Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ

Bengaluru City

ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ

Public TV
Last updated: August 27, 2024 8:41 pm
Public TV
Share
3 Min Read
ct ravi 3
SHARE

ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ (Jindal) ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C T Ravi) ಸಂಶಯ ವ್ಯಕ್ತಪಡಿಸಿದ್ದಾರೆ.

ನಗರದ ಮಲ್ಲೇಶ್ವರ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಸುಮಾರು 3,677 ಎಕರೆ ಭೂಮಿ ಕೊಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಐಸಿಸಿ ಮುಖ್ಯಸ್ಥರಾಗಿ ಜಯ್‌ ಶಾ ಅವಿರೋಧ ಆಯ್ಕೆ

ಬಿಜೆಪಿ ಆಡಳಿತದಲ್ಲಿ ಇದ್ದಾಗ ಈ ಪ್ರಸ್ತಾವನೆ ಬಂದಿತ್ತು. ನಾವೆಲ್ಲರೂ ಒಳಗಡೆಯೂ ವಿರೋಧ ಮಾಡಿದ್ದೆವು. ಕಾಂಗ್ರೆಸ್‌ನವರು (Congress)  ಬಹಿರಂಗವಾಗಿ ಭೂ ಮಾರಾಟವನ್ನು ವಿರೋಧಿಸಿದ್ದರು. ಇದು ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್ ಎಂದು ನಮ್ಮ ಮೇಲೆ ಕಾಂಗ್ರೆಸ್‌ನವರು ಆರೋಪಿಸಿದ್ದರು. ಒಂದು ಎಕರೆಗೆ 1.22 ಲಕ್ಷ ರೂ. ಕೊಡುವುದು ಎಂದರೇನು? ಎಂಬ ಮಾತನ್ನು ನಮ್ಮ ಮೇಲೆ ಆರೋಪಿಸಿದ್ದರು. ಆಗ ಆರೋಪಿಸಿದವರೇ ಭೂಮಿ ಕೊಟ್ಟಿದ್ದಾರೆ. ಹಾಗಿದ್ದರೆ ನೀವು ಎಷ್ಟು ಕಿಕ್‌ಬ್ಯಾಕ್ ಪಡೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಕೈಗಾರಿಕೆ ಖಾತೆ ಸಚಿವರು ಈ ಕುರಿತು ಬಿಜೆಪಿ (BJP) ಆಡಳಿತದಲ್ಲಿರುವಾಗಲೇ ನಿರ್ಧಾರ ಆಗಿತ್ತು ಎಂದಿದ್ದರು. ಮಾನ್ಯ ಎಂ.ಬಿ.ಪಾಟೀಲರೇ, (M B Patil) ನಮ್ಮ ಅವಧಿಯಲ್ಲಿ ಪ್ರಸ್ತಾಪ ಬಂದಿದ್ದು ನಿಜ. ನಮ್ಮಂಥ ಹಲವರು ವಿರೋಧಿಸಿದ್ದ ಕಾರಣಕ್ಕೆ ಪ್ರಸ್ತಾಪವನ್ನು ಅಲ್ಲಿಗೇ ಕೈಬಿಟ್ಟಿದ್ದೆವು. ನೀವ್ಯಾಕೆ ಅದನ್ನು ಮಾಡುತ್ತೀರಿ? ಬಿಜೆಪಿ ಕಂಡರೆ ಆಗದವರು ಬಿಜೆಪಿ ನಿರ್ಧಾರವನ್ನು ಯಾಕೆ ಮುಂದುವರೆಸಬೇಕು ಎಂದು ಕೆಣಕಿದ್ದಾರೆ.ಇದನ್ನೂ ಓದಿ: ತುಮಕೂರು ಜಿಲ್ಲೆಗೆ ಮೂರು ರೈಲ್ವೆ ಸೇತುವೆ ಮಂಜೂರು

ಹೂಡಿಕೆದಾರರು ಜನರಿಗೆ ಸೇವೆ ಮಾಡಲು ಬರುತ್ತಿಲ್ಲ..
ಹೆಚ್.ಕೆ.ಪಾಟೀಲರೇ (H K Patil) ಅವತ್ತು ಉದ್ದದ ಪತ್ರ ಬರೆದಿದ್ದಿರಿ. ಪತ್ರಿಕಾಗೋಷ್ಠಿ ಮಾಡಿದ್ದೀರಿ. ಈಗ ಕ್ಯಾಬಿನೆಟ್ ನಿರ್ಣಯವನ್ನು ಹೊರಗಡೆ ಬಂದು ಪತ್ರಿಕಾಗೋಷ್ಠಿ ಮಾಡಿ ನಿಮ್ಮ ಬಾಯಿಂದಲೇ ಹೇಳಿದ್ದೀರಿ ಎಂದಿರಿ. 90 ಸಾವಿರ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ಕೊಡಲಾಗಿದೆ ಎಂದು ಹೇಳಿದ್ದಾರೆ. ಜಿಂದಾಲ್ ಏನೂ ನಾನ್ ಪ್ರಾಫಿಟ್ ಆರ್ಗನೈಸೇಶನ್ ಅಲ್ಲ. ಅವರು ಕಂಪನಿ ನಡೆಸುತ್ತಿದ್ದಾರೆ. ಲಾಭದ ಲೆಕ್ಕಾಚಾರ ಹಾಕಿ ಹೂಡಿಕೆ ಮಾಡುತ್ತಾರೆ. ಜಿಂದಾಲ್ ಅಥವಾ ಇತರ ಕಂಪನಿಗಳು, ಹೂಡಿಕೆದಾರರು ಕರ್ನಾಟಕದ 7 ಕೋಟಿ ಜನರಿಗೆ ಸೇವೆ ಮಾಡಲು ಬರುತ್ತಿಲ್ಲ. ಅವರು ಲಾಭದ ಉದ್ದೇಶ ಇಟ್ಟುಕೊಂಡೇ ಹೂಡಿಕೆ ಮಾಡುತ್ತಾರೆ ಎಂದು ವಿಶ್ಲೇಷಿಸಿದ್ದಾರೆ.

ಜಿಂದಾಲ್ ಮತ್ತು ಕರ್ನಾಟಕ ಸರ್ಕಾರದ ನಡುವೆ ಯಾವ ಒಪ್ಪಂದ ಪತ್ರ ಆಗಿತ್ತು? ನಾವು ಕಡಿಮೆ ಬೆಲೆಗೆ ಜಮೀನು ಕೊಟ್ಟಿದ್ದೇವೆ. ಅಣೆಕಟ್ಟಿನಿಂದ ನೀರು ಕೊಡುತ್ತೇವೆ. ಪ್ರಾಕೃತಿಕ ಸಂಪನ್ಮೂಲ ತೆಗೆಯಲು ಅವಕಾಶ ನೀಡಿದ್ದೇವೆ. ಅವರು ಎಷ್ಟು ಉದ್ಯೋಗ ಸಿಗಲಿದೆ ಎಂದು ತೋರಿಸಿದ್ದರು? ಯಾವ ಭರವಸೆ ಕೊಟ್ಟಿದ್ದರು? ಈಗ ಎಷ್ಟು ಉದ್ಯೋಗ ಸೃಷ್ಟಿ ಆಗಿದೆ? ಉದ್ಯೋಗಿಗಳಲ್ಲಿ ಕರ್ನಾಟಕದವರು, ಕನ್ನಡಿಗರು ಎಷ್ಟು ಜನ ಎಂಬ ಬಗ್ಗೆ ಜಾಬ್ ಆಡಿಟ್ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಕೊಡುವ ಉದ್ದೇಶ ಇದ್ದರೆ ಇವತ್ತಿನ ಮಾರುಕಟ್ಟೆ ದರ ವಿಧಿಸಿ..
ಆವತ್ತು ಕಿಕ್‌ಬ್ಯಾಕ್ ಆರೋಪ ಮಾಡಿ, ಈಗ ನೀವು ಅನುಮತಿ ಕೊಟ್ಟ ಕಾರಣ ನೀವೆಷ್ಟು ಕಿಕ್‌ಬ್ಯಾಕ್ ಪಡೆದಿದ್ದೀರಿ ಎಂಬ ಸಂಶಯ ಬಂದೇ ಬರುತ್ತದೆ. ಇದರ ಜೊತೆಜೊತೆಗೇ ಯಾವತ್ತಿನದೋ ಮಾರುಕಟ್ಟೆ ದರ ಅಳವಡಿಸಿ, ಇವತ್ತು 1.22 ಲಕ್ಷ ರೂ. ನಿಗದಿ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಯಾವ ಮೂಲೆಯಲ್ಲೂ ಈ ದರಕ್ಕೆ ಭೂಮಿ ಸಿಗುವುದಿಲ್ಲ. ಪ್ರತಿ ಎಕರೆ ಜಮೀನಿಗೆ ಕಡಿಮೆ ಎಂದರೂ 20-25 ಲಕ್ಷ ರೂ. ಬೆಲೆ ಇದೆ. ಹಾಗಿರುವಾಗ 1.22 ಲಕ್ಷ ರೂ. ನಿಗದಿ ಮಾಡಿದ್ದು ಸಮರ್ಥನೀಯವಲ್ಲ ಎಂದು ಆಕ್ಷೇಪಿಸಿದ್ದಾರೆ.ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ: ಆ.31 ರಂದು ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್

ಕೊಡುವ ಉದ್ದೇಶ ಇದ್ದರೆ ಇವತ್ತಿನ ಮಾರುಕಟ್ಟೆ ದರದಲ್ಲಿ ಕೊಡಬೇಕು. ಅಲ್ಲಿರುವ ಅದಿರು ನಿಕ್ಷೇಪಗಳ ಮೇಲೆ ಸರ್ಕಾರದ ಹಕ್ಕು ಎಂದು ಷರತ್ತಿನೊಂದಿಗೆ ಕೊಡಬೇಕು. ಹಾಗಾಗಿ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬೇಕೆಂದು ತಿಳಿಸಿದ್ದಾರೆ.

TAGGED:bengalurubjpc t ravicongressjindalಜಿಂದಾಲ್ಬಿಜೆಪಿಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
4 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
22 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
38 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
46 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?