Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಜೈಲಿನಲ್ಲಿ ಉಗ್ರ ಕೃತ್ಯ ಎಸಗಿ ಪರಾರಿ – ರುವಾಂಡದಲ್ಲಿ ಸೆರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗ್ಳೂರು ಜೈಲಿನಲ್ಲಿ ಉಗ್ರ ಕೃತ್ಯ ಎಸಗಿ ಪರಾರಿ – ರುವಾಂಡದಲ್ಲಿ ಸೆರೆ

Latest

ಬೆಂಗ್ಳೂರು ಜೈಲಿನಲ್ಲಿ ಉಗ್ರ ಕೃತ್ಯ ಎಸಗಿ ಪರಾರಿ – ರುವಾಂಡದಲ್ಲಿ ಸೆರೆ

Public TV
Last updated: November 28, 2024 7:24 pm
Public TV
Share
4 Min Read
Salman Rehman Khan Lashkar Terrorist Accused Of Terror Activities In Bengaluru Extradited From Rwanda 1
SHARE

– ರುವಾಂಡದ ರಾಜಧಾನಿ ಕಿಗಾಲಿಯಲ್ಲಿ ಸಲ್ಮಾನ್‌ ಬಂಧನ
– ಈ ವರ್ಷದ ಜನವರಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದ ಎನ್‌ಐಎ

ನವದೆಹಲಿ: ಬೆಂಗಳೂರು ಜೈಲಿನಲ್ಲಿ (Bengaluru Jail) ಉಗ್ರ ಕೃತ್ಯ ಎಸಗಿ ರುವಾಂಡಕ್ಕೆ (Rwanda) ಪರಾರಿಯಾಗಿದ್ದ ಲಷ್ಕರ್‌ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

ಸಲ್ಮಾನ್‌ ಖಾನ್ ಬಂಧಿತ ಉಗ್ರ. ರುವಾಂಡಾ ತನಿಖಾ ಬ್ಯೂರೋ (RIB), ಇಂಟರ್‌ಪೋಲ್ ಮತ್ತು ರಾಷ್ಟ್ರೀಯ ಕೇಂದ್ರ ಬ್ಯೂರೋಗಳ (NCBs) ಸಹಯೋಗದೊಂದಿಗೆ ಬುಧವಾರ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ಬಂಧನ ಮಾಡಲಾಗಿದೆ. ಇಂದು ರುವಾಂಡ ಉಗ್ರನನ್ನು ಭಾರತಕ್ಕೆ ಹಸ್ತಾಂತರಿಸಿದೆ.

ಬೆಂಗಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣದಲ್ಲಿ ಸಲ್ಮಾನ್ ಆರೋಪಿಯಾಗಿದ್ದಾನೆ. ಈತ ಉಗ್ರರಿಗೆ ಸ್ಫೋಟಕಗಳನ್ನು ಪೂರೈಸುವ ಮೂಲಕ ದುಷ್ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ.

JUST IN

Rwanda has extradited Salman Khan to India, where he will face prosecution for terrorism and related crimes. The transfer occurred this morning at Kigali International Airport.#RBANews pic.twitter.com/Gp6iQgfAZs

— Rwanda Broadcasting Agency (RBA) (@rbarwanda) November 27, 2024

ಪೋಸ್ಕೋ ಕೃತ್ಯ ಎಸಗಿ ಸಲ್ಮಾನ್‌ ಬೆಂಗಳೂರು ಜೈಲು ಸೇರಿದ್ದ. 2018 ಮತ್ತು 2022 ರ ಜೈಲುವಾಸದ ಅವಧಿಯಲ್ಲಿ ಜಿವಾವಾಧಿ ಶಿಕ್ಷೆಗೆ ಒಳಗಾಗಿದ್ದ ಉಗ್ರ ನಾಸೀರ್ (Naseer) ಸಂಪರ್ಕಕ್ಕೆ ಈತ ಬಂದಿದ್ದ. ಈತನ ಮಾತಿಗೆ ಮರುಳಾಗಿ ಮೂಲಭೂತವಾದ ಕಡೆಗೆ ಆಕರ್ಷಿತನಾಗಿದ್ದ. ಅಷ್ಟೇ ಅಲ್ಲದೇ ಸಹ ಕೈದಿಗಳನ್ನು ಸೆಳೆದು ಅವರನ್ನು ಉಗ್ರರನ್ನಾಗಿ ರೂಪಿಸುತ್ತಿದ್ದ.‌

