ಹಾಸನ: ಭೂ ಕುಸಿತದಿಂದ ಕಾಡಿನಲ್ಲಿ ಸಿಲುಕಿದ್ದ 50 ಮಂದಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಹಾಸನದ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ ನ ಹಡ್ಲಗದ್ದೆ ಬಳಿ ಭೂ ಕುಸಿತ ಸಂಭವಿಸಿತ್ತು. ಈ ಅವಘಡದಿಂದಾಗಿ ಮಂಗಳವಾರ ರಾತ್ರಿ ಸಾರಿಗೆ ಇಲಾಖೆ ಬಸ್ ಪ್ರಯಾಣಿಕರು ಕಾಡಿನಲ್ಲಿ ಸಿಲುಕಿದ್ದು, ರಾತ್ರಿಯೆಲ್ಲ ಕುಡಿಯಲು ನೀರಿಲ್ಲದೆ ಪರದಾಡಿದ್ದರು. ಮರುದಿನ ಸ್ಥಳೀಯರ ನೆರವಿನಿಂದ ಬೆಟ್ಟವನ್ನೇರಿ ರಸ್ತೆಯ ಮತ್ತೊಂದು ಬದಿಗೆ ಬಂದು ಸೇರಿದ್ದಾರೆ. ಈ ವೇಳೆ ಸ್ಥಳೀಯರೇ ವಯೋವೃದ್ಧರನ್ನ ಬೆನ್ನಮೇಲೆ ಹೊತ್ತು ತಂದು ರಕ್ಷಿಸಿದ್ದಾರೆ.
ಜನರ ನೋವಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸದ್ಯ ಮಡಿಕೇರಿ ಡಿಪೋ ಬಸ್ ಮೂಲಕ ತೆರಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv