Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂದಗೋಳ ಉಪ ಕದನ: ಕೈ, ಕಮಲ ಅಭ್ಯರ್ಥಿಗಳ ಪ್ಲಸ್, ಮೈನಸ್ ಏನು? 2018 ಫಲಿತಾಂಶ ಏನಿತ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಂದಗೋಳ ಉಪ ಕದನ: ಕೈ, ಕಮಲ ಅಭ್ಯರ್ಥಿಗಳ ಪ್ಲಸ್, ಮೈನಸ್ ಏನು? 2018 ಫಲಿತಾಂಶ ಏನಿತ್ತು?

Bengaluru City

ಕುಂದಗೋಳ ಉಪ ಕದನ: ಕೈ, ಕಮಲ ಅಭ್ಯರ್ಥಿಗಳ ಪ್ಲಸ್, ಮೈನಸ್ ಏನು? 2018 ಫಲಿತಾಂಶ ಏನಿತ್ತು?

Public TV
Last updated: May 7, 2019 12:10 pm
Public TV
Share
3 Min Read
Kundagola
SHARE

ಬೆಂಗಳೂರು: ಲೋಕಸಭಾ ಚುನಾವಣೆಯ ಗುಂಗಿನಿಂದ ಹೊರ ಬಂದಿರುವ ರಾಜ್ಯ ನಾಯಕರು ಉಪ ಕದನದತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಹೊಂದಿದ್ರೆ, ಬಿಜೆಪಿ ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಜನರು ಮೈತ್ರಿ ಸರ್ಕಾರದ ವಿರುದ್ಧ ನಿಂತಿದ್ದಾರೆ ಎಂಬುದನ್ನು ತೋರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಬಹುತೇಕ ರಾಜಕೀಯ ಮುಖಂಡರು ಉಪ ಕದನಗಳ ಕ್ಷೇತ್ರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.

DK Shivakumar Kusuma

ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ತೆರವಾದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಸ್ಥಳೀಯ ನಾಯಕರ ಬಂಡಾಯದ ನಡುವೆಯೂ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ನೀಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್‍ನಿಂದ ಬಂಡಾಯ ಬಾವುಟ ಹಿಡಿದು ಶಿವಾನಂದ್ ಬೆಂತೂರು ಸೇರಿದಂತೆ ಆರು ಕೈ ನಾಯಕರು ನಾಮಪತ್ರ ಸಲ್ಲಿಸಿದ್ದರು. ಸಚಿವ ಜಮೀರ್ ಅಹ್ಮದ್ ಸಂಧಾನ ನಡೆಸಿ ಭಿನ್ನಮತರು ನಾಮಪತ್ರ ಹಿಂಪಡೆಯುವಂತೆ ಮಾಡಿದ್ದರು.

Kundagola 3 copy

2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎಸ್.ಶಿವಳ್ಳಿ ವಿರುದ್ಧ ನಿಂತು ಗೆಲುವಿನ ಸನಿಹಕ್ಕೆ ಬಂದು ಸೋಲು ಕಂಡಿದ್ದ ಎಸ್.ಐ.ಚಿಕ್ಕನಗೌಡರ ಮತ್ತೊಮ್ಮೆ ಕಮಲದ ಬಾವುಟ ಹಿಡಿದಿದ್ದಾರೆ. 2018ರ ಚುನಾವಣೆಯ ಚಿಕ್ಕನಗೌಡರ ಸೋಲನ್ನಪ್ಪಿದ ಹಿನ್ನೆಲೆಯಲ್ಲಿ ಬೇರೆ ನಾಯಕರಿಗೆ ಟಿಕೆಟ್ ನೀಡಬೇಕೆಂಬ ಸಣ್ಣ ಕೂಗು ಕೇಳಿ ಬಂದಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಬಂಧಿಯೂ ಆಗಿರುವ ಚಿಕ್ಕನಗೌಡರು ಬಿಜೆಪಿ ಟಿಕೆಟ್ ಪಡೆದು ಉಪ ಕದನ ಅಖಾಡದಲ್ಲಿದ್ದಾರೆ.

