Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುವೆಂಪು ಪಾಠ ಕೈಬಿಟ್ಟಿಲ್ಲ, ಸಚಿವರ ಹೇಳಿಕೆ ಅಪ್ಪಟ ಸುಳ್ಳು – ಬರಗೂರು ರಾಮಚಂದ್ರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುವೆಂಪು ಪಾಠ ಕೈಬಿಟ್ಟಿಲ್ಲ, ಸಚಿವರ ಹೇಳಿಕೆ ಅಪ್ಪಟ ಸುಳ್ಳು – ಬರಗೂರು ರಾಮಚಂದ್ರಪ್ಪ

Bengaluru City

ಕುವೆಂಪು ಪಾಠ ಕೈಬಿಟ್ಟಿಲ್ಲ, ಸಚಿವರ ಹೇಳಿಕೆ ಅಪ್ಪಟ ಸುಳ್ಳು – ಬರಗೂರು ರಾಮಚಂದ್ರಪ್ಪ

Public TV
Last updated: May 24, 2022 6:23 pm
Public TV
Share
3 Min Read
Baraguru Ramachandrappa
SHARE

ಬೆಂಗಳೂರು: ಪಠ್ಯ ಪುಸ್ತಕಗಳ ಪರಿಷ್ಕರಣೆ ಸಂಬಂಧ ಹಲವಾರು ಗೊಂದಲಗಳಿಗೆ ತೆರೆ ಎಳೆದಿದ್ದ ಸಚಿವ ಬಿ.ಸಿ.ನಾಗೇಶ್ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಾಹಿತಿ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷರಾದ ಬರಗೂರು ರಾಮಚಂದ್ರಪ್ಪ ಅವರು ಸುದೀರ್ಘ ಪತ್ರದ ಮೂಲಕ ಸ್ಪಷ್ಟ ಉತ್ತರ ನೀಡಿದ್ದಾರೆ.

ಪತ್ರದಲ್ಲಿ ಏನಿದೆ?: ನನ್ನ ಸಭಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಗಾಂಧಿ, ಅಂಬೇಡ್ಕರ್, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಮದಕರಿ ನಾಯಕ, ಕೆಂಪೇಗೌಡರ ಪಠ್ಯ ವಿಷಯಗಳನ್ನು ಕೈಬಿಟ್ಟಿರುವುದಾಗಿ ಮಾನ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಇಷ್ಟಕ್ಕೂ ಎಲ್ಲ ಪಠ್ಯಪುಸ್ತಕಗಳನ್ನು ನಾನೊಬ್ಬನೇ ಬರೆದಂತೆ ಬಿಂಬಿಸಿ ವೈಯಕ್ತಿಕ ಟೀಕೆ ಮಾಡಲಾಗುತ್ತಿದೆ.

BaraguruRamachandrappa

ಸಚಿವರು ಹೇಳಿರುವುದು ಅಪ್ಪಟ ತಪ್ಪು ಮಾಹಿತಿ, ಕುವೆಂಪು ಅವರ ರಚನೆಗಳು 10 ಮತ್ತು 7ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳಲ್ಲಿ ಇವೆ. ಖಂಡಿತಾ ಕೈ ಬಿಟ್ಟಿಲ್ಲ. ಪ್ರೌಢಶಾಲೆ ಹಂತದಲ್ಲಿ ಇದ್ದ ಕುವೆಂಪು ಅವರ `ಭರತ ಭೂಮಿ ನಮ್ಮ ತಾಯಿ’ ಎಂಬ ಪದ್ಯವನ್ನು ಚಿಕ್ಕಂದಿನಲ್ಲೇ ದೇಶಪ್ರೇಮದ ಭಾವನೆ ಬೆಳೆಯಲಿ ಎಂಬ ದೃಷ್ಟಿಯಿಂದ 7ನೇ ತರಗತಿಗೆ ಅಳವಡಿಸಲು ನಾವು ಸೂಚಿಸಿದ್ದೆವು ಅಷ್ಟೇ. ಇದನ್ನೂ ಓದಿ: ತನ್ನ ಕಥೆಯನ್ನು ಪಠ್ಯದಿಂದ ಕೈ ಬಿಡಿ: ದೇವನೂರು ಮಹಾದೇವ

