ಧಾರವಾಡ: ಪಿತ್ರಾರ್ಜಿತವಾಗಿ ಉಳುಮೆ ಮಾಡುತ್ತ ಬಂದಿರುವ ರೈತರ ಜಮೀನುಗಳು ಇದೀಗ ವಕ್ಫ್ ಆಸ್ತಿಗೆ (Waqf Land) ಒಳಪಡುತ್ತಿವೆ. ಧಾರವಾಡ (Dharawada) ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಅನೇಕ ರೈತರ ಜಮೀನುಗಳು ವಕ್ಫ್ ಆಸ್ತಿಗೆ ಒಳಪಟ್ಟಿರುವುದಾಗಿ ಪಹಣಿ ಪತ್ರದಲ್ಲಿ ನಮೂದಾಗಿದ್ದು, ಇದರ ತಿದ್ದುಪಡಿಗಾಗಿ ರೈತರು ಪರದಾಡುತ್ತಿದ್ದಾರೆ. ಇತ್ತೀಚೆಗೆ ವಿಜಯಪುರದಲ್ಲಿ ವಕ್ಫ್ ಮಂಡಳಿ ರೈತರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.
ತಮ್ಮ ಜಮೀನನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಈ ರೈತರೆಲ್ಲ ಉಪ್ಪಿನ ಬೆಟಗೇರಿ ಗ್ರಾಮದವರು. 3 ಎಕರೆ, 5 ಎಕರೆ ಹಾಗೂ 20 ಎಕರೆ ಹೊಲಗಳ ಪಹಣಿ ಪತ್ರದಲ್ಲಿ 2021, 2022 ಹಾಗೂ 2023 ರಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿಗೆ ಒಳಪಟ್ಟಿವೆ ಎಂದು ನಮೂದಾಗಿದೆ. ಇದೇ ಪಹಣಿ ಪತ್ರದಲ್ಲಿ 2018, 2019ರಲ್ಲಿ ತೆಗೆದು ನೋಡಿದಾಗ ಅದರಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿಲ್ಲ. 2021, 2022ರಲ್ಲಿ ಈ ರೀತಿ ಪಹಣಿ ಪತ್ರದ ಋಣಗಳು ಕಾಲಂನಲ್ಲಿ ವಕ್ಫ್ ಆಸ್ತಿಗೆ ಜಮೀನು ಒಳಪಟ್ಟಿದೆ ಎಂದು ನಮೂದಾಗಿದೆ. ಇದನ್ನೂ ಓದಿ: ಇದು ರಾಜ್ಯದ ಭವಿಷ್ಯ ರೂಪಿಸುವ ಉಪಚುನಾವಣೆ, ನಿಖಿಲ್ ಗೆಲ್ಲಿಸಿ ಬದಲಾವಣೆಗೆ ಮುಂದಾಗಬೇಕು: ಯದುವೀರ್ ಒಡೆಯರ್
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ (Betageri) ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ಕುಟುಂಬಕ್ಕೆ ಸೇರಿದ ಜಮೀನುಗಳು ಪಿತ್ರಾರ್ಜಿತವಾಗಿದ್ದು, ಅವುಗಳನ್ನು ಈ ರೈತರು ಯಾರಿಂದಲೂ ದಾನವಾಗಿ ಪಡೆದಿಲ್ಲ ಆದರೂ ಇವರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಗೆ ಈ ಜಮೀನು ಒಳಪಟ್ಟಿದೆ ಎಂದು ನಮೂದಾಗಿದ್ದು, ಅದನ್ನು ತೆಗೆದು ಹಾಕಲು ರೈತರು ವಕ್ಫ್ ಕಚೇರಿ, ತಹಶೀಲ್ದಾರ್ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದನೆ ನೀಡಲಿಲ್ಲ. ಇದನ್ನೂ ಓದಿ: ಸಂಡೂರು| ಅಭ್ಯರ್ಥಿ ಪರ ಪ್ರಚಾರದಿಂದ ಕಾಂಗ್ರೆಸ್ ಶಾಸಕರು ದೂರ ದೂರ
ಮರಬಸಪ್ಪ ಮಸೂತಿ ಅವರಿಗೆ ಸೇರಿದ 3 ಎಕರೆ 13 ಗುಂಟೆ, ಮಲ್ಲಿಕಾರ್ಜುನ ಹುಟಗಿ ಅವರಿಗೆ ಸೇರಿದ 5 ಎಕರೆ 37 ಗುಂಟೆ ಹಾಗೂ ಜವಳಗಿ ಅವರ ಕುಟುಂಬಕ್ಕೆ ಸೇರಿದ ಒಟ್ಟು 20 ಎಕರೆ ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂದು ನಮೂದಾಗಿದೆ. ಪಿತ್ರಾರ್ಜಿತವಾಗಿ ಸಾಗುವಳಿ ಮಾಡುತ್ತ ಬಂದಿರುವ ಆಸ್ತಿ ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂದು ನಮೂದಾಗಿರುವುದರಿಂದ ರೈತರಿಗೆ ಬರಸಿಡಿಲು ಬಡಿದಂತಾಗಿದ್ದು, ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಈಗ ಹೋರಾಟ ಮಾಡುವಂತಾಗಿದೆ. ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಅಬ್ಬರದ ಪ್ರಚಾರ – 10,000 ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದ ಭರತ್ ಬೊಮ್ಮಾಯಿ