ಯೋಧರಿಗೆ ಇಡೀ ದೇಶವೇ ಋಣಿಯಾಗಿರಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
1 Min Read
LAKSHMI HEBBALKAR

ಬೆಳಗಾವಿ: ಯೋಧರಿಗೆ ಇಡೀ ದೇಶವೇ ಋಣಿಯಾಗಿರಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತ್ನಾಳ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧಿ ಮಾಜಿ ಸೈನಿಕರ ಸಂಘವನ್ನು ಬೆಳಗಾವಿ ಗ್ರಾಮೀಣ ಶಾಸಕಿ ಉದ್ಘಾಟಿಸಿದರು.

LAKSHMI HEBBALKAR 1

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶ ಸುಭದ್ರ ಸ್ಥಿತಿಯಲ್ಲಿರುವುದಕ್ಕೆ ಸೈನಿಕರೇ ಕಾರಣರಾಗಿದ್ದಾರೆ. ಸೈನಿಕರನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಬಂಧು-ಬಳಗವನ್ನೆಲ್ಲ ಬಿಟ್ಟು ದೇಶದ ಗಡಿಭಾಗಗಳಲ್ಲಿ ಕರ್ತವ್ಯ ನಿರತರಾಗಿರುವ ಸೈನಿಕರಿಗೆ ಹಾಗೂ ಕರ್ತವ್ಯದಿಂದ ನಿವೃತ್ತಿಯಾಗಿರುವ ಎಲ್ಲ ಸೈನಿಕರಿಗೆ ನಾವೆಲ್ಲ ಋಣಿಯಾಗಿರಬೇಕು ಎಂದು ಹೇಳಿದರು. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ 384ನೇ ರ‍್ಯಾಂಕ್ ಪಡೆದ RLS ವಿದ್ಯಾರ್ಥಿ

LAKSHMI HEBBALKAR 2

ಈ ವೇಳೆ ದಿವ್ಯ ಸಾನಿಧ್ಯವನ್ನು ಮುತ್ನಾಳ್ ಕೇದಾರಪೀಠದ ಶಿವಾನಂದ್ ಮಹಾಸ್ವಾಮಿಗಳು ವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *