Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

Bengaluru City

ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

Public TV
Last updated: November 28, 2025 3:58 pm
Public TV
Share
2 Min Read
siddaramaiah
SHARE

– ಅಹಿಂದ ಸಮಾಜದ ನಾಯಕ ಸಿದ್ದರಾಮಯ್ಯ
– ಕಾಂಗ್ರೆಸ್‌ ಗೆಲ್ಲಲು ಸಿದ್ದರಾಮಯ್ಯ ಕಾರಣ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ಕುರ್ಚಿ ಕಿತ್ತಾಟದ ವಿಚಾರವಾಗಿ ಡಿಕೆ ಶಿವಕುಮಾರ್‌(DK Shivakumar) ಪರವಾಗಿ ಒಕ್ಕಲಿಗ ಸಮುದಾಯದ ಬ್ಯಾಟಿಂಗ್ ಬೆನ್ನಲ್ಲೇ ಸಿಎಂ ಪರವಾಗಿ ಕುರುಬ ಸಮಾಜ ಕೂಡ ಅಖಾಡಕ್ಕಿಳಿದಿದೆ. ಒಂದು ವೇಳೆ ಸಿದ್ದರಾಮಯ್ಯನವರನ್ನು (Siddaramaiah) ಸಿಎಂ ಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಮತ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ ಪ್ರದೇಶ ಕುರುಬ ಸಮಾಜದ (Kuruba Community) ಕಛೇರಿಯಲ್ಲಿ ಸಮುದಾಯದ ಶ್ರೀಗಳು, ಮುಖಂಡರು ಸಭೆ ಮಾಡಿ, ಸಿಎಂ ಸ್ಥಾನ ಬದಲಾವಣೆ ಮಾಡದಂತೆ ಒತ್ತಾಯಿಸಿ ಸಿಎಂ ಬೆನ್ನಿಗೆ ನಿಂತಿದ್ದಾರೆ.

ತಿಂಥಣಿ ಮಠದ ಸಿದ್ದರಾಮನಂದಪೂರಿ ಸ್ವಾಮೀಜಿ ಮಾತನಾಡಿ, ರಾಜ್ಯದ ಎಲ್ಲಾ ಕುರುಬ ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಇತ್ತೀಚಿಗೆ ರಾಜಕೀಯದ ಸುತ್ತ ಗೊಂದಲಗಳು ಹುಟ್ಟಿಕೊಂಡಿವೆ. ಅನೇಕ ಸಮುದಾಯಗಳು ಗೊಂದಲಗೊಂಡಿವೆ. ಅದರಲ್ಲಿ ಕುರುಬ ಸಮುದಾಯವು ಒಂದು. ಕಾಂಗ್ರೆಸ್ ಹೈಕಮಾಂಡ್ ಈ ರೀತಿ ಪರಿಸ್ಥಿತಿ ಬರುವಂತೆ ಮಾಡಿಕೊಳ್ಳಬಾರದು ಎಂದು ಹೇಳಿದರು.

 

ಮಠಾಧೀಶರು ಒಬ್ಬ ವ್ಯಕ್ತಿಯ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿ, ದೆಹಲಿಗೆ ಹೋಗಿ ಲಾಬಿ ಮಾಡುವ ಪರಿಸ್ಥಿತಿ ಬರಬಾರದಾಗಿತ್ತು. ಘನತೆ ಹೊಂದಿರುವ ಸಿದ್ದರಾಮಯ್ಯ ಅವರ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಅವರ ಗೌರವಕ್ಕೆ ಚ್ಯುತಿ ಬಂದರೆ ಕೇವಲ ಕರ್ನಾಟಕ ಅಲ್ಲ ಇಡೀ ದೇಶಕ್ಕೆ ಪರಿಣಾಮ ಬೀರಲಿದೆ ಎಂದರು. ಇದನ್ನೂ ಓದಿ:  ಡಿಸೆಂಬರ್‌ 4, 5 ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಇದು ಕೇವಲ ಕುರುಬ ಸಮುದಾಯ ಅಲ್ಲ. ಅಹಿಂದ ಸಮುದಾಯವಾಗಿ ಸಿದ್ದರಾಮಯ್ಯ ಅವರು ಗುರುತಿಸಿಕೊಂಡಿದ್ದಾರೆ. ಹೀಗಾಗಿ ಇದಕ್ಕೆ ಚ್ಯುತಿ ಬಾರದ ರೀತಿ ಹೈಕಮಾಂಡ್ ನಡೆದುಕೊಳ್ಳಬೇಕು. ಪಕ್ಷದ ವಿಚಾರವಾಗಿ ಹೈಕಮಾಂಡ್ ಸರಿಯಾದ ತೀರ್ಮಾನ ತೆಗೆದುಕೊಳ್ಳದೇ ಇರುವುದರಿಂದ ಈ ರೀತಿ ಆಗುತ್ತಿದೆ. ಇದು ವ್ಯಕ್ತಿ ಹಾಗೂ ಪಕ್ಷಕ್ಕೆ ತೊಂದರೆಯುಂಟು ಮಾಡುತ್ತೆ. ಯಾವುದೇ ಸಮುದಾಯದ ಸ್ವಾಮೀಜಿ ಇಂತಹ ವಿಚಾರವಾಗಿ ನಿಲುವು ತೆಗೆದುಕೊಳ್ಳಬಾರದು ಇದು ತಪ್ಪು. ನಾವು ಸಿದ್ದರಾಮಯ್ಯನವರಿಗೆ ಕುರುಬ ಸಮುದಾಯ ಎಂಬ ಕಾರಣ ನೀಡಿ ಬೆಂಬಲಿಸುತ್ತಿಲ್ಲ. ಬಡವರು ಹಾಗೂ ದೀನದಲಿತರ ಪರವಾಗಿ ಇದ್ದಾರೆ ಎಂಬ ಕಾರಣಕ್ಕೆ ಬೆಂಬಲ ನೀಡುತ್ತಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಾಯಕರು ಹೇಳಿದ್ದೇನು?
ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಬಾರದು. ಒಂದೊಮ್ಮೆ ಕಾಂಗ್ರೆಸ್‌ನ 140 ಶಾಸಕರ ಪೈಕಿ ಯಾರು ಸಿದ್ದರಾಮಯ್ಯ ವಿರುದ್ಧ ಇದ್ದಾರೋ ಅವರ ವಿರುದ್ಧ ಮುಂದೆ ನಾವೇ ಪ್ರಚಾರ ಮಾಡಿ ಸೋಲಿಸುತ್ತೇವೆ.

ಜೈಲಿಗೆ ಹೋಗಿ ಬಂದವರು, ಭ್ರಷ್ಟರನ್ನ ಸಿಎಂ ಮಾಡಲು ಹೊರಟಿದ್ದಾರೆ. ರಾಜ್ಯವ್ಯಾಪಿ ಪ್ರಚಾರ ಮಾಡಿ ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತೇವೆ. ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯನವರನ್ನ ನೋಡಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ.

ಶಾಸಕಾಂಗ ಸಭೆ ಕರೆದು ಬಹಿರಂಗವಾಗಿ ಅಭಿಪ್ರಾಯ ಪಡೆಯಲಿ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಾಸ್ ಲೀಡರ್ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಡಿಕೆಶಿ ಸೇರಿದಂತೆ ಕಾಂಗ್ರೆಸ್‌ನಲ್ಲಿ ಮಾಸ್ ಲೀಡರ್ ಯಾರೂ ಇಲ್ಲ. ಅವಶ್ಯಕತೆ ಇದ್ದರೆ ಪ್ರಾದೇಶಿಕ ಪಕ್ಷ ಸ್ಥಾಪನೆ ಅಗತ್ಯವಿದೆ. ಬಿಹಾರದಲ್ಲಿ ಈಗಾಗಲೇ ಪ್ರಾದೇಶಿಕ ಪಕ್ಷ ಯಶಸ್ವಿಯಾಗಿದೆ.

TAGGED:congresskurubapoliticssiddaramaiahಒಕ್ಕಲಿಗಕಾಂಗ್ರೆಸ್ಕುರುಬಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Maalu Spandana
ಹೆದರಬೇಡ ಅಪ್ಪಿ ಅಂತಿದ್ರು, ಆದ್ರೆ ಮಾಳು ಸ್ಟೇಟ್ಮೆಂಟ್‌ ಕೇಳಿ ಅಚ್ಚರಿ ಆಯ್ತು – ಸ್ಪಂದನಾ
Cinema Latest Top Stories TV Shows
Yash 2
ರಾಕಿಂಗ್ ಸ್ಟಾರ್‌ ಯಶ್ 40ನೇ ವರ್ಷದ ಹುಟ್ಟುಹಬ್ಬಕ್ಕೆ ಕೌಂಟ್‌ಡೌನ್!
Cinema Latest Sandalwood Top Stories
Salman khan and samantha raj nidimoru
ಸಮಂತಾ ಪತಿ ಜೊತೆಗೆ ಸಿನಿಮಾ ಮಾಡ್ತಾರಂತೆ ಸಲ್ಮಾನ್ ಖಾನ್..!
Bollywood Cinema Latest Top Stories
Gilli Nata Spandana BBK 12
`ಗಿಲ್ಲಿನೇ ಗೆಲ್ಬೇಕು, ಗಿಲ್ಲಿನೇ ಗೆಲ್ಲೋದು’ ಎಂದ ಸ್ಪಂದನ
Latest Top Stories TV Shows

You Might Also Like

Suresh Kalmadi
Latest

ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಸುರೇಶ್‌ ಕಲ್ಮಾಡಿ ನಿಧನ

Public TV
By Public TV
5 minutes ago
pavithra gowda 1
Bengaluru City

ಕೋರ್ಟ್‌ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ!

Public TV
By Public TV
38 minutes ago
Bangladesh violence
Crime

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ – 24 ಗಂಟೆಯಲ್ಲಿ ಎರಡನೇ ಕಗ್ಗೊಲೆ

Public TV
By Public TV
45 minutes ago
White Taping Majestic Malleshwar road closed for 3 months Bengaluru
Bengaluru City

ಮೆಜೆಸ್ಟಿಕ್‌-ಮಲ್ಲೇಶ್ವರ 3 ತಿಂಗಳು ರಸ್ತೆ ಬಂದ್‌

Public TV
By Public TV
1 hour ago
Haveri Milk
Chikkaballapur

ಚಳಿ ಎಫೆಕ್ಟ್‌ಗೆ ಮೇವು ತಿನ್ನದ ಹಸುಗಳು – ಹಾಲಿನ ಉತ್ಪಾದನೆ ಇಳಿಕೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 06-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?