ಬೆಂಗಳೂರು: (Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ನಿವಾಸದ ಸಮೀಪ ಇರುವ ಪಿಜಿಯೊಂದರಲ್ಲಿ ಲ್ಯಾಪ್ಟಾಪ್ (Laptop) ಕಳುವಾಗಿರುವ ಘಟನೆ ನಡೆದಿದೆ.
ಇಲ್ಲಿನ ಆರ್.ಟಿ.ನಗರದಲ್ಲಿರುವ ಪಿಜಿಯಲ್ಲಿ ಲ್ಯಾಪ್ಟಾಪ್ ಕಳುವಾಗಿದೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ ಸಹಾಯ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಲಾಗಿದೆ. ಇದನ್ನೂ ಓದಿ: ಜಮೀರ್ ಸಿಎಂ ಆಗ್ತಾರೆ ಎಂದ ಚರ್ಚ್ ಫಾದರ್
ಶಶಾಂಕ್ ಮಾಲ್ವಿಯಾ ಎಂಬಾತ ನಗರ ಪೊಲೀಸರಿಗೆ ಹಾಗೂ ಸಿಎಂಗೆ ಟ್ವೀಟ್ ಮಾಡಿದ್ದಾನೆ. ʻನಿಮ್ಮ ಮನೆಯ ಸಮೀಪದ ಪಿಜಿಯಲ್ಲಿ ಕಳ್ಳತನ ಆಗಿದೆ. ಮೊಬೈಲ್ ಹಾಗೂ ಲ್ಯಾಪ್ಟ್ಯಾಪ್ ಕಳ್ಳತನ ಆಗಿದೆ. ದಯವಿಟ್ಟು ಸಹಾಯ ಮಾಡಿ ಅಂತ ಸಿಎಂಗೆ ಮನವಿ ಮಾಡಿದ್ದಾನೆ.
ನಿನ್ನೆ ಬೆಳಗ್ಗೆ 7 ಗಂಟೆ ಸುಮಾರಿಗೆ ಕಳ್ಳತನ ನಡೆದಿದೆ. ಕಳ್ಳರು ಲ್ಯಾಪ್ಟಾಪ್ ಮತ್ತು ಮೊಬೈಲ್ನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳರ ಕಳ್ಳತನದ ದೃಶ್ಯ ಸಿಸಿಟಿಪಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಇಂದಿನಿಂದ ಬೆಂಗಳೂರಲ್ಲಿ ಮತ್ತೆ ಆಪರೇಷನ್ ಬುಲ್ಡೋಜರ್ – ದೊಡ್ಡ ಕಟ್ಟಡಗಳು, ವಿಲ್ಲಾಗಳನ್ನು ಕೆಡವುತ್ತಾ BBMP?