ಮುಕುಡಪ್ಪ, ಪುಟ್ಟಸ್ವಾಮಿ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರ ಆಕ್ರೋಶ – ಮನೆ ಬಾಗಿಲು, ಗೇಟ್ ತಳ್ಳಿ ನುಗ್ಗೋ ಯತ್ನ

Public TV
2 Min Read
MUKUDAPPA HOME 2

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳಕಾರಿ, ಕೀಳುಮಟ್ಟದ ಪದ ಬಳಕೆ ಮಾಡಿದ ಮುಕಡಪ್ಪ (Mukudappa) ಮತ್ತು ಪುಟ್ಟಸ್ವಾಮಿ (Puttaswamy)  ವಿರುದ್ಧ ಮುಕುಡಪ್ಪರವರ ನಿವಾಸ ಎದುರು ಕುರುಬ ಸಮಾಜದ (Kuruba Community) ಮುಖಂಡರು, ಸಿದ್ದರಾಮಯ್ಯರವರ ಅಭಿಮಾನಿಗಳು ಪ್ರತಿಭಟನೆ ಮಾಡಿದರು.

Siddaramaiah 2

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಕೃಷ್ಣಮೂರ್ತಿ, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರ 45 ವರ್ಷಗಳ ರಾಜಕೀಯ ಜೀವನವನ್ನು ಕಪ್ಪುಚುಕ್ಕೆ ಇಲ್ಲದಂತೆ ಸಾಗಿಸಿದ್ದಾರೆ. ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯರವರಿಗೆ ಸಲ್ಲುತ್ತದೆ. ಅವರ ಆಡಳಿತದಲ್ಲಿ ಹಸಿವಿನಿಂದ ಯಾರು ಬಳಲಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಗೆ ತಂದು 4 ಕೋಟಿ ಜನರು ಈ ಯೋಜನೆಯ ಫಲಾನುಭವಿಗಳು, ಇಂದಿರಾ ಕ್ಯಾಂಟೀನ್ ಮತ್ತು ಜನತೆಗೆ ನೀಡಿದ 165 ಭರವಸೆಗಳನ್ನು ಪೂರೈಸಿದ ಮೊಟ್ಟ ಮೊದಲ ಸರ್ಕಾರ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಸರ್ಕಾರ. ಎಲ್ಲ ಧರ್ಮ, ಜಾತಿ,ವರ್ಗದವರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯಿಂದ ಅವರು ನೋಡುತ್ತಾರೆ. ಇಂದು ಕರ್ನಾಟಕ ಜನರ ಮನೆ ಮಾತಾಗಿರುವ ಸಿದ್ದರಾಮಯ್ಯರವರು ಹೆಸರಿಗೆ ಮಸಿ ಬಳೆಯಬೇಕು ಸಮಾಜದ ಪಟ್ಟಬದ್ರ ಹಿತಾಸಕ್ತಿಗಳು ಕುತಂತ್ರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸುದ್ದಿಗೋಷ್ಠಿ ಕರೆದು ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಮಾತು

MUKUDAPPA HOME

ಮುಕುಡಪ್ಪರವರು ಅಧಿಕಾರ ಇರುವ ಪಕ್ಷದ ಕಡೆ ವಾಲುತ್ತಾರೆ. ಮುಕುಡಪ್ಪ ಮತ್ತು ಪುಟ್ಟಸ್ವಾಮಿರವರು ಸಿದ್ಜರಾಮಯ್ಯರವರ ಆಡಿರುವ ಅವಹೇಳನಕಾರಿ, ಕೀಳುಮಟ್ಟದ ಪದ ಪ್ರಯೋಗಕ್ಕೆ ಕೊಡಲೆ ರಾಜ್ಯದ ಜನರು ಮುಂದೆ ಕ್ಷಮೆ ಕೇಳಬೇಕು ಇವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ನಮ್ಮ ರಾಜ್ಯಾದ್ಯಂತ ಹೋರಾಟ ಮುಂದುವರೆಯಲಿದೆ ಎಂದರು.

MUKUDAPPA HOME 1

ಪ್ರತಿಭಟನೆಯಲ್ಲಿ ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಜಿ.ಕೃಷ್ಣಮೂರ್ತಿ, ಆನಂದ್ ಕುಮಾರ್, ಮು.ಗಣೇಶ, ಕೆ.ಟಿ.ಗಣೇಶ್, ಶ್ರೀನಿವಾಸ್, ಸೋಮು, ಶಶಿ, ಕಾಂತಮಣಿ, ಮಂಜುಳರವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ರೂಂಗೆ ಹೋದ ನಂತ್ರ ಬಟ್ಟೆ ಬಿಚ್ಚಲು ಶ್ರೀಗಳು ಹೇಳ್ತಿದ್ದರು: ಹಳೆ ವಿದ್ಯಾರ್ಥಿನಿ ಸ್ಫೋಟಕ ಹೇಳಿಕೆ

kuruba samaja siddaramiah target

ಏನಿದು ವಿವಾದ?:
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮುಕುಡಪ್ಪ ಹಾಗೂ ಪುಟ್ಟಸ್ವಾಮಿ ಇಬ್ಬರು 20 ಕುರಿಗಳ ಮೇಲೆ ಒಂದು ಟಗರು ಎಗರಿ ಬೀಳುತ್ತೆ ಎಂದು ಮಾತನಾಡುತ್ತಿದ್ದರು. ಆ ವೇಳೆ ಮುಕುಡಪ್ಪ, ಯಾರು ಅಂತಾ ಅಲ್ಲ ಎಲ್ಲರೂ ಹೇಳುತ್ತಾರೆ. ಆಗ ಮುಕುಡಪ್ಪ, ಎಲ್ಲರದ್ದೂ ಅಷ್ಟೇ, ಕೆಲವರದ್ದು ಹೊರಗೆ ಬರುತ್ತೆ, ಕೆಲವರದ್ದು ಹೊರಗೆ ಬರಲ್ಲ ಅಷ್ಟೇ ಎಂದು ಹೇಳುತ್ತಾರೆ. ಆಗ ಸಿದ್ದರಾಮಯ್ಯ ಅವರನ್ನು ಹೆಸರನ್ನು ಪ್ರಸ್ತಾಪಿಸಿ ಅವಹೇಳನ ಮಾಡುತ್ತಾರೆ. ಸಿದ್ದರಾಮಯ್ಯನ ಬಗ್ಗೆ ಮಾತನಾಡುವಾಗ ಹುಷಾರು.. ಸೂ.. ಮಗಾ ಎಂದು ಹೇಳಿ ಮುಕ್ಕಡಪ್ಪ ನಗುತ್ತಾರೆ. ಅದಕ್ಕೆ ಪುಟ್ಟಸ್ವಾಮಿ ಪ್ರತಿಕ್ರಿಯಿಸಿ, ಹೌದು, ಅವನು ಬುದ್ಧಿವಂತ.. ಮನೆ ಒಳಗೆ ಸೇರಿಕೊಂಡುಬಿಡ್ತಾನೆ ಎಂದು ಹೇಳಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *