ಚಿತ್ರದುರ್ಗ: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ (Maha Kumbh 2025) ಕಾಲ್ತುಳಿತಕ್ಕೆ ಸಿಕ್ಕಿ ಕರ್ನಾಟಕ ಮೂಲದ ನಾಗ ಸಾಧು (Naga Sadhu) ಸಾವನ್ನಪ್ಪಿರುವ ಪ್ರಕರಣತಡವಾಗಿ ಬೆಳಕಿಗೆ ಬಂದಿದೆ.
ಚಿತ್ರದುರ್ಗದ ಬಂಜಾರ ಗುರು ಪೀಠದಲ್ಲಿ ಕಳೆದ 7 ವರ್ಷಗಳಿಂದ ನೆಲೆಸಿದ್ದ ನಾಗಸಾಧು ರಾಜನಾಥ್ ಮಹಾರಾಜ್(49) ಕಾಲ್ತುಳಿತಕ್ಕೆ ಸಿಲುಕಿ ದುರ್ಮರಣಕ್ಕಿಡಾಗಿದ್ದಾರೆ. ಕಳೆದ ಒಂದು ವಾರದ ಹಿಂದೆಯಷ್ಟೇ ಕುಂಭಮೇಳಕ್ಕೆ ತೆರಳಿದ್ದ ರಾಜನಾಥ್ ಮಹಾರಾಜ್ ಬಂಜಾರ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್ ಶ್ರೀಗಳ ಒಡನಾಡಿಯಾಗಿದ್ದರು. ಇದನ್ನೂ ಓದಿ: ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ
ಇವರ ಸಾವಿನ ಬಗ್ಗೆ ಉತ್ತರಪ್ರದೇಶದ ಪೊಲೀಸರು, ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಜನಾಥ್ ಸಾವಿನ ಬಗ್ಗೆ ಖಚಿತ ಪಡಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗದಲ್ಲಿ ಲಂಬಾಣಿ ಗುರುಪೀಠದ ಸರ್ಧಾರ್ ಸೇವಾಲಾಲ್ ಸ್ವಾಮೀಜಿ ʻಪಬ್ಲಿಕ್ ಟಿವಿʼಜೊತೆಗೆ ಮಾತನಾಡಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣೆ ಹೊತ್ತಲ್ಲೇ ಎಎಪಿಗೆ ಶಾಕ್ – ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಿಗೆದ್ದು ಐವರು ಶಾಸಕರು ರಾಜೀನಾಮೆ
ಚಿತ್ರದುರ್ಗಕ್ಕೆ ರಾಜನಾಥ್ ಮಹಾರಾಜರ ಪಾರ್ಥಿವ ಶರೀರವನ್ನು ತಲುಪಿಸುವಂತೆ ಉತ್ತರಪ್ರದೇಶ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಕ್ಕೆ ಸರ್ಧಾರ್ ಸೇವಾಲಾಲ್ ಸ್ವಾಮೀಜಿ ಮನವಿ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಿಂದ ಸಾವುನೋವಾಗದಂತೆ ಕ್ರಮವಹಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗ್ರಾಪಂ ಮಾಜಿ ಅಧ್ಯಕ್ಷನ ಮಗನ ಕೊಲೆ – ಚರಂಡಿಯಲ್ಲಿ ಶವ ಮುಚ್ಚಿಹಾಕಿ ಕೊಲೆಗಾರ ಎಸ್ಕೇಪ್