 

 

#Rwanda ????????:

1. Salman Khan, was arrested on 09-09-24, by the Rwandan security and intelligence services.
Today, 27th Nov 2024, Rwanda has extradited Mr. Salman KHAN alias Salma of 30 years wanted by the Government of India for his association with a Terrorist group operating. pic.twitter.com/HknUO8MvS3

— ???? African Intelligence (@Afrikanintell) November 27, 2024

 

ಜೈಲಿನಿಂದ ಬಿಡುಗಡೆಯಾದ ಬಳಿಕ ಆತ ಉಗ್ರರ ಸಂಪರ್ಕ ಸಾಧಿಸಿ ಅವರಿಗೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳ ಸಂಗ್ರಹಣೆ ಮತ್ತು ವಿತರಣೆ ಮಾಡುವ ಮೂಲಕ ಸಹಕಾರ ನೀಡುತ್ತಿದ್ದ. ಭಯೋತ್ಪಾದನಾ ಕೃತ್ಯದಲ್ಲಿ ತನ್ನ ಹೆಸರು ಬೆಳಕಿಗೆ ಬರುತ್ತಿದ್ದಂತೆ ಸಲ್ಮಾನ್‌ ಭಾರತದಿಂದ ಪರಾರಿಯಾಗಿದ್ದ.

ಕಳೆದ ವರ್ಷದ ಅಕ್ಟೋಬರ್ 25 ರಂದು ಬೆಂಗಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣದ ತನಿಖೆಯನ್ನು ಸಿಸಿಬಿಯಿಂದ ಎನ್‌ಐಎ ವಹಿಸಿಕೊಂಡಿತ್ತು. ಸಲ್ಮಾನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು.

Salman Rehman Khan Lashkar Terrorist Accused Of Terror Activities In Bengaluru Extradited From Rwanda 2

 

ಈ ವರ್ಷ ಆಗಸ್ಟ್ 2 ರಂದು ಎನ್ಐಎ ಕೋರಿಕೆಯ ಮೇರೆಗೆ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡಿತ್ತು. ಈ ನೋಟಿಸ್‌ ಹಿನ್ನೆಲೆಯಲ್ಲಿ ರುವಾಂಡಾದ ಅಧಿಕಾರಿಗಳು ಸಲ್ಮಾನ್‌ನನ್ನು ಬಂಧಿಸಿ ಭಾರತೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ.

2024 ರಲ್ಲಿ ಇಂಟರ್‌ಪೋಲ್ ಒಳಗೊಂಡಂತೆ ಸಂಘಟಿತ ಪ್ರಯತ್ನದ ಮೂಲಕ ದೇಶ ಬಿಟ್ಟು ಪರಾರಿಯಾಗಿದ್ದ 26 ಮಂದಿಯನ್ನು ಭಾರತಕ್ಕೆ ತನಿಖಾ ಸಂಸ್ಥೆಗಳು ಕರೆತಂದಿವೆ.

ಏನಿದು ಪ್ರಕರಣ?
2023ರ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಐವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳ ಜೊತೆ ಜೈಲಿನಲ್ಲಿದ್ದ ಉಗ್ರ ಟಿ.ನಾಸೀರ್ (T Naseer) ಸಂಪರ್ಕ ಬೆಳೆಸಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು

ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು
ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು

ಈ ವರ್ಷದ ಜನವರಿ 12 ರಂದು ಎನ್‌ಐಎ ಈ ಪ್ರಕರಣದ ಸಂಬಂಧ 8 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದ ವಿಚಾರವನ್ನು ಎನ್‌ಐಎ ಉಲ್ಲೇಖಿಸಿತ್ತು.

ಚಾರ್ಜ್‌ಶೀಟ್‌ನಲ್ಲಿ ಏನಿತ್ತು?
ಆರ್‌ಟಿ ನಗರ ಮನೆಯಲ್ಲಿ ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು.

ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು.

 BENGALURU SUSPECTED TERRORIST 2

ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ.

ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿಕೊಂಡಿದ್ದರು ವಿಚಾರ ಅಂಶ ಚಾರ್ಜ್‌ಶೀಟ್‌ನಲ್ಲಿತ್ತು.

 

TAGGED:bengaluruBengaluru JailNIARwandaಎನ್‍ಐಎಬೆಂಗಳೂರುಬೆಂಗಳೂರು ಜೈಲುರುವಾಂಡ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
4 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
5 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
5 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
5 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
6 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?