ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಮುಸುಕಿನ ಗುದ್ದಾಟಕ್ಕೆ ಹೊಸ ಟ್ವಿಸ್ಟ್

Public TV
1 Min Read
LAKSHMI HEBBALKAR RAMESH JARAKIHOLI

ಬೆಳಗಾವಿ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಮುಸುಕಿನ ಗುದ್ದಾಟಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಇಂದು ರಮೇಶ್‍ನ್ನು ಭೇಟಿ ಮಾಡಿದ್ದಾರೆ.

ಬೆಳಗಾವಿಯ ಅತಿಥಿಗೃಹದಲ್ಲಿರುವ ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯನ್ನ ಭೇಟಿಯಾಗಿದ್ದ ಚೆನ್ನರಾಜ್ ಕೆಲಕಾಲ ಚರ್ಚಿಸಿ ತೆರಳಿದರು. ಆದರೆ ಚೆನ್ನರಾಜ್ ಮಾಧ್ಯಮದ ಕಣ್ಣಿಗೆ ಬಿದ್ದರೆ ರಮೇಶ್ ಜಾರಕಿಹೊಳಿ ಹಿಂಬಾಗಿಲಿನಿಂದ ಅಲ್ಲಿಂದ ತೆರಳಿದ್ದಾರೆ.

Lakshmi Hebbalkar Brother 1

ರಮೇಶ್ ಜಾರಕಿಹೊಳಿ ಅವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಭೇಟಿ ಮಾಡಿರುವುದು ಕ್ಷೇತ್ರದಲ್ಲಿ ಚರ್ಚೆ ಕಾರಣವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಗೆ ಇಡಿ ನೋಟಿಸ್ ಬಂದ ಮೇಲೆ ಇದೇ ಮೊದಲ ಬಾರಿಗೆ ರಮೇಶ್ ಜಾರಕಿಹೊಳಿ ಅವರನ್ನು ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಭೇಟಿ ಮಾಡಿದ್ದು, ಇಬ್ಬರ ನಡುವೆ ಸಂಪರ್ಕ ಸೇತುವೆಯಾದ್ರಾ ಎಂಬ ಪ್ರಶ್ನೆ ಮೂಡಿದೆ.

Lakshmi Hebbalkar Brother 2

Share This Article
Leave a Comment

Leave a Reply

Your email address will not be published. Required fields are marked *