ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಾರು ಅಪಘಾತ ಎಸಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು (Kittur Police) ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಅಪಘಾತ ಎಸಗಿ ಲಾರಿ ಚಾಲಕ ಪರಾರಿಯಾಗಿದ್ದ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಕ್ರಾರವಾಡಿ ಗ್ರಾಮದ ಮಧುಕರ ಸೋಮವಂಶಿ ಅಪಘಾತ ಎಸಗಿ ಪರಾರಿಯಾಗಿದ್ದ ಲಾರಿ ಚಾಲಕ. ಅಪಘಾತ ಎಸಗಿದ ಲಾರಿಯನ್ನೂ ಸಹ ಕಿತ್ತೂರು ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಯಾರನ್ನೋ ಕೂರಿಸಿ ಬರೆಸಿದಂತೆ ಇದೆ: ಸೂರಜ್ ರೇವಣ್ಣ ಕಿಡಿ
ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವೂ ಸಹ ಆಗಿತ್ತು. ಈ ಕುರಿತು ಸಚಿವೆ ಹೆಬ್ಬಾಳ್ಕರ್ ಅವರ ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ದೂರಿನ ಅನ್ವಯ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ಠಾಣೆ ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ – ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಮೊದಲಿಗೆ ಅಪಘಾತ ಎಸಗಿಲ್ಲ ಎಂದು ಲಾರಿ ಚಾಲಕ ಮಧುಕರ ಸೋಮವಂಶಿ ಹೇಳಿದ್ದಾನೆ. ಬಳಿಕ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್ಸ್ಎಲ್ಗೆ ರವಾನೆ ಮಾಡಿದ್ದರು. ಅಲ್ಲದೇ ಘಟನೆ ವೇಳೆ ಫೋನ್ ಕಾಲ್ ಡೀಟೇಲ್ಸ್ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿತ್ತೂರು ಪೊಲೀಸರ ಕಾರ್ಯಕ್ಕೆ ಎಸ್ಪಿ ಭೀಮಾಶಂಕರ ಗುಳೇದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಜಾತಿ ಜಿದ್ದಾಜಿದ್ದಿ – ಸಿಎಂ ಮುಂದಿರುವ ಆಯ್ಕೆ ಏನು?