ರಾಯಚೂರು: ವೀಕೆಂಡ್ ಕರ್ಫ್ಯೂ ಮಧ್ಯೆ ಮಾಸ್ಕ್ ಹಾಕಿಕೊಳ್ಳದೇ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪತಿ ಗಾಣದಾಳ ಅವರಿಗೆ ರಾಯಚೂರು ಪೊಲೀಸರು ದಂಡ ವಿಧಿಸಿದ್ದಾರೆ.
ನಗರದ ಚಂದ್ರಮೌಳೇಶ್ವರ ವೃತ್ತದ ಬಳಿ ಮಾಸ್ಕ್ ಇಲ್ಲದಿದ್ದಕ್ಕೆ ಲಕ್ಷ್ಮೀಪತಿಯವರು ಹಾಗೂ ಅವರ ಕಾರು ಚಾಲಕನಿಗೆ ದಂಡ ವಿಧಿಸಲಾಗಿದೆ. ಚೆಕ್ ಪೋಸ್ಟ್ ನಲ್ಲಿ ಕಾರನ್ನ ತಡೆದ ಪೊಲೀಸರು 200 ರೂ. ದಂಡವನ್ನು ವಿಧಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 8,449, ಬೆಂಗಳೂರಿನಲ್ಲಿ 6,812 ಪಾಸಿಟವ್ – 4 ಸಾವು
ಲಕ್ಷ್ಮೀಪತಿಯವರು ದಂಡ ಕಟ್ಟಿದ ನಂತರ ತಮ್ಮಲ್ಲಿದ್ದ ಕರವಸ್ತ್ರವನ್ನು ಮುಖಕ್ಕೆ ಕಟ್ಟಿಕೊಂಡು ಸ್ಥಳದಿಂದ ತೆರಳಿದ್ದಾರೆ. ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿ ಹೋರಾಟ ಮಾಡ್ಬೇಡಿ – ಕಾಂಗ್ರೆಸ್ಗೆ ಕಾರಜೋಳ ಮನವಿ