ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ (Mariyammanahalli Town) ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ (Lakshminarayana Swamy) ಮತ್ತು ಶ್ರೀ ಆಂಜನೇಯ ಸ್ವಾಮಿ (Anjaneya Swamy) ಜೋಡಿ ರಥೋತ್ಸವ ಅದ್ದೂರಿಯಾಗಿ ಅತ್ಯಂತ ಸಂಭ್ರಮ, ಸಡಗರದಿಂದ ನಡೆಯಿತು.
ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ್ ನಾಯ್ಕ್ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಜೋಡಿ ರಥೋತ್ಸವ ಎಳೆದು ಚಾಲನೆ ನೀಡಿದರು. ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವ ಎಳೆಯುವ ಸಂಪ್ರದಾಯಕ್ಕೆ 650-700 ವರ್ಷಗಳ ಇತಿಹಾಸ ಇದೆ. ಇದನ್ನೂ ಓದಿ: ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ
ಈ ವರ್ಷ ಹೊಸ ಜೋಡಿ ರಥೋತ್ಸವಗಳನ್ನ ಮಾಡಿಸಲಾಗಿತ್ತು. ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ, ಲಕ್ಷ್ಮೀನಾರಾಯಣ ಹಾಗೂ ಆಂಜನೇಯನ ಕೃಪೆಗೆ ಪಾತ್ರರಾದರು. ಇದನ್ನೂ ಓದಿ: ಕಾಶಿಯಲ್ಲಿ ಮುಸ್ಲಿಂ ಮಹಿಳೆಯರಿಂದ ʻಶ್ರೀರಾಮ ಆರತಿʼ – ಏಕತೆ ಸಂದೇಶ ಸಾರಿದ ರಾಮನವಮಿ ಆಚರಣೆ
ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿಯ ಫೋಟ 8 ಲಕ್ಷ ರೂ.ಗೆ ಹರಾಜು ಆದರೆ ಶ್ರೀ ಆಂಜನೇಯ ಸ್ವಾಮಿಯ ಫೋಟೋ 12.10 ಲಕ್ಷ ರೂ.ಗೆ ಹರಾಜಾಯ್ತು.