bc nagesh

7ನೇ ತರಗತಿ ಮತ್ತು 10ನೇ ತರಗತಿಯ 2ನೇ ಭಾಗದ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಗಾಂಧಿಯವರನ್ನು ಕುರಿತ ಸಾಕಷ್ಟು ವಿವರಗಳಿವೆ. ಸಮಾಜ ವಿಜ್ಞಾನದ 8ನೇ ತರಗತಿಯ ಭಾಗ-1 ಮತ್ತು 10ನೇ ತರಗತಿಯ ಭಾಗ-2ರಲ್ಲಿ ಡಾ.ಅಂಬೇಡ್ಕರ್ ಪಾಠಗಳಿವೆ. 9ನೇ ತರಗತಿಯ ಪಠ್ಯದಲ್ಲಿ `ನಮ್ಮ ಸಂವಿಧಾನ’ ಎಂಬ ಪಾಠವಿದ್ದು ಅಲ್ಲಿಯೂ ಡಾ.ಅಂಬೇಡ್ಕರ್ ಕುರಿತ ವಿವರಗಳಿವೆ. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಸಮಾಜ ವಿಜ್ಞಾನದ 6ನೇ ತರಗತಿಯ ಭಾಗ-2 ಮತ್ತು 10ನೇ ತರಗತಿಯ ಭಾಗ-1ರಲ್ಲಿ ಪಾಠಗಳಿವೆ. ಜೊತೆಗೆ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ 5ನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೊಸದಾಗಿ ಒಂದು ಪಾಠವನ್ನೂ ಸೇರಿಸಲಾಗಿದೆ.

ಮದಕರಿ ನಾಯಕರ ಬಗ್ಗೆ ಪಾಠವನ್ನು ಕೈಬಿಟ್ಟಿಲ್ಲ. ಮದಕರಿ ನಾಯಕರ ಜೊತೆಗೆ ಸುರಪುರ ಸಂಸ್ಥಾನದ ಬಗ್ಗೆಯೂ ಬರೆಸಿ ಸೇರಿಸಲಾಗಿದೆ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಬಗ್ಗೆ ವಿವರಗಳಿಲ್ಲ ಎನ್ನುವುದು ಕೂಡ ತಪ್ಪು ಮಾಹಿತಿ, ಯಲಹಂಕ ನಾಡಪ್ರಭುಗಳ ಬಗ್ಗೆ ಪ್ರತ್ಯೇಕ ವಿವರಗಳಿದ್ದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬಗ್ಗೆ ಪ್ರತ್ಯೇಕ ಮಾಹಿತಿ ನೀಡಲಾಗಿದೆ. ಇದಿಷ್ಟು ಪಾಠಗಳು ಸಮಾಜ ವಿಜ್ಞಾನದ 7ನೇ ತರಗತಿಯ ಭಾಗ-1ನೇ ಪಠ್ಯಪುಸ್ತಕದಲ್ಲಿವೆ.

text book

7ನೇ ತರಗತಿಯ ಭಾಗ-2ರ ಸಮಾಜ ವಿಜ್ಞಾನ ಪಠ್ಯದಲ್ಲಿ ರಾಣಿ ಅಬ್ಬಕ್ಕ ಕುರಿತ ವಿವರಗಳಿವೆ. 7ನೇ ತರಗತಿಯ ಭಾಗ-1ರ ಸಮಾಜ ವಿಜ್ಞಾನ ಪಠ್ಯದಲ್ಲಿ `ಮೈಸೂರು ಒಡೆಯರು’ ಎಂಬ ಪ್ರತ್ಯೇಕ ಅಧ್ಯಾಯವೇ ಇದೆ. ಸಚಿವರು ಹೇಳಿದಂತೆ ಇಲ್ಲಿನ ವಿವರಗಳು ಕಡಿಮೆ ಎನ್ನಿಸಿದರೆ `ಮರುಪರಿಷ್ಕರಣೆ’ಯಲ್ಲಿ ವಿಸ್ತರಿಸಬಹುದಿತ್ತಲ್ಲ? ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ 

ಟಿಪ್ಪುವನ್ನೂ ಒಳಗೊಂಡಂತೆ ಯಾರ ಬಗ್ಗೆಯೂ ನಮ್ಮ ಸಮಾಜ ವಿಜ್ಞಾನ ಪಠ್ಯಪುಸ್ತಕ ಸಮಿತಿಯವರು ಆಧಾರವಿಲ್ಲದೆ ಏನನ್ನೂ ಸೇರಿಸಿಲ್ಲ. ಟಿಪ್ಪು, ಸಾವರ್ಕರ್ ಒಳಗೊಂಡಂತೆ ಯಾರ ಬಗ್ಗೆಯೂ ನಕಾರಾತ್ಮಕ ವಿಷಯಗಳನ್ನು ಹೇಳದೆ ನಡೆದ ಘಟನೆಗಳ ವಾಸ್ತವದ ಮಾಹಿತಿಯನ್ನಷ್ಟೇ ಕೊಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದ ಮಕ್ಕಳಿಗೆ ಪರ ಮತ್ತು ವಿರೋಧದ ಚರ್ಚೆಗಳ ಬದಲು ಮಾಹಿತಿ ಒದಗಿಸುವ ಉದ್ದೇಶವೇ ಮುಖ್ಯವೆಂದು ಭಾವಿಸಲಾಗಿದೆ.

bc nagesh
ಸಾಂದರ್ಭಿಕ ಚಿತ್ರ

ವಾಸ್ತವವಾಗಿ ಆಗ 27 ಸಮಿತಿಗಳಿದ್ದವು. 172 ಜನ ತಜ್ಞರು, ಅಧ್ಯಾಪಕರು ಈ ಸಮಿತಿಗಳಲ್ಲಿದ್ದರು. 27 ಸಮಿತಿಗಳಿಗೂ ಒಬ್ಬೊಬ್ಬರು ಅಧ್ಯಕ್ಷರಿದ್ದರು. ಈ ಸಮಿತಿಗಳಾಚೆಗೂ ನಾವು ಅಧ್ಯಾಪಕರ ಸಂಘಗಳ ಜೊತೆ, ಡಯಟ್ ಪ್ರಾಂಶುಪಾಲರು, ವಿಷಯ ಪರೀಕ್ಷಕರು ಮತ್ತು ಎಲ್ಲ ಪಠ್ಯವಿಷಯ ಪರಿಣಿತರ ಜೊತೆ ಮೂವತ್ತಕ್ಕೂ ಹೆಚ್ಚು ಸಮಾಲೋಚನೆ ಸಭೆ ನಡೆಸಿ ಸಲಹೆ ಪಡೆದಿದ್ದೇನೆ. ಆನಂತರವೇ ಪರಿಷ್ಕರಣೆ ಮಾಡಲಾಗಿದೆ. ಇಷ್ಟಾಗಿಯೂ ಮಾಹಿತಿ ಕೊರತೆ ಮತ್ತು ದೋಷಗಳು ಉಳಿದಿದ್ದರೆ, ಮುಂದೆ ಪರಿಷ್ಕರಿಸಬಹುದೆಂದು ಮೊದಲಿನಿಂದಲೂ ನಾನು ಹೇಳುತ್ತಾ ಬಂದಿದ್ದೇನೆ.

ಆದರೆ, ನಮಗಿಂತ ಹಿಂದೆ ಪಠ್ಯಪುಸ್ತಕ ರಚನೆ ಮಾಡಿದವರ ಬಗ್ಗೆ ಒಂದೇ ಒಂದು ಟೀಕೆಯನ್ನೂ ಮಾಡಿಲ್ಲ. ವೈಯಕ್ತಿಕ ನಿಂದನೆ ಮಾಡುವುದನ್ನು ನನಗೆ ಕಲಿಸಿಲ್ಲ. ಮಾನ್ಯ ಸಚಿವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆ ಕಾಪಾಡಲಿ.

TAGGED:Baraguru RamachandrappaBC Nagesheducation ministerliteraturetextbookಪಠ್ಯಪುಸ್ತಕಬರಗೂರು ರಾಮಚಂದ್ರಪ್ಪಬಿ.ಸಿ.ನಾಗೇಶ್ಶಿಕ್ಷಣ ಸಚಿವಸಾಹಿತಿ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

gangavali bridge
Latest

ಗಂಗಾವಳಿ ಸೇತುವೆ ಮೇಲಿಲ್ಲ ಸರ್ಕಾರಿ ಬಸ್ ಸಂಚಾರದ ಭಾಗ್ಯ!

Public TV
By Public TV
3 hours ago
udupi accident
Latest

ಉಡುಪಿ| ಟ್ರಕ್ ಟಯರ್ ಅಡಿಗೆ ಸಿಲುಕಿ ಯುವಕ ಸಾವು

Public TV
By Public TV
3 hours ago
Droupadi Murmu
Latest

ಆಪರೇಷನ್‌ ಸಿಂಧೂರ ಯಶಸ್ಸಿಗೆ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯೇ ಕಾರಣ: ದ್ರೌಪದಿ ಮುರ್ಮು

Public TV
By Public TV
3 hours ago
Crime 3
Crime

ಪಿರಿಯಾಪಟ್ಟಣ | ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

Public TV
By Public TV
4 hours ago
Abhishek Sharma Suryakumar
Cricket

IND vs NZ 3rd T20I: ಅಭಿಷೇಕ್‌, ಸೂರ್ಯ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್‌ ಕಂಗಾಲು; ಸರಣಿ ಗೆದ್ದ ಭಾರತ

Public TV
By Public TV
4 hours ago
Stray Dogs
Districts

ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ – 10 ಮಂದಿಗೆ ಗಂಭೀರ ಗಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?