ಚಾಮರಾಜನಗರ: ಜಮೀನೊಂದರಲ್ಲಿ ಪತ್ತೆಯಾದ ಭಾರೀ ಗಾತ್ರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ ದಾಸನಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರವೀಣ್ ಎಂಬವರ ಜಮೀನಿನಲ್ಲಿ ಸುಮಾರು 10 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಸಂತೇಮರಳ್ಳಿಯ ಸ್ನೇಕ್ ಮಹೇಶ್ ಹಾಗೂ ಅರಣ್ಯ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಮಹೇಶ್ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.
ಬಳಿಕ ಹೆಬ್ಬಾವನ್ನು ಅರಣ್ಯಾಧಿಕಾರಿಗಳ ಜೊತೆ ಬಿಳಿಗಿರಿರಂಗನಬೆಟ್ಟದ ಕಾಡಿಗೆ ಬಿಟ್ಟಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳು ಕಂಡುಬರುವುದು ಸಾಮಾನ್ಯವಾಗಿದೆ. ಆದರೆ ನಶಿಸಿ ಹೋಗುತ್ತಿರುವ ಭಾರೀ ಗಾತ್ರದ ಹೆಬ್ಬಾವುಗಳು ಕಾಣ ಸಿಗುವುದು ಬಲು ಅಪರೂಪ. ಇಂತಹ ಪ್ರಾಣಿಗಳನ್ನು ರಕ್ಷಿಸಿ ಉಳಿಸುವುದು ಅನಿವಾರ್ಯವಾಗಿದೆ.