Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಪ್ಪೆಪದವು ದುರ್ಗೇಶ್ವರೀ ದೇವಿಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕುಪ್ಪೆಪದವು ದುರ್ಗೇಶ್ವರೀ ದೇವಿಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ

Dakshina Kannada

ಕುಪ್ಪೆಪದವು ದುರ್ಗೇಶ್ವರೀ ದೇವಿಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ

Public TV
Last updated: February 2, 2023 4:20 pm
Public TV
Share
2 Min Read
DURGESHWARI TEMPLE MANGALURU
SHARE

ಮಂಗಳೂರು: ದೈವ ದೇವಾಲಯಗಳ ತವರು ಕರಾವಳಿಯಲ್ಲಿ ಹಲವು ದೈವ ದೇವಸ್ಥಾನಗಳು‌ ಜೀರ್ಣೋದ್ಧಾರಗೊಳ್ಳುತ್ತಿವೆ. ಇವುಗಳ ಪೈಕಿ ಮಂಗಳೂರು ತಾಲೂಕಿನ ಅಂಚಿನಲ್ಲಿರುವ, ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳ ನಡುವೆ ಹರಿಯುವ ಪವಿತ್ರವಾದ ಪಲ್ಗುಣಿ ನದಿಯಿಂದ ಕೆಲವು ಮೀಟರ್ ದೂರದಲ್ಲಿರುವ ಕುಪ್ಪೆಪದವು ಪೇಟೆಯ ಹೃದಯಭಾಗದಲ್ಲಿ ನೆಲೆಸಿರುವ, ನಂಬಿ ಶರಣಾಗಿ ಬರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ವಾತ್ಸಲ್ಯಮಯಿ ಶ್ರೀದುರ್ಗೇಶ್ವರೀ ದೇವಿಯ ಕ್ಷೇತ್ರವೂ ಒಂದು.

DURGESHWARI TEMPLE MANGALURU 1

ಕ್ಷೇತ್ರದ ಆರಾಧ್ಯ ಮಂಗಳ ಮೂರ್ತಿಗೆ ಫೆಬ್ರವರಿ 12ರ ಭಾನುವಾರ ಮುಂಜಾನೆ ಪವಿತ್ರ ಬ್ರಹ್ಮಕಲಶೋತ್ಸವ ನೆರವೇರಲಿದೆ. ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿಯ ಸಾನಿಧ್ಯ ಇರುವ ಸ್ಥಳದಲ್ಲಿ ಮುರಾತನ ಕಾಲದಿಂದ ರಾಮಾಯಣ, ಮಹಾಭಾರತ ಅಲ್ಲದೇ 7 ದಿನಗಳ ಸಂಪೂರ್ಣ ದೇವಿ ಮಹಾತ್ಮೆ ಸಹಿತ ಇತರ ಪೌರಾಣಿಕ ಯಕ್ಷಗಾನ ಬಯಲಾಟಗಳು ಪ್ರದರ್ಶನಗೊಂಡ ರಂಗಸ್ಥಳದಲ್ಲಿ ಶ್ರೀದುರ್ಗೇಶ್ವರೀಯ ದಿವ್ಯ ಸಾನಿಧ್ಯ ಇರುವ ಬಗ್ಗೆ ದೈವಜ್ಞರ ಚಿಂತನಾ ಪ್ರಶ್ನೆಯಲ್ಲಿ ಕಂಡುಬ೦ದ ಹಿನ್ನಲೆಯಲ್ಲಿ, ಪೇಜಾವರ ಮಠಾಧೀಶ ದಿ| ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರಿಂದ ಶಿಲಾನ್ಯಾಸ ನೆರವೇರಿತ್ತು. ನಂತರ ದೇವಸ್ಥಾನ ನಿರ್ಮಾಣವಾಗಿ 1973-74 ರಲ್ಲಿ ಶ್ರೀದುರ್ಗೇಶ್ವರಿ ದೇವಿಯ ಪ್ರತಿಷ್ಠೆ ನಡೆದು ಬ್ರಹ್ಮಕಲಶೋತ್ಸವ ನಡೆದಿತ್ತು. ಇದನ್ನೂ ಓದಿ: ವಿವಾದಾತ್ಮಕ ಭಾಷಣ – ಶರಣ್ ಪಂಪ್‌ವೆಲ್‌ ವಿರುದ್ಧ FIR ದಾಖಲು

