ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

Public TV
1 Min Read
UP

– ಪ್ರಿಯಾಂಕ ಬಂಧನ, ರಾಹುಲ್ ಭೇಟಿಗೆ ತಡೆ

ಲಕ್ನೋ: ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವನ ಮಗ ಕಾರು ಹತ್ತಿಸಿ ನಾಲ್ವರು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾನ ಮಗ ಆಶಿಶ್ ಮಿಶ್ರಾ ವಿರುದ್ಧ ಎಫ್‍ಐಆರ್ ದಾಖಲಾಗಿದೆಯಾದರೂ ಇನ್ನೂ ಆತನನ್ನು ಪೊಲೀಸರು ಬಂಧಿಸಿಲ್ಲ. ಆ ಜೀಪ್ ನನ್ನದೇ ಎಂದಿರುವ ಸಚಿವ, ಆದರೆ ಮಗ ಕಾರಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

UP 1

ಇತ್ತ ಲಖೀಂಪುರ್ ಖೇರಿಗೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಭೇಟಿ ನೀಡುತ್ತಿದೆ. ಆದರೆ ರಾಹುಲ್ ನಿಯೋಗಕ್ಕೆ ಉತ್ತರಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

UP AJAY SON

ಈ ನಡುವೆ ಲಖೀಂಪುರ್ ಖೇರಿ ಭೇಟಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು 2 ದಿನ ಗೃಹ ಬಂಧನದಲ್ಲಿಟ್ಟಿದ್ದ ಯೋಗಿ ಆದಿತ್ಯನಾಥ್ ಸರ್ಕಾರ ಈಗ ಬಂಧನಕ್ಕೆ ಒಳಪಡಿಸಿದ್ದು, ಪ್ರಿಯಾಂಕ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಆದರೆ ಪ್ರಿಯಾಂಕಾ ಗೃಹ ಬಂಧನದಲ್ಲಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

UP 2

ಗೃಹ ಬಂಧನದಿಂದಲೇ ಪ್ರಿಯಾಂಕಾ ಉತ್ತರಪ್ರದೇಶದಲ್ಲಿರುವ ತಮ್ಮ ಕಾರ್ಯಕರ್ತರಿಗೆ ಆಡಿಯೋ ಸಂದೇಶ ರವಾನಿಸಿದ್ದಾರೆ. ನಿನ್ನೆ ಲಖೀಂಪುರ್‍ಖೇರಿಗೆ ಭೇಟಿ ನೀಡಲು ಬಂದಿದ್ದ ಛತ್ತೀಸ್‍ಗಢ ಸಿಎಂ ಭೂಪೇಂದ್ರ ಸಿಂಗ್ ಬಘೇಲ್‍ಗೂ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬಘೇಲ್ ವಿಮಾನ ನಿಲ್ದಾಣದಲ್ಲಿಯೇ ಧರಣಿ ಕೂತಿದ್ದರು. ಆದರೆ ಟಿಎಂಸಿ ಸಂಸದರ ನಿಯೋಗಕ್ಕೆ ಭೇಟಿಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

Share This Article
Leave a Comment

Leave a Reply

Your email address will not be published. Required fields are marked *