public TV
16 minutes ago
horrible accident between lorry and bike in mysuru two killed
Crime

ಲಾರಿ, ಬೈಕ್ ನಡುವೆ ಭೀಕರ ಅಪಘಾತ – ಹಾರಿ ಹೋದ ಬೈಕ್ ಸವಾರನ ರುಂಡ

Public TV
By Public TV
28 minutes ago
Sunil Kumar 2
Bengaluru City

ಡಿಕೆಶಿ ಹೇಳಿಕೆಗೆ ಭಾರೀ ವಿರೋಧ; ಗ್ಯಾರಂಟಿಯಿಂದ ಮಂಗಳೂರಿಗರು ಹೊಟ್ಟೆಬಟ್ಟೆ ಕಟ್ಟಿಕೊಳ್ತಿಲ್ಲ: ಸುನಿಲ್ ಕುಮಾರ್

Public TV
By Public TV
44 minutes ago
RCB vs PBKS
Cricket

ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

Public TV
By Public TV
44 minutes ago
N Ravikumar
Bengaluru City

ಡಿಸಿ ಬಗ್ಗೆ ವಿವಾದಾತ್ಮಕ ಹೇಳಿಕೆ | ಕರ್ನಲ್ ಸೋಫಿಯಾ ವಿರುದ್ಧದ ಹೇಳಿಕೆಗೆ ಆದೇಶ ಗೊತ್ತಾ? – ರವಿಕುಮಾರ್‌ಗೆ ಹೈಕೋರ್ಟ್ ಚಾಟಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?