ಇದೇ ಮೇ 19ಕ್ಕೆ ಕುಂದಗೋಳದಲ್ಲಿ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳಿಗಿಂತ ರಾಜ್ಯ ನಾಯಕರೇ ಕುಂದಗೋಳ ಅಖಾಡವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಂತೆ ಕಾಣುತ್ತಿದೆ. ಕಸುಮಾ ಶಿವಳ್ಳಿ ಗೆಲುವಿನ ಜವಾಬ್ದಾರಿಯನ್ನು ಕೈ ಕಮಾಂಡ್ ಡಿ.ಕೆ.ಶಿವಕುಮಾರ್ ಹೆಗಲಿಗೆ ವರ್ಗಾಯಿಸಿದೆ. ಇತ್ತ ಚಿಕ್ಕನಗೌಡರ ಪರವಾಗಿ ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

Kundagol BJP 2

ಮತದಾರರು (2018ರ ಪ್ರಕಾರ)
ಒಟ್ಟು ಮತದಾರರು: 1,84,730
ಪುರುಷ ಮತದಾರರು: 95,628
ಮಹಿಳಾ ಮತದಾರರು: 89,102
ಮತದಾನ ಮಾಡಿದವರು: 1,46,492 (79.9%)

ಜಾತಿ ಲೆಕ್ಕಾಚಾರ
ಪಂಚಮಸಾಲಿ- 50,000
ಮುಸ್ಲಿಂ -35,000
ಕುರುಬ – 25,000
ಮಾದಿಗ, ಚಲಚಾದಿ ಹರಣಶೀಖಾರಿ – 25,000
ವಾಲ್ಮೀಕಿ ಮತ್ತು ಇತರೇ ಪರಿಶಿಷ್ಠ ಪಂಗಡ -10,000
ಸಾದರು – 12,000
ಗಾಣಿಗೇರ -10,500
ಮರಾಠಾ – 5.000
ಜಂಗಮರು – 5,000
ಬ್ರಾಹ್ಮಣರು- 2,500
ಇತರೇ – 6,281

2018ರ ಫಲಿತಾಂಶ:
2018ರಲ್ಲಿ ನಡೆದ ಕುಂದಗೋಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಒಟ್ಟು 10 ಜನರು ಸ್ಪರ್ಧೆ ಮಾಡಿದ್ದರು. ಕುಂದಗೋಳ ಕ್ಷೇತ್ರದಲ್ಲಿ ಶೇ.79.9ರಷ್ಟು ಮತದಾನ ನಡೆದಿತ್ತು. ಸಿ.ಎಸ್.ಶಿವಳ್ಳಿ ಅಲ್ಪ ಮತಗಳ ಮುನ್ನಡೆ ಪಡೆದು ಗೆಲುವು ದಾಖಲಿಸಿ, ಸಂಪುಟದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಸಿ.ಎಸ್.ಶಿವಳ್ಳಿ 64,871 (44.3%) ಮತಗಳನ್ನು ಪಡೆದಿದ್ದರು. ಬಿಜೆಪಿಯ ಎಸ್.ಐ.ಚಿಕ್ಕನಗೌಡರ 64,237 (43.9%) ಮತಗಳನ್ನು ಪಡೆದು 634 ವೋಟ್ ಗಳ ಅಂತರದಲ್ಲಿ ಸೋಲು ಕಂಡಿದ್ದರು. ಇನ್ನು ಜೆಡಿ(ಯು)ನಿಂದ ಸ್ಪರ್ಧೆ ಮಾಡಿದ್ದ ಹಜರತ್ ಅಲಿ 7,318 ಮತ ಪಡೆದುಕೊಂಡಿದ್ದರು. 1,032 ಮತದಾರರು ನೋಟಾ ಒತ್ತಿದ್ದರು.

Kundagola 2

2008ರಲ್ಲಿ ಬಿಜೆಪಿ ಮೊದಲ ಗೆಲುವು:
2008ರಲ್ಲಿ ಎಸ್.ಐ.ಚಿಕ್ಕನಗೌಡರ ಗೆಲುವು ಸಾಧಿಸುವ ಮೂಲಕ ಕುಂದಗೋಳ ಕಣದಲ್ಲಿ ಬಿಜೆಪಿಯ ಬಾವುಟ ಹಾರಿಸಿದ್ದರು. ತದನಂತರ 2013 ಮತ್ತು 2018ಲ್ಲಿ ಕಾಂಗ್ರೆಸ್‍ನ ಸಿ.ಎಸ್.ಶಿವಳ್ಳಿ ಗೆಲುವು ಕಂಡಿದ್ದರು. 1999ರಲ್ಲಿ ಮೊದಲು ಗೆಲುವು ಕಂಡಿದ್ದ ಶಿವಳ್ಳಿ, 2004 ಮತ್ತು 2008ರಲ್ಲಿ ಸೋಲಿನ ರುಚಿಯನ್ನು ನೋಡಿದ್ದರು.

