Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌, ಜಮೀರ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಆರ್.ಅಶೋಕ್

Public TV
Last updated: October 28, 2024 2:13 pm
Public TV
Share
3 Min Read
R ASHOK
SHARE

– ಸಿದ್ದರಾಮಯ್ಯರಿಂದ ಮುಡಾ ನಿವೇಶನ ಲೂಟಿ
– ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದ ಸಿಎ ನಿವೇಶನ ಲೂಟಿ
– ಈಗ ಜಮೀರ್‌ರಿಂದ ರೈತರ ಕೃಷಿ ಭೂಮಿ ಲೂಟಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ (Congress Government) ಹಾಗೂ ವಕ್ಫ್‌ ಬೋರ್ಡ್‌ನಿಂದ (Waqf Board) ಲ್ಯಾಂಡ್ ಜಿಹಾದ್ (Land Jihad) ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashok) ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅಶೋಕ್ ದೂರಿದ್ದಾರೆ.

Minister Zameer Ahmed apologizes for his Political Judgement about MUDA Scam high Court verdict 1

ಆಧುನಿಕ ಟಿಪ್ಪು ಸುಲ್ತಾನ್
ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅಶೋಕ್ ಅವರು ಎಚ್ಚರಿಕೆ ನೀಡಿದ್ದಾರೆ.

 

ಕೇಂದ್ರದಲ್ಲಿ ಚರ್ಚಿಸಲಿ
ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಫ್ ಬೋರ್ಡ್‌ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ಫ್ ಬೋರ್ಡ್ ಇದನ್ನು ವಿರೋಧಿಸಿದೆ. ನಾವು ಮಾಹಿತಿ ಕೊಡಲ್ಲ, ನಮ್ಮದು ಸ್ವಾಯತ್ತ ಸಂಸ್ಥೆಗಳಿಂದ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ‌ ಕಬಳಿಸಬೇಕು ಎಂಬುದು ಇವರ ಉದ್ದೇಶ ಎಂದು ಆರ್‌.ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಿಎಂ ಬಾಯಿ ಬಿಡಲಿ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ‌ನೀಡಬೇಕು ಎಂದು ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

 

TAGGED:congressLand Jihadpoliticsr ashokzameer ahmedಆರ್ ಅಶೋಕ್ಕಾಂಗ್ರೆಸ್ಜಮೀರ್ ಅಹ್ಮದ್ಲ್ಯಾಂಡ್‌ ಜಿಹಾದ್‌
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
2 hours ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
3 hours ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
3 hours ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
3 hours ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?