Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಡಾನೆ ದಾಳಿಗೆ ಕಾರ್ಮಿಕ ಬಲಿ; ಅರಣ್ಯ ಇಲಾಖೆ ಮುಂದೆ ಶವವಿಟ್ಟು ಪ್ರತಿಭಟನೆ – ಲಾಠಿಚಾರ್ಜ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಾಡಾನೆ ದಾಳಿಗೆ ಕಾರ್ಮಿಕ ಬಲಿ; ಅರಣ್ಯ ಇಲಾಖೆ ಮುಂದೆ ಶವವಿಟ್ಟು ಪ್ರತಿಭಟನೆ – ಲಾಠಿಚಾರ್ಜ್‌

Chikkamagaluru

ಕಾಡಾನೆ ದಾಳಿಗೆ ಕಾರ್ಮಿಕ ಬಲಿ; ಅರಣ್ಯ ಇಲಾಖೆ ಮುಂದೆ ಶವವಿಟ್ಟು ಪ್ರತಿಭಟನೆ – ಲಾಠಿಚಾರ್ಜ್‌

Public TV
Last updated: September 9, 2022 5:14 pm
Public TV
Share
3 Min Read
chikkamagaluru protest
SHARE

ಚಿಕ್ಕಮಗಳೂರು: ಇಲ್ಲಿನ ಮೂಡಿಗೆರೆಯಲ್ಲಿ ತಿಂಗಳ ಅವಧಿಯಲ್ಲಿ ಇಬ್ಬರು ಕಾಡಾನೆಗೆ ಬಲಿಯಾಗಿರುವುದು ಸ್ಥಳೀಯರ ಆಕ್ರೋಶದ ಕಟ್ಟೆಯೊಡೆದಿದೆ. ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಜನರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ದಶಕದಲ್ಲಿ ಹತ್ತಕ್ಕೂ ಹೆಚ್ಚು, ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಹಾಗಾಗಿ ಇಂದು ಮೂಡಿಗೆರೆ ತಾಲೂಕಿನ ಜನ ಅರಣ್ಯ ಇಲಾಖೆ ಮೇಲೆ ಅಕ್ಷರಶಃ ಕೆಂಡಾಮಂಡಲರಾಗಿದ್ದರು. ಆಗಸ್ಟ್ 15ರಂದು ದನ ಹುಡುಕುತ್ತಿದ್ದ ವ್ಯಕ್ತಿ ಹಾಗೂ ನಿನ್ನೆ ತೋಟದಿಂದ ಬರುತ್ತಿದ್ದ 45 ವರ್ಷದ ವ್ಯಕ್ತಿಯನ್ನ ಆನೆ ಬಲಿ ಪಡೆದಿತ್ತು. ಪ್ರತಿ ಬಾರಿ ಆನೆ ದಾಳಿಯಾದಾಗಲೂ ಅಧಿಕಾರಿಗಳು ನಮ್ಮ ಮೂಗಿಗೆ ತುಪ್ಪ ಸವರುತ್ತಾರೆ ಎಂದು ಸ್ಥಳೀಯರ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದರು. ಇಂದು ಮೃತದೇಹವನ್ನ ಅರಣ್ಯ ಇಲಾಖೆ ಬಾಗಿಲಲ್ಲಿ ಇಟ್ಟು ಈ ಸಾವಿಗೆ ಅಧಿಕಾರಿಗಳೇ ಕಾರಣ. ಇದು ಅಧಿಕಾರಿಗಳು ಮಾಡಿದ ಕೊಲೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರ ಮೇಲೆ ಮನಸ್ಸೋ ಇಚ್ಛೆ ಲಾಠಿ ಬೀಸಿದ್ದಾರೆ.