ಕುಂದಗೋಳ ಉಪ ಕದನದಲ್ಲಿ 9 ಸ್ಪರ್ಧಿಗಳಿದ್ದಾರೆ. ಕುಸುಮಾ ಶಿವಳ್ಳಿ ವರ್ಸಸ್ ಎಸ್.ಐ.ಚಿಕ್ಕನಗೌಡರ ನಡುವಿನ ಜಿದ್ದಾಜಿದ್ದಿಗೆ ಕುಂದಗೋಳ ಸಾಕ್ಷಿಯಾಗಿದೆ. ಇಬ್ಬರು ಅಭ್ಯರ್ಥಿಗಳ ಪ್ಲಸ್ ಮತ್ತು ಮೈನಸ್ ಪಾಯಿಂಟ್ ಗಳು ಈ ಕೆಳಗಿನಂತಿವೆ.

cs shivalli

ಕುಸಮಾ ಶಿವಳ್ಳಿ:
ಪ್ಲಸ್ ಪಾಯಿಂಟ್
* ಸಿ.ಎಸ್.ಶಿವಳ್ಳಿ ಪತ್ನಿಯಾಗಿರುವ ಕುಸಮಾ ಶಿವಳ್ಳಿ ಅನುಕಂಪದ ಅಲೆ
* ಕುಂದಗೋಳ ಜವಾಬ್ದಾರಿ ಡಿ.ಕೆ.ಶಿವಕುಮಾರ್ ಹೆಗಲಿಗೆ
* ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆ
* ಕಾಂಗ್ರೆಸ್ ನಾಯಕರು ಪ್ರಚಾರದ ಅಖಾಡಕ್ಕೆ ಧುಮುಕಿರೋದು

Kusuma Shivalli copy

ಮೈನಸ್ ಪಾಯಿಂಟ್
* ಕುಟುಂಬ ರಾಜಕಾರಣ ಆರೋಪ-ಪತಿ ಬಳಿಕ ಪತ್ನಿಗೆ ಟಿಕೆಟ್
* ಕಾಂಗ್ರೆಸ್ ನಾಯಕರ ಆಂತರಿಕ ಕಲಹ (ಡಿ.ಕೆ.ಶಿವಕುಮಾರ್ ವರ್ಸಸ್ ಜಾರಕಿಹೊಳಿ ಬ್ರದರ್ಸ್)
* ಸ್ಥಳೀಯ ನಾಯಕರ ಬಂಡಾಯ
* ಅಲ್ಪ ಮತಗಳಿಂದ ಸೋತಿದ್ದ ಚಿಕ್ಕನಗೌಡರ ಪರ ಅನುಕಂಪದ ಅಲೆ
* ಮೈತ್ರಿ ಸರ್ಕಾರದ ಶೀತಲ ಸಮರ

ಎಸ್.ಐ.ಚಿಕ್ಕನಗೌಡರ
ಪ್ಲಸ್ ಪಾಯಿಂಟ್
* ಪ್ರಚಾರಕ್ಕೆ ಬಿಜೆಪಿ ನಾಯಕರ ಸಾರಥ್ಯ
* ಲೋಕಸಭಾ ಚುನಾವಣೆ ಇರೋದ್ರಿಂದ ಮೋದಿ ಅಲೆ ವರ್ಕೌಟ್ ಅಗಬಹುದು
* ಅಲ್ಪಮತಗಳ ಸೋಲಿನ ಅನುಕಂಪ
* ಸ್ಥಳೀಯ ಕಾಂಗ್ರೆಸ್ ನಾಯಕರ ಆಂತರಿಕ ಕಲಹ, ಭಿನ್ನಮತ

Kundagol BJP 3

ಮೈನಸ್ ಪಾಯಿಂಟ್
* ಕುಸಮಾ ಶಿವಳ್ಳಿ ಪರ ಅನುಕಂಪದ ಅಲೆ
* ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಜೆಡಿಎಸ್ ನಾಯಕರು ಸಾಥ್
* ಡಿ.ಕೆ.ಶಿವಕುಮಾರ್, ಜಮೀರ್ ಅಹ್ಮದ್ ಘಟಾನುಘಟಿ ನಾಯಕರಿಂದ ಪ್ರಚಾರ

TAGGED:bjpby-electionscongressCS Sivallielection commissionKusuma ShivalliPublic TVSI Chikanagowdaraಉಪ ಚುನಾವಣೆಉಪ ಚುನಾವಣೆ 2019ಎಸ್.ಐ.ಚಿಕ್ಕನಗೌಡರಕಾಂಗ್ರೆಸ್ಕುಂದಗೋಳಕುಸುಮಾ ಶಿವಳ್ಳಿಪಬ್ಲಿಕ್ ಟಿವಿಬಿಜೆಪಿಸಿ.ಎಸ್ ಶಿವಳ್ಳಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
5 minutes ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
12 minutes ago
big bulletin 28 February 2026 part 1
Big Bulletin

ಬಿಗ್‌ ಬುಲೆಟಿನ್‌ 28 February 2026 ಭಾಗ-1

Public TV
By Public TV
34 minutes ago
big bulletin 28 February 2026 part 2
Big Bulletin

ಬಿಗ್‌ ಬುಲೆಟಿನ್‌ 28 February 2026 ಭಾಗ-2

Public TV
By Public TV
35 minutes ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
42 minutes ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?