ಪಟ್ನಾ : ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ ಐದು ದಿನ ಪೆರೋಲ್ ಮಂಜೂರು ಮಾಡಿದ್ದು, ಪುತ್ರ ತೇಜ್ ಪಾಲ್ ವಿವಾಹದಲ್ಲಿ ಭಾಗವಹಿಸಲು ಅವಕಾಶ ನೀಡಿದೆ.
ಬಿಹಾರ ಮಾಜಿ ಆರೋಗ್ಯ ಸಚಿರಾಗಿರುವ ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಹಾಗೂ ಎಂಬಿಎ ಪದವೀಧರೆ ಐಶ್ವರ್ಯ ರೈ ಅವರ ನಿಶ್ಚಿತಾರ್ಥ ಏಪ್ರಿಲ್ 18 ರಂದು ನಡೆದಿದ್ದು, ಮೇ 12ರಂದು ಅದ್ಧೂರಿ ಮದುವೆ ಸಮಾರಂಭ ನಡೆಯಲಿದೆ. ತೇಜ್ ಪ್ರತಾಪ್ ಹಾಗೂ ಐಶ್ವರ್ಯ ನಿಶ್ಚಿತಾರ್ಥ ಸಮಾರಂಭ ಲಾಲು ಜೈಲಿನಲ್ಲಿ ಇರುವ ಸಂದರ್ಭದಲ್ಲಿ ನಡೆದಿತ್ತು.
Former #Bihar CM Lalu Prasad Yadav granted parole of five days for son Tej Pratap Yadav's wedding; he is currently admitted in Rajendra Institute of Medical Sciences in Ranchi (File pic) pic.twitter.com/V3aicHrxWO
— ANI (@ANI) May 9, 2018
ಲಾಲು ಪ್ರಸಾದ್ ಯಾದವ್ 1990 ರಿಂದ 1944 ವರೆಗೂ ಮುಖ್ಯಮಂತ್ರಿ ಆಗಿದ್ದರು. ಈ ವೇಳೆ ನಡೆದ ಮೇವು ಹಗರಣದಲ್ಲಿ ಪ್ರಮುಖ ಅಪರಾಧಿಯಾಗಿದ್ದು, ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರೆ. ಆದ್ರೆ ಅನಾರೋಗ್ಯದ ಕಾರಣ ಮಾರ್ಚ್ 29 ರಂದು ಲಾಲು ಪ್ರಸಾದ್ ಯಾದವ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಲಾಲು ಪ್ರಸಾದ್ ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದದರು.
ಸದ್ಯ ಲಾಲು ಅವರು ಮೇ 10 ರಿಂದ ಮೇ 14 ರವರೆಗೆ ಹೊರ ಬರುವ ಸಾಧ್ಯತೆ ಇದೆ. ಮೇ 12 ರಂದು ಪಾಟ್ನಾದಲ್ಲಿ ವಿವಾಹ ಸಮಾರಂಭ ನಡೆಯಲಿದೆ.