chikkamagaluru protest1

ಪ್ರತಿ ಬಾರಿ ಮೂಗಿಗೆ ತುಪ್ಪ ಸವರುತ್ತಿದ್ದ ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಕ್ಷರಶಃ ಕೆಂಡಾಮಂಡಲರಾಗಿದ್ದರು. ಮೃತ ದೇಹವನ್ನ ಅರಣ್ಯ ಇಲಾಖೆ ಬಾಗಿಲಲ್ಲಿ ಇಟ್ಟು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು-ಅರಣ್ಯಾಧಿಕಾರಿಗಳು ಹಾಗೂ ಸ್ಥಳಿಯರು ಮಧ್ಯೆ ತೀವ್ರ ವಾಕ್ಸಮರ ಉಂಟಾಗಿತ್ತು. ಸ್ಥಳಿಯರು ಪೊಲೀಸ್ ಜೀಪನ್ನೇ ಪಲ್ಟಿ ಮಾಡಿ, ಅರಣ್ಯ ಇಲಾಖೆ ಗೇಟ್ ಮುರಿಯಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮನಸ್ಸೋ ಇಚ್ಛೆ ಲಾಠಿ ಬೀಸಿದ್ದಾರೆ. ಒದೆ ತಿಂದರೂ ಸ್ಥಳಿಯರು ಆಕ್ರೋಶ ಮಾತ್ರ ಕಡಿಮೆಯಾಗಿಲ್ಲ.

ಪ್ರತಿಭಟನೆ ವೇಳೆ ಪೊಲೀಸ್ ಜೀಪನ್ನ ಪಲ್ಟಿ ಮಾಡಲು ಮುಂದಾದರು. ಅರಣ್ಯ ಇಲಾಖೆ ಗೇಟ್‌ ಮುರಿಯಲು ಉದ್ರಿಕ್ತರು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ

ಪ್ರತಿ ಬಾರಿ ಆನೆ ಇದೆ ಎಂದು ಫೋನ್ ಮಾಡಿದರೆ, ಗಂಟೆ ಬಿಟ್ಟು ಬರುವ ಅಧಿಕಾರಿಗಳು ಎರಡು ಪಟಾಕಿ ಸಿಡಿಸಿ ಹೋಗುತ್ತಾರೆ. ಅವರು ಮತ್ತೆ ಬರುವುದು ಮತ್ತೆ ಆನೆ ಬಂದಾಗಲೇ ಎಂದು ಅಧಿಕಾರಿಗಳ ವಿರುದ್ಧ ರೆಬಲ್ ಆಗಿದ್ದರು. ಆನೆಯನ್ನ ಸೆರೆ ಹಿಡಿಯುವಂತೆ ನೂರಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜನ ಮಾತ್ರ ಮೇಲಿಂದ ಮೇಲೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶಿತರಾಗಿದ್ದರು. ಮೂಡಿಗೆರೆ ತಾಲೂಕಿನ ಕುಂದೂರು, ಸಾರಗೋಡು, ಗುತ್ತಿಹಳ್ಳಿ, ಊರಬಗೆ, ಕೋಗಿಲೆ, ಗೌಡಹಳ್ಳಿ, ದೇವವೃಂದ, ಬೈರಾಪುರ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಆನೆ ಸಮಸ್ಯೆ ಮಿತಿ ಮೀರಿದೆ. ಆನೆಗಳು ಹಳ್ಳಿಗೆ ಬರುತ್ತಿವೆ. ಬೆಳೆಗಳು ಒಂದೂ ಉಳಿಯುತ್ತಿಲ್ಲ. ಜನ ಪ್ರಾಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಆರಾಮಾಗಿದ್ದಾರೆ ಎಂದು ಅಧಿಕಾರಿಗಳ ಮೇಲೆ ಕೆಂಡಕಾರುತ್ತಾ ಮೂಡಿಗೆರೆ ಆರ್‌ಎಫ್‌ಓ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಅಧಿಕಾರಿಗಳು-ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಲಾಠಿಚಾರ್ಜ್ ನಡೆಸಿದ್ದಾರೆ.

ಒಟ್ಟಾರೆ ಸ್ಥಳೀಯರು ಆನೆ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗಲೇ ಅಧಿಕಾರಿಗಳು ಕ್ರಮಕೈಗೊಂಡರೆ ಏನೂ ಆಗುತ್ತಿರಲಿಲ್ಲ. ಪ್ರಾಣವೂ ಉಳಿಯೋದು, ಬೆಳೆಯೂ ಉಳಿಯೋದು. ಆದರೆ ಅಧಿಕಾರಿಗಳ ಆಯ್ತು… ಮಾಡೋಣ…. ಬರೋಣ… ಓಡಿಸೋಣ… ನೋಡೋಣ… ಎಂಬ ಸಿದ್ಧ ಉತ್ತರ ಇಂದು ಸ್ಥಳೀಯರನ್ನ ಈ ರೀತಿ ಕೆರಳಿಸಿತ್ತು. ಈಗಾಗಲೇ ಹಿಂಡು-ಹಿಂಡು ಕಾಡನೆಗಳು ಮಲೆನಾಡಲ್ಲಿ ಲಗ್ಗೆ ಇಟ್ಟಿವೆ. ಕೂಡಲೇ ಅವುಗಳನ್ನ ಸ್ಥಳಾಂತರಿಸದಿದ್ದರೆ ಇವತ್ತು ಅರ್ಧಕ್ಕೆ ಬಿಟ್ಟಿರುವ ಕೆಲಸವನ್ನ ಮುಂದಿನ ದಿನಗಳಲ್ಲಿ ಪೂರ್ತಿ ಮಾಡುತ್ತೇವೆ ಎಂದು ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಬಸ್ – 7 ಮಂದಿಗೆ ಗಾಯ, ತಪ್ಪಿದ ಭಾರೀ ಅನಾಹುತ

Live Tv
[brid partner=56869869 player=32851 video=960834 autoplay=true]

TAGGED:Chikkamagaluruelephantforest departmentLaborprotestಅರಣ್ಯ ಇಲಾಖೆಕಾಡಾನೆಕಾರ್ಮಿಕಚಿಕ್ಕಮಗಳೂರುಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories
karanya ram samruddhi
`ಬೆಟ್ಟಿಂಗ್‌ನಿಂದ ನನ್ನ ಫ್ಯಾಮಿಲಿ ಕಥೆ ಹೀಗಾಯ್ತು’: ಕೊನೆಗೂ ಸತ್ಯ ಬಾಯ್ಬಿಟ್ಟ ಕಾರುಣ್ಯ ರಾಮ್?
Cinema Latest Main Post Sandalwood

You Might Also Like

Koppal Sankranti
Districts

ಮಕರ ಸಂಕ್ರಾಂತಿ – ಆನೆಗೊಂದಿಯ ತುಂಗಭದ್ರಾ ನದಿ ತಟದಲ್ಲಿ ಲಕ್ಷಾಂತರ ಜನರಿಂದ ಪುಣ್ಯಸ್ನಾನ

Public TV
By Public TV
22 minutes ago
Uddhav Thackeray
Latest

BMC Exit Polls | ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ – ಕಾಂಗ್ರೆಸ್‌ಗೆ ಹೀನಾಯ ಸೋಲು!

Public TV
By Public TV
37 minutes ago
chamarajanagara leopard dead case accused arrests
Chamarajanagar

ವಿಷವಿಕ್ಕಿ ಚಿರತೆ ಹತ್ಯೆ ಆರೋಪ ಕೇಸ್;‌ ಆರೋಪಿ ದೊರೆಸ್ವಾಮಿ ಅರೆಸ್ಟ್‌

Public TV
By Public TV
2 hours ago
Raichuru Siddaramanand Swamiji
Districts

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಿದ್ದರಾಮನಂದ ಶ್ರೀಗಳ ಅಂತ್ಯಕ್ರಿಯೆ

Public TV
By Public TV
2 hours ago
Kodagu Tourist Place
Districts

Kodagu | ಕಳೆದ ವರ್ಷ ಕೊಡಗಿಗೆ 43 ಲಕ್ಷ ಪ್ರವಾಸಿಗರ ಭೇಟಿ

Public TV
By Public TV
2 hours ago
Pushpa2
Cinema

ಜಪಾನ್‌ನಲ್ಲೂ ಪುಷ್ಪಾ ಹವಾ – ಪ್ರೀಮಿಯರ್‌ಗೆ ಭರ್ಜರಿ ರೆಸ್ಪಾನ್ಸ್..!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?