ವಿಜಯಪುರ: ಏಕಾಏಕಿ ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ತಾಳಿಕೋಟಿ ತಾಲೂಕಿನ ಗುಂಡಕನಾಳ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶಂಕ್ರವ್ವ ಪ್ರಭಪ್ಪ ಹರಿಜನ(30) ಕೊಲೆಯಾದ ಮಹಿಳೆ. ಕಳೆದ ರಾತ್ರಿ ಪತಿ ಪ್ರಭಪ್ಪ ಬೇರೆ ಊರಿಗೆ ಹೋಗಿದ್ದ ಸಮಯದಲ್ಲಿ ದುಷ್ಕರ್ಮಿಗಳು ಶಂಕ್ರವ್ವನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಗು ಹಾಗೂ ಮಹಿಳೆ ಇಬ್ಬರೇ ಇದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಮನೆಗೆ ನುಗ್ಗಿದ್ದಾರೆ. ಬಳಿಕ ಮಗುವಿನ ಎದುರಲ್ಲೇ ತಾಯಿಯನ್ನು ಕೊಲೆ ಮಾಡಿದ್ದಾರೆ.
ಅಷ್ಟೆ ಅಲ್ಲದೇ ಬೆಳಗ್ಗೆ ಅಕ್ಕಪಕ್ಕದ ಮನೆಯವರು ಶಂಕ್ರವ್ವನ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೈಮೆಲೆ ಬಟ್ಟೆ ಇಲ್ಲದೆ ನಗ್ನವಾಗಿ ಬಿದ್ದಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಅತ್ಯಾಚಾರವೆಸೆಗಿ ಕೊಲೆ ಮಾಡಿದ್ದಾರೆ ಎಂದು ಮಹಿಳೆ ಕುಟುಂಬಸ್ಥರು ಶಂಕಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv