ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ (Mantralaya) ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ ಮನೆ ಮಾಡಿದೆ. ಶ್ರೀ ಮಠದ ಮದ್ವ ಮಾರ್ಗ ಕಾರಿಡಾರ್ನಲ್ಲಿ ಲಕ್ಷ ದೀಪೋತ್ಸವ (Laksha Deepotsava) ವೈಭವದಿಂದ ನಡೆಯಿತು.
ಶ್ರೀ ಮಠ ಮಂತ್ರಾಲಯದ ಸಹಯೋಗದಲ್ಲಿ ಬನ್ನಂಜೆ ರಾಘವೇಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಾವಿರಾರು ಭಕ್ತರರಿಂದ ಲಕ್ಷ ದೀಪೋತ್ಸವ ಅನಾವರಣಗೊಂಡಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ದೀಪ ಬೆಳಗಿಸುವ ಮೂಲಕ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ಧರೆಗುರುಳಿದ್ದ 2,000 ವರ್ಷದ ಹುಣಸೆ ಮರ – ಚಿಕಿತ್ಸೆ ಬಳಿಕ ಮರುಜೀವ
ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ತೆಲಂಗಾಣ ಹಣಕಾಸು ವಿಶೇಷ ಮುಖ್ಯ ಕಾರ್ಯದರ್ಶಿ ರಾಮಕೃಷ್ಣ ರಾವ್ ಸೇರಿದಂತೆ ಹಲವು ಗಣ್ಯರು ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಮಂಗಳವಾರ ನಿಗಮ ಮಂಡಳಿ ಪಟ್ಟಿ ಫೈನಲ್ ಸಾಧ್ಯತೆ