ಅಂದು ನಿರ್ಮಾಣವಾಗಿದ್ದ ದೇವಾಲಯ ಜೀರ್ಣಾವಸ್ಥೆ ತಲುಪಿದ್ದ ಹಿನ್ನಲೆಯಲ್ಲಿ ದೈವಜ್ಞ ವೇದಮೂರ್ತಿ ಪಂಜ ಭಾಸ್ಕರ ಭಟ್ ಅವರ ಸೂಚನೆಯನ್ವಯ, ಸೋಲೂರು ಆರ್ಯ-ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರ ಗೌರವಾಧ್ಯಕ್ಷತೆಯಲ್ಲಿ ಜೀರ್ಣೋದ್ದಾರ ಸಮಿತಿ ರಚಿಸಿ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಿಲೆಂಜಾರು, ಕುಲವೂರು ಮತ್ತು ಮುತ್ತೂರು ಗ್ರಾಮಗಳ ಭಕ್ತರು ತೀರ್ಮಾಣಿಸಿದಂತೆ ತೀರ್ಥ ಮಂಟಪ ಮತ್ತು ನೂತನ ಶಿಲಾಮಯ ಗರ್ಭಗೃಹ, ಗಣಪತಿ ಗುಡಿ, ಕೊಡಮಣಿತ್ತಾಯ ದೈವಸ್ಥಾನ,ಮತ್ತು ನಾಗಸನ್ನಿಧಿಯ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಸುಂದರವಾದ ದೇವಳದಲ್ಲಿ ಮಾತೆ ದುರ್ಗೆಯ ಪುನಃ ಪ್ರತಿಷ್ಠೆಗೆ ದಿನಗಣನೆ ಪ್ರಾರಂಭವಾಗಿದೆ. ಶ್ರೀದುರ್ಗೇಶ್ವರಿಯ ಇಚ್ಛೆಯಂತೆ, ಭಕ್ತರ ಸಹಕಾರದಿಂದ ಸುಂದರವಾದ ಶಿಲಾಮಯ ನೂತನ ದೇವಾಲಯ ನಿರ್ಮಾಣವಾಗಿದೆ. ಇದನ್ನೂ ಓದಿ: ಮೊಬೈಲ್ ನೋಡಲು ಬಿಡಲಿಲ್ಲವೆಂದು ಮನೆಯಲ್ಲೇ ನೇಣು ಬಿಗಿದು ಬಾಲಕ ಆತ್ಮಹತ್ಯೆ

ಕ್ಷೇತ್ರದ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಫೆಬ್ರವರಿ 7ರ ಮಂಗಳವಾರದಿಂದ ಪ್ರಾರಂಭಗೊಂಡು 12ರ ಭಾನುವಾರದವರೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಸಂಧರ್ಭದಲ್ಲಿ ಆಗಮಿಸುವ ಭಕ್ತರನ್ನು ಸ್ವಾಗತಿಸಲು ಬ್ರಹ್ಮಕಲಶೋತ್ಸವ ಸಮಿತಿಯ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಸುಸಜ್ಜಿತ ಪಾಕಶಾಲೆ, ಉಗ್ರಾಣ, ಸಭಾ ವೇದಿಕೆ, ಅನ್ನಛತ್ರದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬ್ರಹ್ಮಕಲಶೋತ್ಸವದಂದು ಸುಮಾರು 5 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಮೂಲಕ ಮತ್ತೊಂದು ಕ್ಷೇತ್ರವು ಲೋಕಮುಖಕ್ಕೆ ಪರಿಚಯವಾಗಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Brahmakalashotsav Mangaluruದುರ್ಗೇಶ್ವರೀ ದೇವಿಬಂಟ್ವಾಳಬ್ರಹ್ಮಕಲಶೋತ್ಸವ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
1 hour ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
2 hours ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
3 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?